ಇ-ಕೆವೈಸಿ ಪ್ರಕ್ರಿಯೆ ಮಾರ್ಚ್‌ವರೆಗೆ ವಿಸ್ತರಣೆ

ಜ. 5ರಿಂದ 7ರವರೆಗೆ ಸರ್ವರ್‌ ಅಪ್‌ಡೇಟ್‌ ಕಾರಣದಿಂದ ಸ್ಥಗಿತ

Team Udayavani, Jan 9, 2020, 4:41 AM IST

13

ಕಾರ್ಕಳ: ಪಡಿತರ ಚೀಟಿಯಲ್ಲಿನ ಗ್ರಾಹಕರನ್ನು ಗುರುತಿಸುವ ಇ-ಕೆವೈಸಿ (ನೋ ಯುವರ್‌ ಕಸ್ಟಮರ್‌) ಪ್ರಕ್ರಿಯೆಗೆ ನಾನಾ ಅಡ್ಡಿ ಆತಂಕಗಳು ಬಂದ ಹಿನ್ನೆಲೆಯಲ್ಲಿ ಅಂತಿಮ ಗಡುವನ್ನು ಮಾ.31ರವರೆಗೆ ಕಲ್ಪಿಸಲಾಗಿದೆ.

ಈ ಮೊದಲು ಜ.10ರಂದು ಇ-ಕೆವೈಸಿ ಅಪ್ಡೆàಟ್‌ಗೆ ಅಂತಿಮ ದಿನ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಘೋಷಿಸಿದ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ನಿತ್ಯ ಪಡಿತರ ಚೀಟಿದಾರರ ಸರತಿ ಸಾಲು ಇತ್ತು. ಇ-ಕೆವೈಸಿ ಮಾಡದಿದ್ದರೆ ಪಡಿತರ ಲಭಿಸುವುದಿಲ್ಲ ಎಂದು ಜನತೆ ಆತಂಕಗೊಂಡಿದ್ದು ಅಪ್ಡೆಟ್‌ಗೆ ಸಾಲುಗಟ್ಟಿ ಆಗಮಿಸಿದ್ದರು.

ಕೈ ಕೊಟ್ಟ ಸರ್ವರ್‌
ಕಾರ್ಕಳ, ಹೆಬ್ರಿ ತಾಲೂಕು ಸೇರಿದಂತೆ ರಾಜ್ಯಾದ್ಯಂತ ಅಪ್ಡೆàಟ್‌ಗೆ ಇದ್ದ ಸರ್ವರ್‌ ಸಮಸ್ಯೆಯಿಂದಾಗಿ ಪ್ರಕ್ರಿಯೆ ನಿಧಾನಗೊಂಡಿತ್ತು. ಜತೆಗೆ ಹೆಚ್ಚಿನ ಕಡೆಗಳಲ್ಲಿ ಪ್ರಕ್ರಿಯೆ ಸುಗಮವಾಗಿ ಆಗದ್ದರಿಂದ ಜನರಿಗೆ ಆತಂಕವಿತ್ತು. ಇದರೊಂದಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ನೀಡುವುದು ಮತ್ತು ಅಪ್ಡೆàಟ್‌ ಮಾಡುವುದು ಒಟ್ಟಿಗೆ ಆಗಬೇಕಾದ್ದರಿಂದ ಪ್ರಕ್ರಿಯೆ ನಿಧಾನಗೊಳ್ಳಲು ಕಾರಣವಾಗಿತ್ತು.

