ಗಂಗೊಳ್ಳಿ : ವಾರದ ಸಂತೆಗಿಲ್ಲ ಸ್ವಂತ ಜಾಗ


Team Udayavani, Jun 21, 2019, 11:53 AM IST

kundapura-tdy-2..

ಕೆಸರಿನಲ್ಲೇ ನಡೆಯುತ್ತಿರುವ ಗಂಗೊಳ್ಳಿಯ ವಾರದ ಸಂತೆ.

ಗಂಗೊಳ್ಳಿ, ಜೂ. 20: ಅವಿಭಜಿತ ಕುಂದಾಪುರ ತಾಲೂಕಿನಲ್ಲಿಯೇ ದೊಡ್ಡ ಹಾಗೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ಗ್ರಾಮವಾದ ಗಂಗೊಳ್ಳಿಯಲ್ಲಿ ಪ್ರತಿ ಬುಧವಾರ ನಡೆಯುವ ವಾರದ ಸಂತೆಗೆ ಇನ್ನೂ ಕೂಡ ಸ್ವಂತ ಜಾಗವಿಲ್ಲ. ಕಳೆದ 4 -5 ವರ್ಷಗಳಿಂದ ಖಾಸಗಿ ಜಾಗ ವೊಂದರಲ್ಲಿ ವಾರದ ಸಂತೆ ನಡೆಯುತ್ತಿದೆ.

ಗಂಗೊಳ್ಳಿಯ ಮುಖ್ಯ ರಸ್ತೆಯ ಪಕ್ಕ ಅರೆಕಲ್ಲು ಸಮೀಪ ವಾರದ ಸಂತೆ ನಡೆಯುತ್ತಿದೆ. ಮೊದಲಿಗೆ ಇಲ್ಲಿನ ನಗರೇಶ್ವರಿ ದೇವಸ್ಥಾನ ಸಮೀಪದ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ವಾರದ ಸಂತೆ ಸುಮಾರು ಒಂದೂವರೆ ವರ್ಷಗಳ ಕಾಲ ನಡೆಯುತ್ತಿತ್ತು. ಆ ಬಳಿಕ ಇದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತದೆ ಎನ್ನುವ ಕಾರಣಕ್ಕೆ ಅರೆಕಲ್ಲು ಸಮೀಪ ಖಾಸಗಿ ವ್ಯಕ್ತಿಯೊಬ್ಬರ ಜಾಗವೊಂದರಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ವಾರದ ಸಂತೆ ನಡೆಯುತ್ತಿದೆ.

ಇಷ್ಟು ವರ್ಷಗಳಿಂದ ವಾರದ ಸಂತೆ ನಡೆಯುತ್ತಿದ್ದರೂ, ಇಲ್ಲಿನ ಪಂಚಾಯತ್‌ ಆಗಲಿ ಅಥವಾ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಂಘವಾಗಲಿ ಗಂಗೊಳ್ಳಿಯಲ್ಲಿ ಸಂತೆ ನಡೆಸಲು ಸ್ವಂತ ಜಾಗವನ್ನು ಗುರುತಿಸಿಲ್ಲ. ಸುಸಜ್ಜಿತ ಮಾರುಕಟ್ಟೆಗೆ ಬೇಕಾದ ಕಟ್ಟಡವಿಲ್ಲ. ಇಷ್ಟು ವರ್ಷಗಳಿಂದ ಇಲ್ಲಿ ಸಂತೆ ನಡೆಯುತ್ತಿದ್ದರೂ ಸೂಕ್ತವಾದ ಸರಕಾರಿ ಜಾಗವೊಂದನ್ನು ಗುರಿತಿಸಲು ಈವರೆಗೆ ಸಂಬಂಧಪಟ್ಟವರು ಯಾರೂ ಮುಂದಾಗಿಲ್ಲ.

ಸೂಕ್ತ ಸರಕಾರಿ ಜಾಗವಿಲ್ಲ:

ಇಲ್ಲಿ ಪ್ರತಿ ವಾರ ನಡೆಯುವ ಸಂತೆಗೆ ಸೂಕ್ತ ಜಾಗವನ್ನು ಒದಗಿಸಿಕೊಡಬೇಕು ಎನ್ನುವ ಯೋಜನೆಯಿದ್ದರೂ ಪಂಚಾಯತ್‌ ವ್ಯಾಪ್ತಿಯಲ್ಲಿ ಎಲ್ಲಿಯೂ ಸೂಕ್ತವಾದ ಸರಕಾರಿ ಜಾಗವಿಲ್ಲ. ರಥಬೀದಿಯಲ್ಲಿ ನಡೆಸುವುದು ಬೇಡ ಎಂದು ಸದಸ್ಯರೇ ಈ ಹಿಂದೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿನ ಗ್ರಾಮಸಭೆಯಲ್ಲಿಯೂ ಈ ಬಗ್ಗೆ ಚರ್ಚೆಯಾಗಿದ್ದು, ಈಗ ಸಂತೆ ನಡೆಯುವ ಜಾಗದವರೇ ವ್ಯಾಪಾರಿಗಳಿಂದ ಇಂತಿಷ್ಟು ಬಾಡಿಗೆ ರೂಪದಲ್ಲಿ ಸಂಗ್ರಹಿಸಿ ಪಂಚಾಯತ್‌ಗೆ ತಿಂಗಳಿಗೆ 2 ಸಾವಿರ ರೂ. ನೀಡುತ್ತಾರೆ. ಅದನ್ನು ಇನ್ನು 4 ಸಾವಿರ ರೂ. ಹೆಚ್ಚಿಸಿ ನಿರ್ಣಯ ಮಾಡಲಾಗಿದೆ. – ಚಂದ್ರಶೇಖರ್‌,ಪಿಡಿಒ ಗಂಗೊಳ್ಳಿ ಗ್ರಾ.ಪಂ.
ಕೆಸರಿನಲ್ಲೇ ವ್ಯಾಪಾರ:

ಮಳೆಗಾಲದಲ್ಲಿ ಅಂತೂ ಈಗ ನಡೆಯುತ್ತಿರುವ ಜಾಗದಲ್ಲಿ ತರಕಾರಿ, ಹಣ್ಣು, ಹೂವು, ದಿನಸಿ ವಸ್ತುಗಳನ್ನು ಕೆಸರಿನಲ್ಲೇ ಇಟ್ಟುಕೊಂಡು ಮಾರಾಟ ಮಾಡಬೇಕಾದ ಪರಿಸ್ಥಿತಿಯಿದೆ. ಸಂತೆಯ ಈ ದುಸ್ಥಿತಿಯಿಂದಾಗಿ ಮಳೆ ಬಂದರೆ ಖರೀದಿಗೆ ಗ್ರಾಹಕರು ಕೂಡ ಬರುವುದಿಲ್ಲ. ಸಂಬಂಧಪಟ್ಟವರು ವಾರದ ಸಂತೆಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟರೆ ಅನುಕೂಲವಾಗುತ್ತದೆ ಎನ್ನುವುದು ಇಲ್ಲಿಗೆ ಮಾರಾಟ ಮಾಡಲು ಬಂದ ವ್ಯಾಪಾರಿಯೊಬ್ಬರ ಅಭಿಪ್ರಾಯ.

 

.ವಿಶೇಷ ವರದಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.