ಮದುವೆಗೆಂದು ಹಾರಿಬಿಟ್ಟ ಡ್ರೋಣ್‌ ಕೆಮರಾದಲ್ಲಿ ಬಯಲಾಯ್ತು ಗುಟ್ಟು!


Team Udayavani, Mar 18, 2020, 4:40 AM IST

ಮದುವೆಗೆಂದು ಹಾರಿಬಿಟ್ಟ   ಡ್ರೋಣ್‌ ಕೆಮರಾದಲ್ಲಿ  ಬಯಲಾಯ್ತು ಗುಟ್ಟು!

ಕೋಟ: ಐರೋಡಿ ಗ್ರಾ.ಪಂ. ವ್ಯಾಪ್ತಿಯ 1ನೇ ಹಾಗೂ 2ನೇ ವಾರ್ಡ್‌ಗೆ ನೀರು ಪೂರೈಕೆ ಮಾಡುವ ಗೋಳಿಬೆಟ್ಟಿನಲ್ಲಿರುವ ನೀರಿನ ಟ್ಯಾಂಕ್‌ನ ಮೇಲ್ಭಾಗಕ್ಕೆ ಹಾನಿಯಾಗಿದ್ದು ಸಂಪೂರ್ಣವಾಗಿ ತೆರೆದ ಸ್ಥಿತಿಯಲ್ಲಿದೆ. ಹೀಗಾಗಿ ಕಸಕಡ್ಡಿ ಮುಂತಾದವುಗಳು ನೀರು ಸೇರುತ್ತಿದ್ದು ಅಶುದ್ಧ ನೀರು ಪೂರೈಕೆಯಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಮಗಾರಿಯಲ್ಲಿ ಲೋಪ?
ಈ ಟ್ಯಾಂಕ್‌ ಕೇವಲ 14 ವರ್ಷದ ಹಿಂದೆ ನಿರ್ಮಿಸ ಲಾಗಿತ್ತು. ಆದರೆ ಕಾಮಗಾರಿ ಸಂದರ್ಭ ಸರಿಯಾದ ಗುಣಮಟ್ಟವನ್ನು ಅನುಸರಿಸದಿರುವುದರಿಂದ ಅಲ್ಪ ಅವಧಿಯಲ್ಲೇ ಟ್ಯಾಂಕ್‌ನ ಮೇಲ್ಭಾಗ ಕುಸಿದಿದ್ದು ಸಂಪೂರ್ಣ ಶಿಥಿಲವಾಗಿದೆ. ಕಾಮಗಾರಿ ಗುಣಮಟ್ಟ ಕುರಿತು ಆರಂಭದಲ್ಲೇ ಅಪಸ್ವರ ವ್ಯಕ್ತವಾಗಿ ದೂರು ಕೂಡ ನೀಡಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಹೊಸ ಟ್ಯಾಂಕ್‌ ನಿರ್ಮಿಸಿ
ಇದೀಗ ಟ್ಯಾಂಕ್‌ನ ಕುಸಿದ ಮೇಲ್ಭಾಗವನ್ನು ದುರಸ್ತಿಗೊಳಿಸಲು ಗ್ರಾಮ ಪಂಚಾಯತ್‌ ಯೋಜನೆ ರೂಪಿಸಿದೆ. ಆದರೆ ಟ್ಯಾಂಕ್‌ ಸಂಪೂರ್ಣ ಶಿಥಿಲಗೊಂಡಿರುವುದರಿಂದ ದುರಸ್ತಿಪಡಿಸಿದರೆ ಪ್ರಯೋಜನವಿಲ್ಲ, ಆದ್ದರಿಂದ ಇದನ್ನು ತೆರವು ಗೊಳಿಸಿ ಹೊಸ ಟ್ಯಾಂಕ್‌ ನಿರ್ಮಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಬಯಲಾದ ಗುಟ್ಟು !
ವಿವಾಹ ಕಾರ್ಯಕ್ರಮವೊಂದರ ವೀಡಿಯೋ ಚಿತ್ರೀಕರಣಕ್ಕಾಗಿ ಡ್ರೋಣ್‌ ಕೆಮರಾ ಉಪಯೋಗಿಸಲಾಗಿತ್ತು. ಆಗ ಟ್ಯಾಂಕ್‌ನ ಮೇಲ್ಭಾಗ ಸಂಪೂರ್ಣ ತೆರೆದ ಸ್ಥಿತಿಯಲ್ಲಿರುವುದು ಗಮನಕ್ಕೆ ಬಂದಿದೆ. ಅನಂತರ ಸ್ಥಳೀಯರು ಆ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ಯಾಂಕ್‌ನಿಂದ ಪೂರೈಕೆಯಾಗುತ್ತಿಲ್ಲ
ಅಶುದ್ಧ ನೀರು ಪೂರೈಕೆಯಾಗುತ್ತಿರುವ ಕುರಿತು ಯಾವುದೇ ಗ್ರಾಮಸ್ಥರಿಂದ ದೂರು ಬಂದಿಲ್ಲ. ಕಳೆದ ವರ್ಷ ಟ್ಯಾಂಕ್‌ ಸ್ವತ್ಛಗೊಳಿಸುವಾಗ ಸ್ವಲ್ಪಮಟ್ಟಿಗೆ ಹಾನಿಯಾಗಿರುವುದು ತಿಳಿದಿತ್ತು ಹಾಗೂ ಕಳೆದ ಎರಡು ತಿಂಗಳಿಂದ ಟ್ಯಾಂಕ್‌ ಮೂಲಕ ನೀರು ಸರಬರಾಜು ಮಾಡುವುದನ್ನು ನಿಲ್ಲಿಸಿ ಪಂಪ್‌ನಿಂದ ನೇರವಾಗಿ ನೀಡುತ್ತಿದ್ದೇವೆ. ಇದರ ದುರಸ್ತಿಗಾಗಿ ಕ್ರಿಯಾ ಯೋಜನೆಯಲ್ಲಿ ಈಗಾಗಲೇ 1.5 ಲಕ್ಷ ಮೀಸಲಿರಿಸಿದ್ದೇವೆ. ಹೊಸ ಟ್ಯಾಂಕ್‌ ನಿರ್ಮಿಸಲು ಪಂಚಾಯತ್‌ ಅನುದಾನದಲ್ಲಿ ಅಸಾಧ್ಯ. ಶಾಸಕರು, ಜಿ.ಪಂ. ಅನುದಾನಕ್ಕೆ ಪ್ರಯತ್ನಿಸಲಾಗುವುದು.
-ಮೊಸೆಸ್‌ ರೋಡ್ರಿಗಸ್‌, ಅಧ್ಯಕ್ಷರು ಐರೋಡಿ ಗ್ರಾ.ಪಂ.

