ಕೊಲ್ಲೂರು ದೇಗುಲದ ಆನೆ ಇಂದಿರಾ ಸಾವು
Team Udayavani, Aug 14, 2019, 12:26 AM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆನೆ ಇಂದಿರಾ ಅಸೌಖ್ಯದಿಂದ ಮಂಗಳವಾರ ರಾತ್ರಿ ಮೃತಪಟ್ಟಿದೆ.
ಕಳೆದ ಮೂರು ದಿನಗಳ ಹಿಂದೆ ಆನೆಗೆ ಜ್ವರ ಬಾಧಿಸಿತ್ತು. ಸ್ಥಳೀಯವಾಗಿ ಔಷಧೋಪಚಾರ ಮಾಡಿದರೂ ಜ್ವರ ಕಡಿಮೆಯಾಗದೆ ಉಲ್ಬಣಗೊಂಡ ಕಾರಣ ಮಂಗಳವಾರ ಸಕ್ರೆಬೈಲ್ನ ಆನೆ ವೈದ್ಯ ಡಾ| ವಿನಯ ಅವರನ್ನು ಕರೆಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಆನೆ ರಾತ್ರಿ ವೇಳೆಗೆ ಕೊನೆಯುಸಿರೆಳೆಯಿತು.
ಈ ಆನೆಯನ್ನು 22 ವರ್ಷಗಳ ಹಿಂದೆ ಬಾಳೆಹೊನ್ನೂರಿನ ಭಕ್ತರೋರ್ವರು ದೇಗುಲಕ್ಕೆ ಕಾಣಿಕೆ ರೂಪದಲ್ಲಿ ಅರ್ಪಿಸಿದ್ದರು. ಪ್ರಸ್ತುತ ಆನೆಗೆ 62 ವರ್ಷಗಳಾಗಿದ್ದು, ದೇಗುಲದಿಂದ ನಾಲ್ಕೈದು ಕಿ.ಮೀ. ದೂರದ ಕಲ್ಯಾಣಿ ಗುಡ್ಡೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