ಅಸಮರ್ಪಕ ಚರಂಡಿ ಕಾಮಗಾರಿ: ಮನೆಯಂಗಳಕ್ಕೆ ನುಗ್ಗಿದ ಮಳೆ ನೀರು
Team Udayavani, Jul 12, 2019, 5:09 AM IST
ಕುಂದಾಪುರ: ಮುಂಗಾರು ಮಳೆ ಕಳೆದ 2-3 ದಿನಗಳಿಂದ ಬಿರುಸಾಗಿದ್ದು, ಒಂದೊಂದಾಗಿಯೇ ಮಳೆ ಆವಾಂತರಗಳು ಬೆಳಕಿಗೆ ಬರುತ್ತಿವೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಸರಕಾರಿ ಆಸ್ಪತ್ರೆ ವಾರ್ಡಿನಲ್ಲಿ ಅಸಮರ್ಪಕ ಚರಂಡಿ ಕಾಮಗಾರಿಯಿಂದಾಗಿ ಮನೆಯಂಗಳಕ್ಕೆ ನೀರು ನುಗ್ಗಿ ಸಮಸ್ಯೆಯಾಗುತ್ತಿದೆ.
ಸರಕಾರಿ ಆಸ್ಪತ್ರೆ ವಾರ್ಡ್ನ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆ (ಈಗ ಇದುವೇ ಮುಖ್ಯ ರಸ್ತೆ) ಹಾದು ಹೋಗುವ ಸಮೀಪದ ಚರಂಡಿ ಕಾಮಗಾರಿ ಅಸಮರ್ಪಕವಾಗಿದ್ದು, ಇಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುತ್ತಿಲ್ಲ. ಇದರಿಂದ ಇಲ್ಲಿರುವ ಗೌರಿ ದೇವಾಡಿಗ ಎನ್ನುವವರ ಮನೆಯಂಗಳದಲ್ಲೇ ನೀರು ನಿಂತಿದೆ. ಅಂಗಳವಿಡೀ ಕೃತಕ ಈಜು ಕೊಳದಂತಾಗಿ ಮನೆ – ಮಂದಿ ಹೊರ ಬರದಂತಾಗಿದೆ. ಇನ್ನು ಅಕ್ಕ- ಪಕ್ಕದ ಗ್ಯಾರೇಜ್, ಅಂಗಡಿಗಳಿಗೂ ಸಮಸ್ಯೆಯಾಗುತ್ತಿದೆ.
ಈ ಮೊದಲೇ ಎಚ್ಚರಿಸಿದ್ದರು
3 ದಿನಗಳಿಂದಲೂ ಇದೇ ಸಮಸ್ಯೆ ಯಾಗಿದ್ದು, ಈ ಬಗ್ಗೆ ಸ್ಥಳೀಯ ವಾರ್ಡ್ ಸದಸ್ಯೆ ದೇವಕಿ ಸಣ್ಣಯ್ಯ ಅವರು ಮಳೆಗಾಲ ಆರಂಭಕ್ಕೂ ಮುನ್ನವೇ ಪುರಸಭೆ ಮುಖ್ಯಾಧಿಕಾರಿ ಸಹಿತ ಅಧಿಕಾರಿಗಳಿಗೆ ಸರಿಪಡಿಸುವಂತೆ ಎಚ್ಚರಿಸಿದ್ದರು. ಆದರೂ ಯಾವುದೇ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಈಗ ಸಮಸ್ಯೆ ಉಂಟಾಗಿದೆ.
ಸಾಂಕ್ರಾಮಿಕ ರೋಗ ಭೀತಿ
ಇಲ್ಲಿರುವ ಮನೆಗಳ ಸುತ್ತಲಿರುವ ಚರಂಡಿಯಲ್ಲಿ ಮಳೆ ನೀರು ಹರಿದು ಹೋಗದೇ ಹಾಗೆಯೇ ನಿಂತಿದ್ದು, ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ, ಈ ಪ್ರದೇಶದಲ್ಲಿ ಸಾಂಕ್ರಮಿಕ ರೋಗಗಳು ಕಾಣಿಸಿಕೊಳ್ಳುವ ಭೀತಿ ಇಲ್ಲಿನ ಜನರಲ್ಲಿ ಆವರಿಸಿದೆ.
ಮನವಿ ನೀಡಲಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