ಸಂಚಾರ ನಿಯಮ ಕಟ್ಟುನಿಟ್ಟಿನ ಪಾಲನೆ: ಜಿಲ್ಲಾಧಿಕಾರಿ ಕರೆ
Team Udayavani, Dec 13, 2019, 11:12 PM IST
ಉಡುಪಿ: ವಾಹನ ಚಾಲಕರು ನಿಯಮಗಳಿಗೆ ಅನುಸಾರವಾಗಿ ವಾಹನ ಚಲಾಯಿಸಿ ಅಪಘಾತ ರಹಿತ ಸುಗಮ ಸಂಚಾರಕ್ಕೆ ಸಹಕಾರ ನೀಡಬೇಕು. ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗದಿತ ಲೇನ್ಗಳಲ್ಲಿ, ನಿಗದಿತ ವೇಗ ಮಿತಿಯಲ್ಲಿ ಚಲಾಯಿಸುವಂತೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಕರೆ ನೀಡಿದ್ದಾರೆ.
ಹೆದ್ದಾರಿಯ ಮೊದಲನೇ ಪಥದಲ್ಲಿ ದ್ವಿಚಕ್ರ ವಾಹನಗಳನ್ನು ಅತೀ ವೇಗವಾಗಿ ಅಜಾಗರೂಕತೆಯಿಂದ ಚಲಾಯಿಸುವುದು ಸಾಮಾನ್ಯವಾಗಿ ಕಂಡುಬರುತ್ತಿದೆ. ಇದರಿಂದಾಗಿ ತೀವ್ರತರವಾದ ಅಪಘಾತಗಳು ಹೆಚ್ಚುತ್ತಿದ್ದು, ಆಗಾಗ್ಗೆ ಪ್ರಾಣಹಾನಿಗಳಾಗುತ್ತಿವೆ.
ದ್ವಿಚಕ್ರ ವಾಹನ ಚಾಲಕರು ರಸ್ತೆಯ ಎಡಭಾಗದಲ್ಲಿ ಮಾತ್ರ ವಾಹನ ಚಲಾಯಿಸಬೇಕು. ರಸ್ತೆ ಮೇಡಿಯನ್ ಓಪನಿಂಗ್ ಇದ್ದಲ್ಲಿ ಮಾತ್ರ ತಿರುಗಬೇಕು. ಅದು ದೂರ ಇದೆ ಎಂಬ ಕಾರಣಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುವುದು ಸರಿಯಲ್ಲ. ಇಂತಹ ನಿಯಮ ಬಾಹಿರ ಚಾಲನೆಯಿಂದ ಸುಗಮ ಸಂಚಾರಕ್ಕೆ ಅಡೆತಡೆಯಾಗುವುದಲ್ಲದೆ ಅಪಘಾತಕ್ಕೆ ಕಾರಣವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?