ಸಂಪೂರ್ಣ ಹದಗೆಟ್ಟ ರಸ್ತೆ: ಹಟ್ಟಿಯಂಗಡಿ- ಕೊಲ್ಲೂರು ಸಂಚಾರ ದುಸ್ತರ


Team Udayavani, Apr 17, 2019, 6:30 AM IST

hattiyangady-kollur

ಕೊಲ್ಲೂರು: ಹಟ್ಟಿಯಂಗಡಿಯಿಂದ ಕೊಲ್ಲೂರು ಕ್ಷೇತ್ರಕ್ಕೆ ನೇರ ಸಂಪರ್ಕದ ಸನಿಹದ ಜಾಡಿ ಮಾರ್ಗವು ಸಂಪೂರ್ಣ ಹಾಳಾಗಿದ್ದು ಪಾದಚಾರಿಗಳ ಸಂಚಾರಕ್ಕೂ ಅಯೋಗ್ಯವಾಗಿದೆ.

ಹಟ್ಟಿಯಂಗಡಿ ಕ್ರಾಸ್‌ನಿಂದ ಸಾಗುವ ಈ ಮಾರ್ಗವು ಕೊಲ್ಲೂರಿಗೆ ತೆರಳಲು ಸುಮಾರು 5 ಕಿ.ಮೀ. ಹತ್ತಿರದ ಮಾರ್ಗವಾಗಿದ್ದು, ವಾಹನ ದಟ್ಟಣೆ ಕಡಿಮೆ ಇರುವ ಮಾರ್ಗವೂ ಹೌದು.

ಈ ರಸ್ತೆಗೆ ಹಾಕಲಾದ ಡಾಮರು ಸಂಪೂರ್ಣ ಎದ್ದು ಹೋಗಿದ್ದು ರಸ್ತೆಯುದ್ದಕ್ಕೂ ಹೊಂಡ-ಗುಂಡಿಗಳು ನಿರ್ಮಣವಾಗಿವೆ. ಹಟ್ಟಿಯಂಗಡಿ ಹಾಗೂ ಕಟ್‌ಬೇಲೂ¤ರು ಗ್ರಾ.ಪಂ. ವ್ಯಾಪ್ತಿಗೆ ಸೇರಿದ ಈ ರಸ್ತೆಯ ದುರಸ್ತಿ ಬಗ್ಗೆ ಗ್ರಾ.ಪಂ. ಹಾಗೂ ತಾ.ಪಂ. ಸಭೆಗಳಲ್ಲಿ ಬಹಳಷ್ಟು ಚರ್ಚೆ ನಡೆದಿದ್ದರೂ ಅಭಿವೃದ್ಧಿ ಕಾರ್ಯ ಮಾತ್ರ ಹಲವು ವರ್ಷಗಳಿಂದಲೂ ಗಗನ ಕುಸುಮವಾಗಿಯೇ ಉಳಿದಿದೆ.

ಅಪಘಾತ ಆಹ್ವಾನಿಸುವ ಕಿರು ಸೇತುವೆ
ಜಾಡಿಯ ಮುಖ್ಯ ರಸ್ತೆಗೆ ಅಡ್ಡದಾಗಿ ಹರಿವ ಹೊಳೆಗೆ ನಿರ್ಮಿಸಲಾದ ಕಿರುಸೇತುವೆಯು ಅವೈಜ್ಞಾನಿಕ ಮಾದರಿ ಯಲ್ಲಿದ್ದು ಹೊಸದಾಗಿ ಈ ಮಾರ್ಗದಲ್ಲಿ ಚಲಾಯಿಸುವ ವಾಹನ ಸವಾರರಿಗೆ ರಸ್ತೆ ಅಪಘಾತ ಇಲ್ಲಿ ಕಟ್ಟಿಟ್ಟ ಬುತ್ತಿ. ಹಲವಾರು ಅಪಘಾತಗಳು ನಡೆದಿದ್ದರೂ ಈ ಬಗ್ಗೆ ಯಾರೂ ಗಮನಹರಿಸಿಲ್ಲ.

