ಸಂಚಾರಕ್ಕೆ ಅಯೋಗ್ಯವಾದ ಕಾಪು ಪೇಟೆಯ ಮುಖ್ಯ ರಸ್ತೆ


Team Udayavani, Oct 30, 2019, 5:13 AM IST

kaup-city

ಕಾಪು: ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ರಸ್ತೆಯಲ್ಲೇ ಹರಿದು ಕಾಪು ಪೇಟೆಯ ಮುಖ್ಯ ರಸ್ತೆಯ ತುಂಬೆಲ್ಲ ಹೊಂಡ – ಗುಂಡಿಗಳು ಬಿದ್ದಿವೆ. ಇದರಿಂದಾಗಿ ತಾಲೂಕು ಕೇಂದ್ರ, ಪುರಸಭೆಗೆ ಬರುವವರ ಸಂಚಾರಕ್ಕೆ ಸಂಚಕಾರ ಎದುರಾಗಿದೆ.

ಪಿಡಬ್ಲ್ಯುಡಿ ವ್ಯಾಪ್ತಿಗೆ ಬರುವ ಕಾಪು ಹಳೇ ಎಂಬಿಸಿ ರಸ್ತೆಯ ಮಧ್ಯದಲ್ಲಿ ಸಿಗುವ ಕಾಪು ಹೊಸ ಮಾರಿಗುಡಿ ರಸ್ತೆಯಿಂದ ಪೊಲೀಸ್‌ ವೃತ್ತ ನಿರೀಕ್ಷಕರ
ಕಚೇರಿ ಬಳಿಯ ಸಿಂಡಿಕೇಟ್‌ ಬ್ಯಾಂಕ್‌ ಮುಂಭಾಗದ ವರೆಗಿನ ಸುಮಾರು 300 ಮೀ. ರಸ್ತೆಯ ಉದ್ದಕ್ಕೂ ಹೊಂಡ, ಗುಂಡಿಗಳು ಬಿದ್ದಿದ್ದು ಜಲ್ಲಿಗಳು ಕಿತ್ತು ಹೋಗಿವೆ.

ಸಮರ್ಪಕ ಚರಂಡಿಯ ಕೊರತೆಯೊಂದಿಗೆ, ಎರಡು ವರ್ಷಗಳ ಹಿಂದೆ ಒಳಚರಂಡಿ ಯೋಜನೆಗಾಗಿ ಅಗೆದ ರಸ್ತೆಯನ್ನು ಕೂಡ ಸಮರ್ಪಕವಾಗಿ ಪುನರ್‌ ನಿರ್ಮಿಸದೇ ಇರುವ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಪೇಟೆಯಲ್ಲಿ ಕಟ್ಟಡ ನಿರ್ಮಾಣದ ಸಂದರ್ಭ ಕಟ್ಟಡಗಳ ಮಾಲಕರು ಸೆಟ್‌ಬ್ಯಾಕ್‌ ನಿಯಮಗಳನ್ನು ಪಾಲಿಸದೇ ಇರುವುದರಿಂದ ಮಳೆ ನೀರು ರಸ್ತೆಯಲ್ಲಿಯೇ ಹರಿದು ಹೋಗುವಂತಾಗಿದೆ ಎನ್ನುತ್ತಾರೆ ಸ್ಥಳೀಯರು.

ಮಳೆ ನೀರು ನಿಂತು ರಸ್ತೆಯೇ ಕಾಣದೇ ಹಲವು ಅಪಘಾತಗಳು ನಡೆದಿರುವ ಉದಾಹರಣೆಗಳೂ ಇವೆ. ಮಳೆ ಬಂದಾಗ ಪಾದಚಾರಿಗಳು ಮತ್ತು ಅಂಗಡಿಗಳ ಮಂದಿಗೆ ನಿತ್ಯ ಕೆಸರಿನ ಸಿಂಚನವಾದರೆ, ಬಿಸಿಲಿರುವಾಗ ರಸ್ತೆಯ ಸುತ್ತಲೂ ಧೂಳು ಆವರಿಸಿ ತೊಂದರೆಯಾಗುತ್ತಿದೆ. ಕಾಪು ತಾಲೂಕಿನ ಹೃದಯ ಭಾಗದ ರಸ್ತೆಯೇ ಹೀಗಾದ್ರೆ ಉಳಿದ ರಸ್ತೆಗಳ ಪಾಡೇನು ಎಂಬ ಪ್ರಶ್ನೆಯೂ ಸಾರ್ವಜನಿಕರಿಂದ ಕೇಳಿಬರುತ್ತಿದ್ದು, ಜನಪ್ರತಿನಿಧಿಗಳಾಗಲೀ ಅಥವಾ ಅಧಿಕಾರಿಗಳಾಗಲೀ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರುತ್ತಿದ್ದಾರೆ.

