ಬದಲಾಗುತ್ತಿದೆ ಬೈಂದೂರು ತಾ| ಕೇಂದ್ರದ ನಗರ ವಿನ್ಯಾಸ


Team Udayavani, Sep 11, 2019, 5:28 AM IST

byndoor

ಬೈಂದೂರು: ಉಡುಪಿ ಜಿಲ್ಲೆಯ ಉತ್ತರದ ಗಡಿಭಾಗದ ತಾಲೂಕು ಕೇಂದ್ರವಾದ ಬೈಂದೂರು ಪ್ರಗತಿಯ ಇಂದಿನ ನೋಟ ನಗರದ ಚಿತ್ರಣವನ್ನು ಬದಲಿಸಲಿದೆ. ಹಲವು ವರ್ಷಗಳ ಪ್ರಯತ್ನಗಳಿಗೆ ದೊರೆಯುತ್ತಿರುವ ಒಂದೊಂದೇ ಯಶಸ್ಸುಗಳು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿವೆ. ಆದರೆ ಈ ಹಂತದಲ್ಲಿ ಮಾದರಿ ತಾಲೂಕು ರಚನೆಯ ನಿರ್ಮಾಣದಲ್ಲಿ ತೆಗೆದುಕೊಳ್ಳಬೇಕಾದ ನಿರ್ಣಯಗಳು ಮಾತ್ರ ಊರಿನ ಭವಿಷ್ಯವನ್ನು ನಿರ್ಧರಿಸಲಿವೆ. ಹೀಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಅಭಿವೃದ್ಧಿ ಚಿಂತಕರು ಮುಂದಿನ ದಿನದ ಬದಲಾವಣೆಗಳನ್ನು ಮನಗಂಡು ಬೈಂದೂರಿನ ಬೆಳವಣಿಗೆಯ ವಿನ್ಯಾಸ ರೂಪಿಸಬೇಕಿದೆ.

ಹಂತ ಹಂತವಾಗಿ ಯಶಸ್ಸು

ಬೈಂದೂರು ಅಭಿವೃದ್ಧಿಯಲ್ಲಿ ನಿರಂತರವಾಗಿ ಇಲ್ಲಿನ ಜನಪ್ರತಿನಿಧಿಗಳು ಹಾಗೂ ಸರಕಾರದ ಕೊಡುಗೆಯಿದೆ. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿಯವರ ಅವಧಿಯಲ್ಲಿ ತಾಲೂಕು ಕೇಂದ್ರದ ಕಲ್ಪನೆಯಲ್ಲಿ ಅವಶ್ಯವಿರುವ ಕಚೆೇರಿಗಳನ್ನು ರೂಪಿಸುವ ಮೂಲಕ ಉತ್ತಮ ಅಡಿಪಾಯ ದೊರಕಿದೆ. ಹಿಂದಿನ ಅವಧಿಯಲ್ಲಿ ಹಲವು ಗೊಂದಲಗಳ ಬಳಿಕ ತಾಲೂಕು ಕೇಂದ್ರ ಅಧಿಕೃತ ಘೋಷಣೆ ಮಾಡುವುದರ ಮೂಲಕ ಪೂರ್ಣತೆ ಕಾಣಲಾಯಿತು. ಬಳಿಕ ಶಾಸಕರಾಗಿ ಆಯ್ಕೆಯಾದ ಬಿ.ಎಂ. ಸುಕುಮಾರ ಶೆಟ್ಟಿ ತಾಲೂಕು ಕೇಂದ್ರದ ಮೂಲ ಸಮಸ್ಯೆಗಳಾದ ನದಿ ಜೋಡಣೆ, ಉನ್ನತ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಜತೆಗೆ ತಾಲೂಕು ಕೇಂದ್ರ ಪ್ರಮುಖ ಆವಶ್ಯಕತೆಗಳನ್ನು ಸರಕಾರದ ಗಮನಸೆಳೆಯುವ ಪ್ರಯತ್ನ ಸಾಕಷ್ಟು ವೇಗ ದೊರಕಿಸಿಕೊಟ್ಟಿದೆ. ಈ ನಡುವೆ ಸಂಸದರಾದ ಬಿ.ವೈ. ರಾಘವೇಂದ್ರ ಬೈಂದೂರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ತೆಗೆದುಕೊಳ್ಳುತ್ತಿರುವ ವಿಶೇಷ ಆಸಕ್ತಿ ಬಹುದಿನ ಗಳ ಕನಸುಗಳು ಸಾಕಾರಗೊಳ್ಳಲು ಕ್ಷಣಗಣನೆ ನಡೆಯುತ್ತಿದೆ.

