ಚಿಣ್ಣರೇ ಎಳೆಯಲಿದ್ದಾರೆ ಉಡುಪಿ ಬ್ರಹ್ಮರಥ
ಸುವರ್ಣ ಗೋಪುರ ಸಮರ್ಪಣೆಗೆ ಪೂರ್ವಭಾವಿ ಸಂಭ್ರಮ
Team Udayavani, May 20, 2019, 11:24 AM IST
ಉಡುಪಿ : ಪರ್ಯಾಯ ಪಲಿಮಾರು ಶ್ರೀಗಳ ಮಹತ್ವಾಕಾಂಕ್ಷಿ ಯೋಜನೆಯಾದ ಶ್ರೀಕೃಷ್ಣ ಮಠದ ಸುವರ್ಣ ಗೋಪುರ ಸಮರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಚಿಣ್ಣರ ಸಂತರ್ಪಣೆಯ ಶಾಲೆಗಳ 5 ಸಾವಿರ ಪುಟಾಣಿಗಳು ಬ್ರಹ್ಮರಥವನ್ನು ಎಳೆಯಲಿದ್ದಾರೆ.
ಜೂ. 3ರಂದು ಈ ದಾಖಲೆಯ ಕಾರ್ಯಕ್ರಮ ನಡೆಯಲಿದೆ. ಅಂದು ಚಿಣ್ಣರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಬಳಿಕ ಸಂಜೆ ರಥಬೀದಿಯಲ್ಲಿ ನಡೆಯಲಿರುವ ರಥೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯಲ್ಲಿ 120 ಚಿಣ್ಣರ ಸಂತರ್ಪಣೆಯ ಶಾಲೆಗಳಲ್ಲಿ 15,000 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಅವರಲ್ಲಿ 4ರಿಂದ 7 ತರಗತಿಯ ವರೆಗಿನ ಐದು ಸಾವಿರ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜೂ.1ರಂದು ಕಲಶ ಮೆರವಣಿಗೆ
ಶ್ರೀ ಕೃಷ್ಣಮಠದ ಸುವರ್ಣ ಗೋಪುರದ ಸಮರ್ಪಣೆಗೆ ಪೂರ್ವಭಾವಿಯಾಗಿ ಜೂ. 1ರಂದು ಗರ್ಭಗುಡಿಯ ಸುವರ್ಣ ಲೇಪಿತ ಕಲಶಗಳನ್ನು ಜೋಡುಕಟ್ಟೆಯಿಂದ ಮೆರವಣಿಗೆಯ ಮೂಲಕ ಮಠಕ್ಕೆ ತರಲಾಗುತ್ತದೆ. ಜೂ. 6ರಂದು ಸುವರ್ಣ ಗೋಪುರದ ಪ್ರತಿಷ್ಠಾಪನೆ, ಜೂ. 9ರಂದು ಬ್ರಹ್ಮ ಕಲಶೋತ್ಸವ ನಡೆಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