ಬೆಂಗಳೂರು -ವಾಸ್ಕೋ ರೈಲಿನ ದಿನಾಂಕ ಇಂದು ನಿರ್ಧಾರ?
ಇಂದಿನಿಂದ ವೇಳಾಪಟ್ಟಿ ಸಮಿತಿ ಸಭೆ
Team Udayavani, Feb 26, 2020, 7:00 AM IST
ಕುಂದಾಪುರ: ಬೆಂಗಳೂರು- ವಾಸ್ಕೋ ರೈಲು ಸಂಚಾರ ಆರಂಭ ಯಾವತ್ತು ಎಂಬ ಪ್ರಶ್ನೆಗೆ ಬುಧವಾರ ಬಹುತೇಕ ಉತ್ತರ ಸಿಗುವ ಸಾಧ್ಯತೆ ಗಳಿವೆ.
ಭಾರತೀಯ ರೈಲ್ವೇಯ ವೇಳಾ ಪಟ್ಟಿ ಸಮಿತಿ (ಐಆರ್ಟಿಸಿ)ಯ ಸಭೆ ಫೆ. 26, 27 ಮತ್ತು 28ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಇಲ್ಲಿ ವಾಸ್ಕೋ ರೈಲು ಓಡಾಟ ಆರಂಭ ದಿನಾಂಕ ನಿರ್ಧಾರ ಆಗಲಿದೆ.
ರೈಲಿನ ಕೋಚ್ಗಳು ಬೆಂಗಳೂರಿಗೆ ಆಗಮಿಸಿದ್ದು, ವೇಳಾಪಟ್ಟಿ ಪ್ರಕಟವಾಗಿ 15 ದಿನಗಳಾಗಿದ್ದರೂ ರೈಲು ಓಡುತ್ತಿಲ್ಲ. ರೈಲ್ವೇ ಅಧಿಕಾರಿಗಳ ತೊಡರುಗಾಲೇ ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ರಾಜಕೀಯ ಇಚ್ಛಾಶಕ್ತಿ ಮತ್ತು ಸಾಮಾಜಿಕ ಬದ್ಧತೆಯ ಮೂಲಕ ಒತ್ತಡ ಹೇರಲಾಗುತ್ತಿದೆ.
ಏನಿದು ಸಭೆ?
ಎಲ್ಲ ರೈಲ್ವೇ ವಿಭಾಗ ಮುಖ್ಯಸ್ಥರು, ಪ್ರತಿನಿಧಿಗಳು ಸಭೆಗೆ ಆಗಮಿಸುತ್ತಾರೆ. ವಿವಿಧ ವಲಯಗಳ ಮಾರ್ಗಗಳಲ್ಲಿ ಹೊಸ ರೈಲುಗಳ ಕುರಿತು ಮಾಹಿತಿ ವಿನಿಮಯ ನಡೆಸಿ, ಹಾಲಿ ರೈಲು, ಗೂಡ್ಸ್ ರೈಲುಗಳ ಸಮಯ ಹೊಂದಾಣಿಕೆ ಮಾಡಿ, ಹಳಿ ಬಿಟ್ಟು ಕೊಡುವ ಬಗ್ಗೆ ಸಮಾಲೋಚನೆ ನಡೆಯುತ್ತದೆ. ಬೆಂಗಳೂರು – ವಾಸ್ಕೊ ರೈಲಿನ ಬಗೆಗೂ ಚರ್ಚೆ ನಡೆಯಲಿದೆ. ಇಲ್ಲಿ ಒಪ್ಪಿಗೆ ದೊರೆತರೆ ಸಮಸ್ಯೆ ಸುಲಭ ವಾಗಿ ಬಗೆಹರಿದಂತೆ. ಇಲ್ಲದಿದ್ದರೆ ಮಾ. 2ರಂದು ಸಚಿವರ ಉಪಸ್ಥಿತಿಯಲ್ಲಿ ದಿಲ್ಲಿಯಲ್ಲಿ ನಡೆಯುವ ಸಭೆಯಲ್ಲಿ ಹಗ್ಗಜಗ್ಗಾಟ ನಡೆಯುತ್ತದೆ. ಹೀಗಾಗಿ ಈ ದಿನ ಮಹತ್ವದ್ದಾಗಿದೆ.
ಸಮಯ ಕೋರಿಕೆ: ಕೇಂದ್ರ ಸಚಿವರಲ್ಲಿ ರೈಲಿಗೆ ಚಾಲನೆಗೆ ದಿನ ನಿಗದಿಗೆ ಕೇಳಿಕೊಳ್ಳಲಾಗಿದೆ, ಉಡುಪಿ ಅಥವಾ ಬೆಂಗಳೂರಿನಲ್ಲಾದರೂ ಆಗಬಹುದು. ಶೀಘ್ರ ಚಾಲನೆ ನೀಡಲು ವಿನಂತಿಸಿದ್ದೇನೆ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ರೈಲ್ವೇ ಹಿರಿಯ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಸಚಿವ ಸುರೇಶ್ ಅಂಗಡಿಯವರೂ ಭರವಸೆ ನೀಡಿದ್ದಾರೆ. ಹೊಸ ರೈಲು ಮಂಜೂರಾತಿ ಸಂದರ್ಭದ ಸಭೆಗಳಲ್ಲಿ ನಾನು ಭಾಗವಹಿಸಿದ್ದೆ.
– ಜಯಪ್ರಕಾಶ್ ಹೆಗ್ಡೆ, ಮಾಜಿ ಸಂಸದ
ವೇಳಾಪಟ್ಟಿ ನಿಗದಿಯಾದ ಕಾರಣ ಶೀಘ್ರ ಚಾಲನೆ ನೀಡಲಿ. ಎಲ್ಲರಿಗೂ ಪ್ರಯೋಜನ ದೊರೆಯಲಿ.
– ಗಣೇಶ್ ಪುತ್ರನ್, ಅಧ್ಯಕ್ಷರು, ರೈಲು ಪ್ರ. ಹಿತರಕ್ಷಣ ಸಮಿತಿ, ಕುಂದಾಪುರ
ಆರಂಭಕ್ಕೆ ಇರುವ ಅಡ್ಡಿ
ಬೆಂಗಳೂರಿನಿಂದ ವಾಸ್ಕೋಗೆ ಚಲಿಸುವ ರೈಲು ದಕ್ಷಿಣ, ನೈಋತ್ಯ ಮತ್ತು ಕೊಂಕಣ ರೈಲು ಮಾರ್ಗಗಳನ್ನು ಬಳಸಬೇಕು. ಕೊಂಕಣ ರೈಲಿನ ಮಾರ್ಗದಲ್ಲಿ ಹೆಚ್ಚಾಗಿ ಗೂಡ್ಸ್ ರೈಲುಗಳು ಚಲಿಸುವುದರಿಂದ ಹಸಿರು ನಿಶಾನೆ ತೋರಿ ಸಿಲ್ಲ.
ಕೊಂಕಣ ಮಾರ್ಗದ ಮೂಲಕ 40ರಷ್ಟು ರೈಲುಗಳಲ್ಲಿ ಸುಮಾರು 33 ಕೇರಳ, ಉತ್ತರ ಭಾರತಕ್ಕೆ ತೆರಳುತ್ತವೆ. ಜನರ, ಸಂಘಟನೆಗಳ, ಜನಪ್ರತಿನಿಧಿಗಳ ಆಸಕ್ತಿಯಿಂದ ಪ್ರಯಾಣಿಕ ರೈಲು ದೊರೆ ತಿದೆಯೇ ವಿನಾ ನಿಗಮವು ಸ್ವ ಹಿತಾಸಕ್ತಿ ಯಿಂದ ಒಂದು ಪ್ರಯಾಣಿಕರ ರೈಲನ್ನೂ ಆರಂಭಿಸಿಲ್ಲ ಎಂಬ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