ಸುವರ್ಣ ತ್ರಿಭುಜ ಬೋಟ್ ಮುಳುಗಡೆ ಪ್ರಕರಣ: ವಿಷ ಸೇವಿಸಿದ್ದ ಯುವಕ ಸಾವು
Team Udayavani, May 17, 2019, 12:20 PM IST
ಮಲ್ಪೆ: ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನಾಪತ್ತೆಯಾಗಿದ್ದ ಭಟ್ಕಳದ ಮೀನುಗಾರ ರಮೇಶ್ ಮೊಗೇರ ಅವರ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಹೋದರ ಚಂದ್ರಶೇಖರ ಮೊಗೇರ (30) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಬೋಟ್ ನಾಪತ್ತೆಯಾದ ದಿನದಿಂದ ಖನ್ನತೆಗೆ ಒಳಗಾಗಿದ್ದ ಅವರು ನಾಲ್ಕು ದಿನಗಳ ಹಿಂದೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೂರು ದಿನಗಳ ಬಳಿಕ ನೆರೆಮನೆಯವರಲ್ಲಿ ವಿಷ ಸೇವನೆಯ ಬಗ್ಗೆ ಮಾಹಿತಿ ನೀಡಿದ್ದರು. ಅಷ್ಟರಲ್ಲಿ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಅವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಷ ರಕ್ತದಲ್ಲಿ ಸೇರಿ ಲಿವರ್, ಕಿಡ್ನಿ ವೈಫಲ್ಯಗೊಂಡಿದ್ದು ತೀವ್ರ ರಕ್ತಸ್ರಾವ ಆಗಿದ್ದರಿಂದ ಗುರುವಾರ ಬೆಳಗ್ಗೆ ಚಂದ್ರಶೇಖರ್ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.
ಎರಡು ಸಾವಿಗೆ ಯಾರು ಹೊಣೆ ?
ಬೋಟ್ ಅವಘಡ ಸುದ್ದಿ ಕೇಳಿ ಒಬ್ಬ ಮಗನ ಚಿಂತೆಯಲ್ಲೇ ಹಾಸಿಗೆ ಹಿಡಿದು ಕಣ್ಣೀರಿನಲ್ಲೆ ಬದುಕುತ್ತಿರುವ ವೃದ್ಧ ತಂದೆ ತಾಯಿಗೆ ಇನ್ನೊಬ್ಬ ಮಗನ ಸಾವಿನ ಸುದ್ದಿ ಕೇಳಿ ಆಕಾಶವೇ ಕಳಚಿ ಬಿದ್ದಂತಾಗಿದ್ದು, ಮನೆ ಮಂದಿಯ ಆಕ್ರಂದನ ಮುಗಿಲು ಮುಟ್ಟಿದೆ. ಮೊದಲೇ ಮನೆಯ ಪರಿಸ್ಥಿತಿ ಹೇಳುವ ಹಾಗೆ ಇಲ್ಲ, ಮನೆಯಲ್ಲಿ ಯಾರೂ ಸರಿಯಾಗಿ ಊಟ, ತಿಂಡಿ ಮಾಡುತ್ತಿಲ್ಲ. ಪರಿಹಾರ ಕೊಟ್ಟ ಹಣವನ್ನು ತಿನ್ನಲು ಆಗುತ್ತದೆಯೇ? ನಮ್ಮವರು ವಾಪಸ್ ಮರಳಿ ಬರುವರೇ? ಒಂದೇ ಮನೆಯಲ್ಲಿ ಎರಡು ಸಾವು ನಡೆಯಿತು. ಈ ಸಾವಿಗೆ ಯಾರು ಹೊಣೆ ಎಂದು ಹೇಳುತ್ತ ಚಂದ್ರಶೇಖರ್ ಅವರ ಭಾವ ಶ್ರೀಧರ್ ಬಾವುಕರಾಗುತ್ತಾರೆ.