ಪರದಾಟ-ಅಲೆದಾಟ
ನ್ಯಾಯಬೆಲೆ ಅಂಗಡಿಯಲ್ಲಿ ಜ. 1ರಿಂದ 5ರವರೆಗೆ ನಿತ್ಯ ಕ್ಯೂ ಕಂಡುಬಂದಿತ್ತು. ಕುಟುಂಬ ಸದಸ್ಯರೆಲ್ಲರೂ ಒಟ್ಟಾಗಿ ಥಂಬ್‌ ನೀಡಲು ಹೋಗುತ್ತಿರುವುದರಿಂದ ಎಲ್ಲ ಸದಸ್ಯರು ತಮ್ಮ ಎಂದಿನ ಕಾರ್ಯಚಟುವಟಿಕೆ ಸ್ಥಗಿತಗೊಳಿಸಬೇಕಾಗಿದೆ. ಎಲ್ಲರೂ ಒಟ್ಟಾಗಿ ಹೋಗಿ ಅಲ್ಲಿ ಕ್ಯೂ ನಿಂತರೂ ತಮ್ಮ ಕಾರ್ಯವಾಗುವ ಖಾತ್ರಿಯಿಲ್ಲ. ಇದರಿಂದ ಮತ್ತೂಂದು ದಿನ ತೆರಳುವ ಅನಿವಾರ್ಯತೆ ಇದೆ. ಇದರಿಂದ ಜನಸಾಮಾನ್ಯರ ಪಾಡು ಹೇಳತೀರದಾಗಿದೆ.

ಇಲಾಖೆ ಸ್ಪಷ್ಟನೆ
ಇ-ಕೆವೈಸಿ ಅಪ್ಡೆಟ್‌ ಆಗದಿದ್ದರೆ ಪಡಿತರ ಸಿಗುವ ಬಗ್ಗೆ ಊಹಾಪೋಹಗಳು ಎದ್ದಿದ್ದು ಜನರು ಆತಂಕಗೊಳ್ಳಲು ಕಾರಣವಾಗಿತ್ತು. ಆದರೆ ಇ-ಕೆವೈಸಿ ನೀಡದಿದ್ದಲ್ಲಿ ಪಡಿತರ ಪಡೆಯಲು ಅನರ್ಹರಾಗುತ್ತಾರೆಯೇ ಹೊರತು ಸದಸ್ಯತ್ವ ರದ್ದಾಗದು ಎಂದು ಇಲಾಖೆ ಹೇಳಿದೆ. ಕೆಲವೊಂದು ಪಡಿತರ ಚೀಟಿಗಳಲ್ಲಿ ನಿಧನ ಹೊಂದಿದವರ ಹೆಸರು ಡಿಲೀಟ್‌ ಆಗದೇ ಉಳಿದಿದೆ. ಬಿಪಿಎಲ್‌ ಅಲ್ಲದವರ ಹೆಸರೂ ಪಟ್ಟಿಯಲ್ಲಿದೆ. ರಾಜ್ಯದಲ್ಲಿ ಹತ್ತಾರು ಕೋಟಿ ರೂ. ಮೌಲ್ಯದ ಪಡಿತರ ಸಾಮಗ್ರಿ ಗ್ರಾಹಕರಲ್ಲದವರ ಪಾಲಾಗುವುದನ್ನು ನಿಯಂತ್ರಿಸುವ ಉದ್ದೇಶದಿಂದ ಆಹಾರ ನಾಗರಿಕ ಸರಬರಾಜು ಇಲಾಖೆ ಇ-ಕೆವೈಸಿ ಜಾರಿಗೊಳಿಸಿದೆ. ಈ ಮೂಲಕ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿ ಗ್ರಾಹಕರ ಬೆರಳಚ್ಚು ಪಡೆಯಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಶೇ.54ರಷ್ಟು ಅಪ್ಡೆಟ್‌ ಬಾಕಿ
ಕಾರ್ಕಳ, ಹೆಬ್ರಿಯಲ್ಲಿ ಈ ವರೆಗೆ ಶೇ.46ರಷ್ಟು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೇ.54ರಷ್ಟು ಮಾತ್ರ ಬಾಕಿ ಉಳಿದಿದೆ. ಸೇವಾ ಸಿಂಧು ಕಚೇರಿಯಲ್ಲೂ ಕುಟುಂಬದ ಒಬ್ಬ ಸದಸ್ಯ ಆಹಾರ ಇಲಾಖೆ ವೆಬ್‌ಸೈಟ್‌ನಲ್ಲಿ ಬೆರಳಚ್ಚು ನೀಡಿದಾಗ ಉಳಿದ ಸದಸ್ಯರ ಮೊಬೈಲ್‌ ನಂಬರ್‌ ಆಧಾರ್‌ ಕಾರ್ಡ್‌ ನಲ್ಲಿ ದಾಖಲಾಗಿದ್ದರೆ, ಅವರಿಗೆ ಒ.ಟಿ.ಪಿ. ಲಭಿಸುವುದು. ಅದನ್ನು ವೆಬ್‌ಸೈಟ್‌ನಲ್ಲಿ ನಮೂದಿಸಿದರೆ ಇ- ಕೆವೈಸಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣವಾಗಲಿದೆ.

ಅವಧಿ ವಿಸ್ತರಣೆ
ಸರ್ವರ್‌ ಅಪ್‌ಡೇಟ್‌ ಆಗುತ್ತಿದ್ದ ಹಿನ್ನೆಲೆಯಲ್ಲಿ ಜ. 5ರಿಂದ 7ರವರೆಗೆ ಇ-ಕೆವೈಸಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಇಲಾಖೆ ಮಾ. 31ರವರೆಗೆ ಆಧಾರ್‌ ಜೋಡಣೆಗಾಗಿ ಅವಧಿ ವಿಸ್ತರಿಸಿದೆ. ಹೀಗಾಗಿ ಪಡಿತರ ಚೀಟಿದಾರರು ಯಾವುದೇ ಆತಂಕ ಗೊಂದಲ ಪಡಬೇಕಾಗಿಲ್ಲ.
-ಆಶಾ, ಆಹಾರ ನಿರೀಕ್ಷಕರು, ತಾಲೂಕು ಕಚೇರಿ-ಕಾರ್ಕಳ

ಮೂರು ದಿನ ಅಲೆದಾಡಿದೆ
ಥಂಬ್‌ ನೀಡುವ ಉದ್ದೇಶದಿಂದ ಮಿಯ್ನಾರು ನ್ಯಾಯಬೆಲೆ ಅಂಗಡಿಗೆ ನಿರಂತರವಾಗಿ ಮೂರು ದಿನ ಅಲೆದಾಡಿದೆ. ಯಾವಾಗಲೂ ಅಲ್ಲಿನ ಸಿಬಂದಿ ಸರ್ವರ್‌ ಸಮಸ್ಯೆ ಎಂದು ಹೇಳಿದ್ದಾರೆ. ಮೂರು ದಿನದ ಸಂಬಳ ನಷ್ಟವಾಯಿತೇ ವಿನಃ ನನಗೆ ಯಾವೊಂದು ಪ್ರಯೋಜನವಾಗಿಲ್ಲ.
-ಜಯರಾಮ, ಮಿಯ್ನಾರು

ಸಾಲು ನೋಡಿಯೇ ವಾಪಸಾದೆ
ಶನಿವಾರ ಬೆಳಗ್ಗೆ ನ್ಯಾಯಬೆಲೆ ಅಂಗಡಿ ಎದುರು ಕಂಡುಬಂದ ಸರತಿ ಸಾಲು ನೋಡಿ ವಾಪಸಾದೆ. ಪ್ರತಿದಿನವೂ ಇದೇ ಪರಿಸ್ಥಿತಿ. ಇ-ಕೆವೈಸಿ ಗೊಂದಲ ನಿವಾರಿಸಿ, ಜನರಲ್ಲಿರುವ ಆತಂಕ ದೂರ ಮಾಡುವಲ್ಲಿ ಸಂಬಂಧಪಟ್ಟ ಇಲಾಖೆ ಮುಂದಾಗಬೇಕು.
-ಜಗದೀಶ್‌ ಪೂಜಾರಿ, ಕುಂಟಾಡಿ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.