ಅಂಗವಿಕಲರಿಗಾಗಿ ವಿಶೇಷ ಮತಗಟ್ಟೆಯಾಗಿ ಬದಲಾದ ಕೋಡಿ ಗ್ರಾ.ಪಂ.ಕಚೇರಿ


Team Udayavani, Apr 18, 2019, 6:30 AM IST

angavikala

ಕೋಟ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸುವಂತೆ ಮಾಡಬೇಕು ಎನ್ನುವ ಸಲುವಾಗಿ ಉಡುಪಿ ಜಿಲ್ಲಾಡಳಿತ ಎಲ್ಲ ರೀತಿಯ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಕೋಟ ಹೋಬಳಿಯ ಕೋಡಿಕನ್ಯಾಣ ಹಾಗೂ ಉಡುಪಿಯ ಹನುಮಂತ ನಗರದಲ್ಲಿ ವಿಶೇಷ ಮಾದರಿ ಮತಗಟ್ಟೆಗಳನ್ನು ರೂಪಿಸಿದ್ದು, ವಿಕಲಚೇತನರು ಮನೆಯಿಂದ ಹೊರಟು ಮತದಾನ ಮಾಡಿ ಮತ್ತೆ ಮನೆ ತಲುಪುವ ತನಕ ಬೇಕಿರುವ ಎಲ್ಲಾ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗಿದೆ.

ಮತಗಟ್ಟೆಯ ವಿಶೇಷ ಸೌಲಭ್ಯಗಳು
ಕೋಡಿಯಲ್ಲಿ ಗ್ರಾ.ಪಂ. ಕಚೇರಿಯಲ್ಲಿನ ಎಲ್ಲಾ ಪಿಠೊಪಕರಣ ಹಾಗೂ ಕಚೇರಿಯ ಸಾಮಾಗ್ರಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಿ, ಕಟ್ಟಡವನ್ನು ಸ್ವಲ್ಪಮಟ್ಟಿಗೆ ನವೀಕರಿಸಿ ವಿಕಲಚೇತನರ ಮತಗಟ್ಟೆಯಾಗಿ ಪರಿವರ್ತಿಸಲಾಗಿದೆ. ವಿಕಲಚೇತನರು ಮತಗಟ್ಟೆ ಪ್ರವೇಶಿಸಲು ಅನುಕೂಲವಾಗುವಂತೆ ಮೆಟ್ಟಿಲುಗಳನ್ನು ವಿನ್ಯಾಸಗೊಳಿಸಲಾಗಿದೆ ಹಾಗೂ ಬಾಗಿಲ ತನಕ ಕಬ್ಬಿಣದ ಹಿಡಿಗಳನ್ನು ಅಳವಡಿಸಲಾಗಿದೆ. ಮತ ಕೇಂದ್ರ ಪಿಂಕ್‌ ಬಣ್ಣದಿಂದ ಶೃಂಗರಿಸಲಾಗಿದೆ. ಪ್ರವೇಶದ್ವಾರದಲ್ಲಿ ಸ್ವಾಗತ್‌ ಕಮಾನ್‌ಗಳನ್ನು ಅಳವಡಿಸಲಾಗಿದೆ. ಸೂಕ್ತ ವಿದ್ಯುತ್‌ ವ್ಯವಸ್ಥೆ, ಫ್ಯಾನ್‌ ವ್ಯವಸ್ಥೆ, ವಿಕಲಚೇತನ ಸ್ನೇಹಿ ಹೊಸ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವೀಲ್‌ ಚೇರ್‌,ಸ್ಟಿಕ್‌ ಮುಂತಾದ ಸಾಧನ ಹಾಗೂ ಮತಗಟ್ಟೆಯ ಹೊರಗೆ ನೆರಳಿಗೆ ಶ್ಯಾಮಿಯಾನ ವ್ಯವಸ್ಥೆ, ತುರ್ತು ಚಿಕಿತ್ಸೆಗಾಗಿ ಆರೋಗ್ಯ ಸಹಾಯಕಿಯರು, ಸ್ವಯಂ ಸೇವಕರ ನಿಯೋಜನೆ, ಸನ್ನೆ ಹಾಗೂ ಸಂಜ್ಞಾ ಭಾಷೆಯಲ್ಲಿ ಮಾತನಾಡಿಸಲು ವ್ಯವಸ್ಥೆ, ಮತಗಟ್ಟೆಗೆ ಬರಲು ಮತ್ತು ವಾಪಸ್‌ ಹೋಗಲು ಸೂಕ್ತ ವಾಹನ ವ್ಯವಸ್ಥೆ, ವಾಹನ ನಿಲ್ಲಿಸಲು ಪಾರ್ಕಿಂಗ್‌ ವ್ಯವಸ್ಥೆ, ಸಹಾಯ ಕೇಂದ್ರ ಸ್ಥಾಪನೆ ಮುಂತಾದ ವ್ಯವಸ್ಥೆ ಮಾಡಲಾಗಿದೆ. ಈ ಮತಗಟ್ಟೆಗಳು ವಿಕಲಚೇತನ ಸಿಬಂದಿಗಳಿಂದ ನಿರ್ವಹಿಸುವ ಮತಗಟ್ಟೆಗಳಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತ್ತು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾ ಕಾರಿ ಸಿಂಧೂ ಬಿ ರೂಪೇಶ್‌ ಅವರು ವಿಶೇಷ ಮುತುವರ್ಜಿವಹಿಸಿ ಈ ಮತಗಟ್ಟೆಗಳನ್ನು ಸ್ಥಾಪಿಸಿದ್ದಾರೆ.

ಹೆಚ್ಚು ಮತದಾನಕ್ಕೆ ಪ್ರೇರೇಪಿಸಲು…
ಕೋಡಿ ಮತಕೇಂದ್ರದಲ್ಲಿ ಒಟ್ಟು ಮೂರು ಬೂತ್‌ಗಳಿದ್ದು ಇಲ್ಲಿ ಅತೀ ಹೆಚ್ಚಿನ ಸಂಖ್ಯೆಯ 45 ವಿಕಲಚೇತನ ಮತದಾರರಿದ್ದಾರೆ. ಇದುವರೆಗಿನ ಚುನಾವಣೆಗಳಲ್ಲಿ ಇಲ್ಲಿ ಶೇ. 30ರಿಂದ-35ರ ತನಕ ಮಾತ್ರ ವಿಕಲಚೇತನರ ಮತಗಳು ಚಲಾವಣೆಯಾಗುತ್ತಿದ್ದವು. ಹೀಗಾಗಿ ಈ ಬಾರಿ ಶೇ.100ರಷ್ಟು ವಿಕಲಚೇತನರ ಮತಚಲಾವಣೆಯ ಗುರಿ ಇರಿಸಿ ವಿಶೇಷ ಮತಗಟ್ಟೆ ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.