ಕಳಚಿದ ಆಧಾರ ಸ್ತಂಭ
ಭಟ್ಕಳದ ಶನಿಯಾರ ಮೊಗೇರ ದಂಪತಿಗಳಿಗೆ ರಮೇಶ್ ಮೊಗೇರ ಮತ್ತು ಚಂದ್ರಶೇಖರ್ ಮೊಗೇರ ಸೇರಿದಂತೆ, ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇಬ್ಬರು ಹೆಣ್ಣುಮಕ್ಕಳಿಗೆ, ಹಿರಿಯ ಸಹೋದರನಿಗೆ ವಿವಾಹವಾಗಿದೆ. ನಾಪತ್ತೆಯಾಗಿರುವ ರಮೇಶ್ ಮತ್ತು ಸಾವನ್ನಪ್ಪಿದ ಚಂದ್ರಶೇಖರ್ ಬಡ ಕುಟುಂಬಕ್ಕೆ ಮುಖ್ಯ ಆಧಾರಸ್ತಂಭವಾಗಿದ್ದರು. ಇದೀಗ ಕುಟುಂಬದ ಎರಡು ಆಧಾರ ಸ್ತಂಭವೇ ಕಳಚಿ ಬಿದ್ದಂತಾಗಿದೆ.
ಮೇ 21ರಂದು ಮೀನುಗಾರರ ಸಭೆ
ಕುಮಟಾದಲ್ಲಿ ಮೇ 21ರಂದು ಉ.ಕ. ಜಿಲ್ಲಾ ಮೀನುಗಾರರ ಸಭೆ ಕರೆಯಲಾಗಿದೆ. ಕೇಂದ್ರ ಸರಕಾರ ಮೀನುಗಾರರಿಗೆ ಗರಿಷ್ಠ ಪರಿಹಾರವನ್ನು ನೀಡಬೇಕು. ಅವಘಡಕ್ಕೆ ಕಾರಣನಾದ ನೌಕಾಪಡೆಯ ಅಧಿಕಾರಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಬಗ್ಗೆ ಒತ್ತಾಯ. ಇದೇ ಮೊದಲಾದ ವಿಷಯಗಳ ಚರ್ಚೆ ನಡೆಯಲಿದೆ. ಬೇಡಿಕೆಗಳಿಗೆ ಕೇಂದ್ರದಿಂದ ಸೂಕ್ತ ಸ್ಪಂದನೆ ದೊರೆಯದಲ್ಲಿ ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲಾಗುವುದು ಎಂದು ಜಿಲ್ಲಾ ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷ ಗಣಪತಿ ಮಾಂಗ್ರೆ ತಿಳಿಸಿದ್ದಾರೆ.
ಮೇಲೆತ್ತಿದರೆ ಕಳೇಬರ ಸಿಗಬಹುದು
ರಾಜ್ಯ ಸರಕಾರ ಪರಿಹಾರ ಅಂತ ಏನೋ ಮಾಡಿದ್ರು. ಕೇಂದ್ರದವರು ಇನ್ನೂ ಸುಮ್ಮನೆ ಕುಳಿತುಕೊಂಡಿದ್ದಾರಲ್ಲಾ, ನೌಕಾಪಡೆ ಮೂಲಕ ಬೋಟ್ ಎತ್ತುವ ಕೆಲಸವನ್ನಾದರೂ ಅವರು ಮಾಡಬೇಕಲ್ಲ. ಬೋಟ್ ಪತ್ತೆ ಹಚ್ಚಿದ ನೌಕಾಪಡೆಗೆ ಅದನ್ನು ಸಮುದ್ರದಾಳದಿಂದ ಮೇಲಕ್ಕೆ ಎತ್ತುವುದು ದೊಡ್ಡ ಕೆಲಸವೇನಲ್ಲ. ನೌಕಾಪಡೆಯವರು ಮನಸ್ಸು ಮಾಡಿದರೆ 5 ನಿಮಿಷದಲ್ಲಿ ಬೋಟ್ ಮೇಲೆತ್ತಬಹುದು. ಮೀನುಗಾರರ ಕಳೇಬರವಾದರೂ ಸಿಗಬಹುದು.
-ಗಣಪತಿ ಮಾಂಗ್ರೆ, ಕಾರವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