ಅಜೆಕಾರು: ದರ್ಬುಜೆ- ದೆಪ್ಪುತ್ತೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿ
Team Udayavani, Jun 9, 2019, 6:10 AM IST
ಅಜೆಕಾರು: ಕಡ್ತಲ ಗ್ರಾಮ ಪಂಚಾಯತ್ ಹಾಗೂ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಬುಜೆ ಮತ್ತು ದೆಪ್ಪುತ್ತೆ ಭಾಗವನ್ನು ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು ಪಿಲ್ಲರ್ ಕಾರ್ಯ ಪೂರ್ಣಗೊಂಡಿದೆ.
ದೆಪ್ಪುತ್ತೆ ದರ್ಬುಜೆ ಭಾಗದ ನಾಗರಿಕರು ಹಲವು ದಶಕಗಳಿಂದ ಈ ಸೇತುವೆ ನಿರ್ಮಾಣಕ್ಕಾಗಿ ನಿರಂತರ ಹೋರಾಟ ನಡೆಸಿದ್ದರು. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ನಿರಂತರ ಮನವಿ ಮಾಡುತ್ತಾ ಬಂದಿದ್ದು, ಕಳೆದ ಜನವರಿ ತಿಂಗಳಿನಲ್ಲಿ ಕಾಮಗಾರಿ ಪ್ರಾರಂಭಗೊಂಡಿತ್ತು.
1 ಕೋಟಿ ರೂ. ಮಂಜೂರು
ಸಿಆರ್ಎಫ್ ಫಂಡ್ನಿಂದ ಸೇತುವೆಗೆ 1 ಕೋಟಿ ರೂ. ಮಂಜೂರಾಗಿದ್ದು ಸೇತುವೆಯ ಪಿಲ್ಲರ್ ಕಾಮಗಾರಿ ಪೂರ್ಣಗೊಂಡಿದೆ. ಮಳೆಗಾಲದ ಸಮಯದಲ್ಲಿ ಸೇತುವೆಯ ಇತರ ಕಾಮಗಾರಿಗಳನ್ನು ನಡೆಸಲಾಗುತ್ತದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ.
ಈ ಸೇತುವೆ ನಿರ್ಮಾಣದಿಂದಾಗಿ ದೆಪ್ಪುತ್ತೆ ದರ್ಬುಜೆ ಭಾಗದ ಜನತೆ ಕುಕ್ಕುಜೆ ಪೆರ್ಡೂರು ಹಾಗೂ ಅಜೆಕಾರು ಕಾರ್ಕಳಕ್ಕೆ ಸುತ್ತುಬಳಸಿ ಪ್ರಯಾಣಿಸುವ ಸಂಕಷ್ಟ ತಪ್ಪಲಿದೆ.
ಈ ಮಳೆಗಾಲಕ್ಕೆ ಕಷ್ಟ
ಇನ್ನೂ ಹಲವು ಕಾಮಗಾರಿಗಳು ನಡೆಯ ಬೇಕಿರುವುದರಿಂದ ಈ ಬಾರಿಯ ಮಳೆಗಾಲಕ್ಕೆ ಸೇತುವೆ ಕಾಮಗಾರಿ ಮುಗಿಯುವುದು ಕಷ್ಟವಾಗಿದೆ. ಕಾಮಗಾರಿ ಕಾಮಗಾರಿ ಪೂರ್ಣಗೊಳ್ಳಲು ಒಂದು ವರ್ಷದ ಅವಕಾಶವಿರುವುದರಿಂದ ಮುಂದಿನ ಮಳೆಗಾಲಕ್ಕೆ ಕಾಮಗಾರಿ ಪೂರ್ಣಗೊಂಡು ಸ್ಥಳೀಯರ ಸಂಕಷ್ಟಕ್ಕೆ ಮುಕ್ತಿ ಸಿಗುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್