ವಿಸ್ತರಣೆ ಅಗತ್ಯ
ಅಗಲ ಕಿರಿದಾದ ಜಾಡಿ ರಸ್ತೆಯ ವಿಸ್ತರಣೆಯೊಡನೆ ಸಂಪೂರ್ಣ ಡಾಮರೀಕರಣ ಅಗತ್ಯವಾಗಿದೆ. ರಸ್ತೆಯ ದುರಾವಸ್ತೆಯ ಕಾರಣ ದ್ವಿಚಕ್ರ ವಾಹನ ಸಹಿತ ಲಘು ವಾಹನದಲ್ಲಿ ಸಾಗುವವರಿಗೆ ಈ ಮಾರ್ಗವು ಸದಾ ಕಿರಿಕಿರಿ ಉಂಟುಮಾಡುತ್ತಿದೆ. ರಾತ್ರಿ ಹೊತ್ತಿನಲ್ಲಿ ಪಾದಚಾರಿಗಳೂ ಸಾಗದಷ್ಟು ಹದಗೆಟ್ಟಿರುವ ಇಲ್ಲಿನ ಮುಖ್ಯರಸ್ತೆಯ ಅಭಿವೃದ್ಧಿ ಕನಸು ನನಸಾಗದಿದ್ದಲ್ಲಿ ಮುಂಬರುವ ಮಳೆಗಾಲದಲ್ಲಿ ಸಂಚಾರ ವ್ಯವಸ್ಥೆ ಭಯಾನಕವಾಗಲಿದೆ ಎನ್ನುತ್ತಾರೆ ಸ್ಥಳೀಯರು.

ಜಿ.ಪಂ. ವ್ಯಾಪ್ತಿಗೆ ಸೇರಿದ ಈ ರಸ್ತೆಯ ಡಾಮರೀಕರಣಕ್ಕೆ ಭಾರಿ ಮೊತ್ತದ ಹಣದ ಅಗತ್ಯವಿರುವುದರಿಂದ ವಿಶೇಷ ಅನುದಾನದ ಮೂಲಕ ರಸ್ತೆ ದುರಸ್ತಿ ಮಾಡಬೇಕು ಅಥವಾ ರಸ್ತೆಯನ್ನು ಮೇಲ್ದರ್ಜೆಗೇರಿಸಿ ಅನುದಾನ ಒದಗಿಸಬೇಕು ಎಂಬ ಒಕ್ಕೊರಲ ಅಭಿಪ್ರಾಯವೂ ಕೇಳಿಬಂದಿದೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ಲೋಕೋಪಯೋಗಿ ಇಲಾಖೆಯ ವತಿಯಿಂದ ಹಟ್ಟಿಯಂಗಡಿಯಿಂದ ಜಾಡಿಯ ಕೊಲ್ಲೂರು ತಿರುವಿನ ವರೆಗಿನ 5ಕಿ.ಮೀ. ದೂರದ ವರೆಗೆ ರಸ್ತೆಯ ಸಂಪೂರ್ಣ ಡಾಮರೀಕರಣದೊಡನೆ ಕಿರು ಸೇತುವೆಯ ಪುನರ್‌ ನಿರ್ಮಾಣದ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೂ. 8 ಕೋಟಿ ವೆಚ್ಚದ ಪ್ರಸ್ತಾವನೆಯ ಮಂಜೂರಾತಿಯ ನಿರೀಕ್ಷೆಯಲ್ಲಿದ್ದರೂ ತಾಂತ್ರಿಕ ಕಾರಣಗಳಿಂದ ಅದನ್ನು ತಡೆಹಿಡಿಯಲಾಗಿದೆ.ಪ್ರಯತ್ನ ಮುಂದುವರಿಯುತ್ತಿದೆ.
-ಚಂದ್ರಶೇಖರ್‌,
ಕಾರ್ಯನಿರ್ವಾಹಕ ಎಂಜಿನಿಯರ್‌ ಲೋಕೋಪಯೋಗಿ ಇಲಾಖೆ, ಉಡುಪಿ

ಮುತುವರ್ಜಿ ವಹಿಸಿ
ಇಷ್ಟೊಂದು ದುಸ್ಥಿತಿಯಲ್ಲಿರುವ ಹಟ್ಟಿಯಂಗಡಿ-ಜಾಡಿ ರಸ್ತೆಯ ಡಾಮರೀಕರಣಕ್ಕೆ ಇಲಾಖೆ ಮುತುವರ್ಜಿ ವಹಿಸಿ, ನಿತ್ಯ ಪ್ರಯಾಣಿಕರ ಸಂಕಷ್ಟವನ್ನು ದೂರಮಾಡಬೇಕು.
-ಪ್ರಭಾಕರ್‌, ಸ್ಥಳೀಯರು

  • ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.