“ಉಡುಪಿ ಎಂದರೆ ಡಾ| ವಿ.ಎಸ್‌.ಆಚಾರ್ಯ ನೆನಪು’


Team Udayavani, Jul 8, 2019, 5:28 AM IST

060719ASTRO09

ಉಡುಪಿ: ಉಡುಪಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಡಾ| ವಿ.ಎಸ್‌.ಆಚಾರ್ಯ ಅವರ ಪಾತ್ರ ಮಹತ್ತರವಾದುದು. ಈ ಕಾರಣಕ್ಕಾಗಿಯೇ ದೇಶದ ಹಲವು ನಾಯಕರು ಉಡುಪಿ ಅಂದಾಕ್ಷಣ ವಿ.ಎಸ್‌.ಆಚಾರ್ಯ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ದೀನದಯಾಳ್‌ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ 2019ರ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಸ್ಮರಣ ಪಾರಿತೋಷಕ ಹಾಗೂ ಡಾ| ವಿ.ಎಸ್‌.ಆಚಾರ್ಯ ಸ್ಮರಣ ಪಾರಿತೋಷಕ, ಗಾಯತ್ರಿ ಸ್ಮರಣ ಪಾರಿತೋಷಕ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯ ಅವರು ದೇಶ ಯುವ ತತ್ವದಲ್ಲಿ ಮುನ್ನಡೆಯಬೇಕು ಎಂಬುವುದಕ್ಕೆ ಭದ್ರ ಬುನಾದಿ ಹಾಕಿದವರು. ಡಾ| ವಿ.ಎಸ್‌.ಆಚಾರ್ಯ ಕೂಡ ಇದೇ ಹಾದಿಯಲ್ಲಿ ಮುನ್ನಡೆದವರು. ಕಷ್ಟದ ಸಂದರ್ಭದಲ್ಲಿ ಪಕ್ಷವನ್ನು ಕಟ್ಟಿದ್ದರು. ಕಠಿನ ಪರಿಶ್ರಮದ ಮೂಲಕ ಅವರು ಮೇಲೆ ಬಂದವರು. ತಾನು ರಾಜಕೀಯ ಜೀವನ ಪ್ರಾರಂಭಿಸಿದಾಗಲೂ ಹುರಿದುಂಬಿಸುವ ಕೆಲಸ ಮಾಡಿದ್ದರು. ಭಾರತೀಯ ಜನಸಂಘವನ್ನು ಬೆಳೆಸಿರುವ ರೀತಿ ನಮ್ಮನ್ನು ಈ ಹಂತಕ್ಕೆ ಬೆಳೆದು ನಿಲ್ಲಿಸಿದೆ ಎಂದರು.

ಶಾಸಕ ಕೆ.ರಘುಪತಿ ಭಟ್‌ ಮಾತನಾಡಿ, ಅಭಿವೃದ್ಧಿ ಚಿಂತನೆಗಳು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನಗರದ ಆದಾಯ ವೃದ್ಧಿಸುವಲ್ಲಿ ಡಾ| ವಿ.ಎಸ್‌.ಆಚಾರ್ಯ ಅವರ ಕೊಡುಗೆ ಮಹತ್ತರವಾದುದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿರಿಯ ಮುಖಂಡರಾದ ಸೋಮಶೇಖರ ಭಟ್‌, ಗುಜ್ಜಾಡಿ ಪ್ರಭಾಕರ ನಾಯಕ್‌ ಉಪಸ್ಥಿತರಿದ್ದರು. ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು.

ಆಚಾರ್ಯರ ಕಲ್ಪನೆಯಂತೆ ಅಭಿವೃದ್ಧಿ
ಉಡುಪಿಯ ಅಭಿವೃದ್ಧಿ ಕೆಲಸಗಳೂ ವಿ.ಎಸ್‌.ಆಚಾರ್ಯ ಅವರ ಕಲ್ಪನೆಯಂತೆಯೇ ನಡೆದಿದೆ. ಅಭಿವೃದ್ಧಿ ಪರ ವಿಚಾರಗಳನ್ನು ತಿಳಿಸಿಕೊಡುವಲ್ಲಿ ಆಚಾರ್ಯರು ಮಹತ್ತರ ಪಾತ್ರ ವಹಿಸಿದ್ದರು. ಅಷ್ಟೊಂದು ಹಿರಿಯ ರಾಜಕಾರಣಿಯಾಗಿದ್ದರೂ ಎಲ್ಲರನ್ನೂ ಗೌರವಿಸುತ್ತಿದ್ದರು. ಅವರ ಈ ಸಾಧನೆಯ ಫ‌ಲದಿಂದಲೇ ಬಿಜೆಪಿ ಜಿಲ್ಲೆಯ 5 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿದೆ. ರಾಜಕಾರಣದ ಮೂಲಕ ಸಮಾಜಸೇವೆ ಮಾಡಬಹುದು ಎಂಬುವುದನ್ನು ತೋರಿಸಿಕೊಟ್ಟಿದ್ದರು. ಅವರು ಇಂದು ಇದ್ದಿದ್ದರೆ ಉಡುಪಿಯ ಚಿತ್ರಣ ಮತ್ತಷ್ಟು ಬದಲಾಗುತ್ತಿತ್ತು. ಅವರು ಬಿಟ್ಟುಹೋಗಿರುವ ಚಿಂತನೆಗಳನ್ನು ಮುಂದುವರಿಸುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.