ಜಲ್ಲಿ ಕಲ್ಲುಗಳ ರಾಶಿ
ಕಾಪು ಪೇಟೆಯ ಮುಖ್ಯ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ. ಇವುಗಳನ್ನು ತಪ್ಪಿಸಲು ಹೋಗಿ ಬೈಕ್‌ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಕಣ್ಣಮುಂದೆಯೇ ನಡೆದಿವೆ. ಕೆಲವು ಕಡೆಗಳಲ್ಲಿ ಜಲ್ಲಿ ಕಲ್ಲುಗಳು ರಾಶಿ ಬಿದ್ದಿದ್ದು, ವಾಹನಗಳ ಚಕ್ರಗಳಿಗೆ ಸಿಲುಕಿ ಅಂಗಡಿಗಳ ಗಾಜುಗಳು ಕೂಡ ಪುಡಿಯಾಗಿವೆ. ಪುರಸಭೆ ಇಲ್ಲಿನ ಸಮಸ್ಯೆಗಳಿಂದ ಜನರಿಗೆ ಮುಕ್ತಿ ದೊರಕಿಸಿಕೊಡಬೇಕಿದೆ.
-ಸುಬ್ರಹ್ಮಣ್ಯ ಐತಾಳ್‌, ಉದ್ಯಮಿ

75 ಲಕ್ಷ ರೂ. ಅನುದಾನ ಬಿಡುಗಡೆ
ಕಾಪು ಪೇಟೆಯ ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ವಿವಿಧ ಸಮಸ್ಯೆಗಳು ಎದುರಾಗಿವೆ. ಈ ಬಗ್ಗೆ ಪುರಸಭೆಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಇಲ್ಲಿನ ಹೊಂಡ ಮುಚ್ಚಲು ಪುರಸಭೆ ಕಾರ್ಯೋನ್ಮುಖವಾಗಿದ್ದು, ಮಳೆ ನಿಂತ ಕೂಡಲೇ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸುವ ಭರವಸೆ ದೊರಕಿದೆ. ಈ ರಸ್ತೆಯು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಮುತುವರ್ಜಿ ವಹಿಸಿ 75 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದು, ಮಳೆಯ ಕಾರಣ ಕಾಮಗಾರಿ ವಿಳಂಬವಾಗಿದ್ದು, ಶೀಘ್ರ ನಡೆಯಬಹುದೆಂಬ ನಿರೀಕ್ಷೆ ಇದೆ.
– ಅನಿಲ್‌ ಕುಮಾರ್‌, ವಾರ್ಡ್‌ ಸದಸ್ಯರು, ಕಾಪು ಪುರಸಭೆ

ಸ್ಪಂದಿಸುವ ಭರವಸೆ
ಕಾಪು ಪೇಟೆಯ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಯ ಅಧೀನಕ್ಕೆ ಬರುತ್ತದೆ. ಅದರೊಂದಿಗೆ ಇಲ್ಲಿ ಒಳಚರಂಡಿ ಯೋಜನೆಯ ಕಾಮಗಾರಿಯೂ ನಡೆದಿರುವುದರಿಂದ ಕೆಲವೊಂದು ಸಮಸ್ಯೆಗಳು ಎದುರಾಗಿವೆ. ರಸ್ತೆ ಅವ್ಯವಸ್ಥೆ ಬಗ್ಗೆ ಎರಡೂ ಇಲಾಖೆಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಎರಡೂ ಇಲಾಖೆಗಳೂ ಈ ಬಗ್ಗೆ ಸ್ಪಂದಿಸುವ ಭರವಸೆ ನೀಡಿವೆ. ರಸ್ತೆ ಬದಿಯ ಚರಂಡಿಗಳು ಹೂಳು ತುಂಬಿ ಮುಚ್ಚಲ್ಪಟ್ಟಿರುವುದರಿಂದ ಹೀಗಾಗಿದೆ. ಮಳೆ ಮುಗಿದ ಅನಂತರ ತೇಪೆ ಕಾರ್ಯ ನಡೆಸಲಾಗುವುದು. ಮುಂದಿನ ಮಳೆಗಾಲದ ಮೊದಲು ಚರಂಡಿಯನ್ನು ತೆರೆದು ಕೊಟ್ಟು ಪೂರ್ಣ ಕಾಮಗಾರಿ ನಡೆಸಲಾಗುವುದು.
– ವೆಂಕಟೇಶ್‌ ನಾವಡ, ಮುಖ್ಯಾಧಿಕಾರಿ, ಕಾಪು ಪುರಸಭೆ

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.