ಬೊಲೇರೊ- ಸ್ಕೂಟಿ ಢಿಕ್ಕಿ: ಉಪ ಪ್ರಾಂಶುಪಾಲ ಸಾವು

ತ್ರಾಸಿಯಲ್ಲಿ ಘಟನೆ; ಐವರಿಗೆ ಗಾಯ

Team Udayavani, Apr 22, 2019, 6:30 AM IST

acc

ಕುಂದಾಪುರ: ತ್ರಾಸಿಯ ರಾ. ಹೆ. 66ರಲ್ಲಿ ಬೊಲೇರೊ ಜೀಪು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಪರಿಣಾಮ ಜೀಪಿನಲ್ಲಿದ್ದ ಮೂಳೂರು ಸುನ್ನೀ ಸೆಂಟರ್‌ ದಅವಾ ವಿಭಾಗದ ಉಪ ಪ್ರಾಂಶುಪಾಲ ಸುಹೈಲ್‌ ಸಅದಿ (28) ಮೃತಪಟ್ಟು, ಐವರು ಗಾಯಗೊಂಡ ಘಟನೆ ರವಿ ವಾರ ಮಧ್ಯಾಹ್ನ ಸಂಭವಿಸಿದೆ.

ಕೇರಳ ಕಣ್ಣೂರಿನ ಪಯ್ಯನ್ನೂರಿನ ಅರಿಪ್ಪಾಂಬ್ರ ಮುಕ್ಕಿಲ್‌ ನಿವಾಸಿಯಾದ ಸುಹೈಲ್‌ ಸಅದಿ ಅವರು ಮೂಳೂರಿನ ಅಲ್‌ ಇಹ್ಸಾನ್‌ ಎಜುಕೇಶನ್‌ ಸೆಂಟರ್‌ನ ದಅವಾ ವಿಭಾಗದ ಉಪಪ್ರಾಂಶುಪಾಲರಾಗಿದ್ದರು.

ಗಂಭೀರ ಗಾಯಗೊಂಡ ಜೀಪಿನಲ್ಲಿದ್ದ ದಅವಾ ವಿಭಾಗದ ಪ್ರಾಂಶುಪಾಲ ಸ್ವಾಬಿರ್‌ ಸಅದಿ (28) ಹಾಗೂ ದ್ವಿಚಕ್ರ ವಾಹನ ಸವಾರ ಭರತ್‌ ಹಾಗೂ ಸಣ್ಣ ಪುಟ್ಟ ಗಾಯಗೊಂಡ ಜೀಪಿನಲ್ಲಿದ್ದ ಇಂಗ್ಲಿಷ್‌ ಉಪನ್ಯಾಸಕ ಮಂಜನಾಡಿಯ ಇಬ್ರಾಹಿಂ ಬಾತಿಶಾ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿ ತುಫೈಲ್‌ ಹಾಗೂ ದ್ವಿಚಕ್ರ ವಾಹನ ಹಿಂಬದಿ ಸವಾರ ಜಡ್ಕಲ್‌ನ ಜೋಸೆಫ್ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀಪಿನಲ್ಲಿದ್ದ ವಿದ್ಯಾರ್ಥಿ ಹಜ್ಮಲ್‌ ಹಾಗೂ ಚಾಲಕ ಕಾಪು ಮಜೂರಿನ ಮಹಮ್ಮದ್‌ ರಫೀಕ್‌ ಪಾರಾಗಿದ್ದಾರೆ.

ಬೈಂದೂರು ಕಡೆಯಿಂದ ಕುಂದಾಪುರ ಕಡೆ ಬರುತ್ತಿದ್ದ ಬೊಲೇರೊ ಜೀಪು ಎದುರಿನಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಪರಿಣಾಮ ನಿಯಂತ್ರಣ ತಪ್ಪಿದ ಜೀಪು ರಸ್ತೆ ಮಧ್ಯೆ ಪಲ್ಟಿಯಾಯಿತು. ಇದರಿಂದ ಜೀಪಿನ ಮಧ್ಯ ಸೀಟಿನಲ್ಲಿ ಕುಳಿತಿದ್ದ ಸುಹೈಲ್‌ ಸಅದಿ ಗಂಭೀರವಾಗಿ ಗಾಯಗೊಂಡು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪಿದರು.
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಳೂರಿನಲ್ಲಿ ಅಂತಿಮ ನಮನ
ಕಾಪು: ತ್ರಾಸಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್‌ ಅಧೀನದ ಮೂಳೂರು ಅಲ್‌ ಇಹ್ಸಾನ್‌ ಎಜುಕೇಶನ್‌ ಸೆಂಟರ್‌ನ ದಅವ ವಿಭಾಗದ ಉಪಪ್ರಾಂಶುಪಾಲ ಸುಹೈಲ್‌ ಸಅದಿ ಅವರಿಗೆ ಮೂಳೂರು ಸುನ್ನಿ ಸೆಂಟರ್‌ನಲ್ಲಿ ಅಂತಿಮ ನಮನ ಸಲ್ಲಿಸಲಾಯಿತು.

ಮೂಳೂರು ಸುನ್ನಿ ಸೆಂಟರ್‌ನಲ್ಲಿ ಮೃತದೇಹದ ಸಾರ್ವಜನಿಕ ದರ್ಶನದ ಬಳಿಕ ಸಂಸ್ಥೆಯ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಮೃತದೇಹವನ್ನು ಹುಟ್ಟೂರು ಕೇರಳಕ್ಕೆ ಕಳುಹಿಸಿಕೊಡಲಾಯಿತು.

ಅಂತಿಮ ದರ್ಶನ ಮುಗಿಸಿ ಬರುವಾಗ ದುರಂತ
ಇಹ್ಸಾನ್‌ ಎಜು ಪ್ಲಾನೆಟ್‌ನ ವಿದ್ಯಾರ್ಥಿ, ದಾವಣಗೆರೆ ಮೂಲದ ಮಹಮ್ಮದ್‌ ನಿಯಾದ್‌ನ ತಾಯಿ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ನಿಯಾದ್‌ನನ್ನು ಅಲ್ಲಿಗೆ ಕರೆದೊಯ್ದು, ಮೃತದೇಹದ ಅಂತಿಮ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಎರಡು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಅವರಿಗೆ 1 ವರ್ಷದ ಗಂಡು ಮಗುವಿದೆ.

ಪರಿಶ್ರಮಿ: ಮೂಲತಃ ಕೇರಳ – ಕಣ್ಣೂರಿನ ತಳಿಪ್ಪರಂಬದ ನಿವಾಸಿ ಯಾಗಿದ್ದ ಸುಹೈಲ್‌ ಮೂರೂವರೆ ವರ್ಷಗಳಿಂದ ಮೂಳೂರು ಅಲ್‌ ಇಹ್ಸಾನ್‌ ದಅವ ಮತ್ತು ಎಜು ಪ್ಲಾನೆಟ್‌ನ ಪಿಯುಸಿ ವಿಭಾಗದ ಲೆಕ್ಕ ಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಷಯ ಬೋಧಿ ಸುತ್ತಿದ್ದರು. ಅವರ ವಿಶೇಷ ಮುತುವರ್ಜಿಯಿಂದಾಗಿ ಸಂಸ್ಥೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿತ್ತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.