ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

 ಬಿಜೂರು ಗ್ರಾಮ ಪಂಚಾಯತ್‌

Team Udayavani, Mar 18, 2020, 1:11 AM IST

bijooru-water-2

ಕಳೆದ ಬೇಸಗೆಯಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ “ಉದಯವಾಣಿ’ಯು ಭೇಟಿ ಕೊಟ್ಟು, “ಜೀವಜಲ’ ಎನ್ನುವ ಸರಣಿಯಡಿ ಸಾಕ್ಷಾತ್‌ ವರದಿಗಳನ್ನು ಪ್ರಕಟಿಸಿತ್ತು. ಈ ಬಾರಿಯ ಬೇಸಗೆಯಲ್ಲಿ ನೀರಿನ ಸಮಸ್ಯೆಯ ನಿವಾರಣೆಗೆ ಸ್ಥಳೀಯ ಪಂಚಾಯತ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ? ಮುಂದೆ ಆಗಬೇಕಾದ ಪ್ರಮುಖ ಕ್ರಮಗಳೆಲ್ಲದರ ಕುರಿತಾದ ಸರಣಿ ಇದು.

ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ಬೇಸಗೆಯಲ್ಲಿ ನೀರಿನ ಸಮಸ್ಯೆ ಇರಲಿಲ್ಲ. ಈ ಬೇಸಗೆಯಲ್ಲಿ ಕೆಲವು ಪ್ರದೇಶಗಳಲ್ಲಿ ಸಮಸ್ಯೆ ಉಂಟಾ ಗುವ ಸಾಧ್ಯತೆ ಇದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಗ್ರಾ.ಪಂ. ಮುಂದಾಗಿದೆ.

ಉಪ್ಪುಂದ: ಕಳೆದ ಹಲವು ದಶಕಗಳಿಂದ ಬಿಜೂರು ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎನ್ನುವ ಹೋರಾಟಕ್ಕೆ ಈ ಬಾರಿ ತಾರ್ಕಿಕ ಅಂತ್ಯ ದೊರಕಿದೆ.

ಎಪ್ರಿಲ್‌-ಮೇ ವೇಳೆ ಸಮಸ್ಯೆ
ಕಳೆದ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಿದ್ದ ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸದ್ಯ ವಿವಿಧ ಭಾಗಗಳಲ್ಲಿ ನೀರಿನ ಸಮಸ್ಯೆ ಇಲ್ಲ. ಎಪ್ರಿಲ್‌ – ಮೇ ತಿಂಗಳಲ್ಲಿ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಕಳೆದ ಬಾರಿ ನೀರಿನ ಸಮಸ್ಯೆಗೆ ಟ್ಯಾಂಕರ್‌ ನೀರು ನೀಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿತ್ತು. ಈ ಬಾರಿ ಬೇಸಗೆಗೆ ಮುನ್ನ ಬಾವಿ, ಹ್ಯಾಡ್‌ ಬೋರ್‌ವೆಲ್‌ಗಳನ್ನು ನಿರ್ಮಿಸುವ ಮೂಲಕ ಶಾಶ್ವತ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳುವ ಪ್ರಯತ್ನಕ್ಕೆ ಗ್ರಾಮ ಪಂಚಾಯತ್‌ ಮುಂದಾಗಿದೆ.

ಟ್ಯಾಂಕರ್‌ ನೀರು ಪೂರೈಕೆ
ನವಗ್ರಾಮ ಕಾಲನಿಯಲ್ಲಿನ ಮನೆಗಳಿಗೆ ಬವಳಾಡಿಯಲಿರುವ ಟ್ಯಾಂಕ್‌ನಿಂದ ನಲ್ಲಿ ಮೂಲಕ ನೀರು ನೀಡಲಾಗುತ್ತದೆ. ಇಲ್ಲಿನ ಬಾವಿಯಲ್ಲಿ ನೀರು ಕಡಿಮೆಯಾದಲ್ಲಿ ಟ್ಯಾಂಕರ್‌ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

3 ಮತ್ತು 4ನೇ ವಾರ್ಡ್‌ನ ಮನೆಗಳ ಎದುರು ಹರಿಯುತ್ತಿರುವ ನದಿ ನೀರು ಉಪ್ಪು ಮಿಶ್ರಿತವಾಗಿರುವುದರಿಂದ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಇಲ್ಲಿನವರ ನೀರಿನ ಸಮಸ್ಯೆ ಮುಕ್ತಿಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಯತ್ನದಿಂದ ಶಾಶ್ವತ ಪರಿಹಾರ ಕಂಡು ಕೊಳ್ಳಲಾಗಿದೆ.

4ನೇ ವಾರ್ಡ್‌ ಪ್ರದೇಶಗಳಾದ ಗರಡಿ, ಕಳಿಸಾಲು, ನಿಸರ್ಗಕೇರಿ, ದೊಂಬ್ಲಿಕೇರಿ ಪ್ರದೇಶಗಳಲ್ಲಿ ಉಪ್ಪು ನೀರಿನ ಸಮಸ್ಯೆ ಇರುವುದರಿಂದ ಇಲ್ಲಿನ ಬಾವಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ. ಬಹುತೇಕ ಮನೆಗಳಲ್ಲಿ ಸಿಹಿನೀರಿನ ಕೊರತೆ ಇದೆ. ಇಲ್ಲಿಗೆ ಬಿಜೂರು ಶಾಲೆಯಲ್ಲಿನ ಟ್ಯಾಂಕ್‌ನಿಂದ ನಲ್ಲಿ ಮೂಲಕ ನೀರು ನೀಡಲಾಗುತ್ತಿದೆ. 3ನೇ ವಾರ್ಡ್‌ನ ಶೆಟ್ರಕೇರಿ, ಕಳಿನಬಾಗಿಲು ವ್ಯಾಪ್ತಿಯ ಕೆಲವು ಮನೆಗಳಿಗೆ ನೀರಿನ ಸಮಸ್ಯೆ ಇದೆ.

ಇನ್ನು ದಾಸೋಡಿ ಮನೆಯ ಬಳಿ ಇರುವ ಬಾವಿಯ ನೀರನ್ನು ಸದುಪಯೋಗಪಡಿಸಿಕೊಳ್ಳಲು ಪೈಪ್‌ಲೈನ್‌ಗೆ 1.45 ಲ.ರೂ. ಹಾಗೂ 1 ಲಕ್ಷ ವಿದ್ಯುತ್‌ ಪಂಪ್‌ಸೆಟ್‌ ಕೊಠಡಿ ನಿರ್ಮಾಣಕ್ಕೆ 14ನೇ ಹಣಕಾಸು ಯೋಜನೆಯಲ್ಲಿ ಅನುದಾನ ತೆಗೆದಿರಿಸಲಾಗಿದೆ.

ಕೈಗೊಂಡ ಕ್ರಮಗಳೇನು?
3ನೇ ವಾರ್ಡ್‌ನ ಶೆಟ್ರಕೇರಿಯ ಅಂಗನವಾಡಿ ಸಮೀಪ ಜಿ.ಪಂ. ಗ್ರಾಮೀಣ ಕುಡಿಯುವ ನೀರು ಮತ್ತು
ನೈಮಲ್ಯ ಉಪವಿಭಾಗ ಬೈಂದೂರು ಯೋಜನೆಯಿಂದ 10 ಲಕ್ಷ ರೂ. ವೆಚ್ಚದ 50 ಸಾವಿರ ಲೀ. ಸಾಮರ್ಥ್ಯದ ವಾಟರ್‌ ಟ್ಯಾಂಕನ್ನು ನಿರ್ಮಾಣ ಮಾಡಲಾಗಿದೆ. ಪಕ್ಕದಲ್ಲೇ ಜಿಲ್ಲಾ ಪಂಚಾಯತ್‌ನಿಂದ 10 ಲಕ್ಷ ರೂ. ಅನುದಾನದಲ್ಲಿ ಬಾವಿ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಸಾಕಷ್ಟು ನೀರು ಇರುವುದರಿಂದ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ ಎನ್ನುವುದು ನಾಗರಿಕರ ಅಭಿಪ್ರಾಯ.

ಸಮಸ್ಯೆ ನಿವಾರಣೆಗೆ ಕ್ರಮ
ಗ್ರಾಮದ 3 ಮತ್ತು 4ನೇ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಶೆಟ್ರಕೇರಿಯಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಮಾಡಲಾಗಿದೆ ಹಾಗೂ ಒಂದು ಬಾವಿ ನಿರ್ಮಾಣ ಹಂತದಲ್ಲಿದೆ. ಇದರಲ್ಲಿ ಸಾಕಷ್ಟು ನೀರಿದೆ. ಅಲ್ಲದೆ ದಾಸೋಡಿ ಮನೆ ಬಳಿಯ ಬಾವಿಯಲ್ಲಿನ ನೀರು ಬಳಸಿಕೊಳ್ಳಲು ಅನುದಾನ ನೀಡಲಾಗಿದೆ. ಉಳಿದ ಭಾಗದಲ್ಲಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ.
– ಸತೀಶ ತೋಳಾರ್‌, ಪಿಡಿಓ

ಕೃಷ್ಣ ಬಿಜೂರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.