ಹೊಸ ಟ್ಯಾಂಕ್‌ ನಿರ್ಮಿಸಿ
ಹಲವು ಸಮಯದಿಂದ ಅಶುದ್ಧ ನೀರು ಪೂರೈಕೆಯಾಗುತ್ತಿದೆ. ಟ್ಯಾಂಕ್‌ ತೆರದ ಸ್ಥಿತಿಯಲ್ಲಿರುವುದರಿಂದ ಪಕ್ಷಿಗಳು ಮೀನು, ಹುಳುಹಪ್ಪಟೆ ಮುಂತಾದ ತ್ಯಾಜ್ಯಗಳನ್ನು ತಂದು ಟ್ಯಾಂಕಿಗೆ ಹಾಕುತ್ತವೆ. ಈಗಿರುವ ಟ್ಯಾಂಕ್‌ ಸಂಪೂರ್ಣ ಶಿಥಿಲಗೊಂಡಿದೆ. ಆದ್ದರಿಂದ ಹೊಸ ಟ್ಯಾಂಕ್‌ ನಿರ್ಮಿಸಿ ಶುದ್ಧ ನೀರು ಪೂರೈಕೆ ಮಾಡಬೇಕು.
-ಲೋಯಿದ್‌ ರೋಡ್ರಿಗಸ್‌, ಸ್ಥಳೀಯರು

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.