ಟ್ರಾಫಿಕ್‌ ಸಮಸ್ಯೆ ದೂರವಾಗಬೇಕು, ಒಂದೇ ಕಡೆ ಕಚೇರಿ ದೊರೆಯಬೇಕಿದೆ

ಬೈಂದೂರು ನಗರ ಪ್ರದೇಶಗಳಲ್ಲಿ ಟ್ರಾಫಿಕ್‌ ಗೊಂದಲ ಅತ್ಯಂತ ಕಿರಿಕಿರಿಯಾಗಿದೆ. ಹಲವು ಬಾರಿ ಮನವಿ ನೀಡಿದರೂ ಯಾವ ಇಲಾಖೆಯು ಕೂಡ ಈ ಬಗ್ಗೆ ಗಮನಹರಿಸಿಲ್ಲ. ರಥಬೀದಿಯಲ್ಲಿ ವಾಹನ ದಟ್ಟಣೆಯಿಂದ ನಡೆದಾಡಲು ಸಾಧ್ಯವಾಗುತ್ತಿಲ್ಲ.ಅಂಡರ್‌ಪಾಸ್‌ ವಾಹನ ಪಾರ್ಕಿಂಗ್‌ ಆಗಿ ಮಾರ್ಪಟ್ಟಿದೆ. ಹೆದ್ದಾರಿ ಎಂಬ್ಯಾಕ್‌ವೆುಂಟ್ ನಗರ ಸೌಂದರ್ಯವನ್ನು ಕೆಡಿಸಿದೆ.

ಬೈಂದೂರಿನ ವಿಶೇಷತೆಯಿಂದ ಬಹುತೇಕ ಜನರು ಸುತ್ತಲಿನ ಹತ್ತಿಪ್ಪತ್ತು ಕಿ.ಮೀ. ದೂರದ ಊರುಗಳಿಂದ ಬರುತ್ತಾರೆ. ಇಲ್ಲಿನ ಟ್ರಾಫಿಕ್‌ ವ್ಯವಸ್ಥೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮತ್ತು ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಿದರೆ ಜನಜಂಗುಳಿ ನಿಯಂತ್ರಿಸಬಹುದಾಗಿದೆ. ದೂರದಿಂದ ತಾಲೂಕು ಕೇಂದ್ರಕ್ಕೆ ಬರುವ ಜನರಿಗೆ ಬಹುತೇಕ ಸೀಮಿತ ಅಂತರದಲ್ಲಿ ಕಚೇರಿ ಸೇವೆಗಳು ದೊರೆಯಬೇಕಿದೆ.

ಸರಕಾರದ ಒತ್ತಡ ಹೆಚ್ಚಿದಂತೆ ವಿವಿಧ ಇಲಾಖೆಯ ಮೇಲಧಿಕಾರಿಗಳು ಬೈಂದೂರಿನಲ್ಲಿ ಕಚೇರಿ ಸ್ಥಾಪನೆಯ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಈ ಹಂತದಲ್ಲಿ ಮುಂದಿನ ಬೈಂದೂರು ಕಲ್ಪನೆಯನ್ನು ಮನಗಂಡು ಸ್ಥಳ ಮಂಜೂರು ಮಾಡಬೇಕಾಗಿದೆ. ಈಗಿರುವ ವ್ಯವಸ್ಥೆಯಲ್ಲಿ ಕ್ರೀಡಾಂಗಣ, ಪಾರ್ಕ್‌ಗಳು, ಬೈಂದೂರಿನ ಸುತ್ತಮುತ್ತ ಇಲ್ಲವಾಗಿದೆ.ವಿವಿಧ ಮೆಟ್ರಿಕ್‌ ಹಾಸ್ಟೆಲ್ಗಳು ಖಾಸಗಿ ಕಟ್ಟಡದಲ್ಲಿದೆ. ಕೃಷಿಕರು ಹೆಚ್ಚಿರುವ ಈ ಭಾಗದಲ್ಲಿ ಕೃಷಿಗೆ ಅನುಕೂಲವಾಗುವ ದೊಡ್ಡಮಟ್ಟದ ಅದ್ಯಯನ ಕೇಂದ್ರ ಬೇಕಿದೆ. ಜತೆಗೆ ಪ್ರವಾಸಿ ಸ್ಥಳಗಳ ಪ್ರಗತಿ, ಕೊಲ್ಲೂರನ್ನು ಕೇಂದ್ರೀಕರಿಸಿಕೊಂಡು ವಿವಿಧ ಧಾರ್ಮಿಕ ಸ್ಥಳಗಳ ಅಬಿವೃದ್ದಿ, ಮಲ್ಟಿ ಟೂರಿಸಂ ಯೋಜನೆ ಕಾರ್ಯರೂಪಕ್ಕೆ ಬರಬೇಕಿದೆ. ಹೀಗಾಗಿ ತಾಲೂಕು ಕೇಂದ್ರವಾದ ಪ್ರಗತಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಡವದೆ ಸೂಕ್ತ ನಗರ ವಿನ್ಯಾಸ ರೂಪಿಸುವ ಮೂಲಕ ಬೈಂದೂರಿನ ಭವಿಷ್ಯ ರೂಪಿಸಬೇಕು ಎನ್ನುವುದು ಸಾರ್ವತ್ರಿಕ ಅಭಿಪ್ರಾಯವಾಗಿದೆ.

– ಅರುಣ್ ಕುಮಾರ್ ಶಿರೂರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.