ಚಾರ್ಮಾಡಿಯಿಂದ ಕೊಡಚಾದ್ರಿ: ಕಾಡಿನಲ್ಲಿ 300 ನೀರಿನ ತೊಟ್ಟಿ

ಪ್ರಾಣಿಗಳ ದಾಹ ನೀಗಿಸಲು ಪರಿಸರಾಸಕ್ತರ ನಿರ್ಧಾರ

Team Udayavani, Jul 9, 2019, 5:21 AM IST

toti

ಕುಂದಾಪುರ: ಪಶ್ಚಿಮಘಟ್ಟದಲ್ಲಿ ನೀರಿನ ಹರಿವಿನ ಕೊರತೆಯಾಗಿದೆ. ಈ ಬಾರಿ ಮಳೆಯಾಗಿಲ್ಲ . ಈ ಬೇಸಗೆಯಲ್ಲಿ ಮನುಷ್ಯರಿಗಷ್ಟೇ ಅಲ್ಲ ಪ್ರಾಣಿಗಳಿಗೂ ಕುಡಿಯುವ ನೀರಿನ ಅಭಾವವಾಗಿತ್ತು. ನೀರನ್ನರಸುತ್ತಾ ಕಾಡು ಪ್ರಾಣಿಗಳು ಊರಿಗೆ ಲಗ್ಗೆ ಹಾಕುವುದು ಸಾಮಾನ್ಯವಾಗಿತ್ತು. ಇದಕ್ಕಾಗಿ ಪರಿಸರಾಸಕ್ತರು ಸ್ವಪ್ರೇರಿತರಾಗಿ ಕಾಡಿನಲ್ಲಿ 300 ನೀರಿನ ಕಾಂಕ್ರೀಟ್ ತೊಟ್ಟಿಗಳನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ.

ಎಲ್ಲೆಡೆ ಸಮಸ್ಯೆ

ಈ ಬಾರಿಯ ಬೇಸಗೆಯಲ್ಲಿ ಹಿಂದೆಂದಿಗಿಂತ ಹೆಚ್ಚಾಗಿ ಕರಾವಳಿಯ ದ.ಕ. ಉಡುಪಿ, ಉತ್ತರಕನ್ನಡದಲ್ಲೂ ನೀರಿನ ಸಮಸ್ಯೆ ತೀವ್ರವಾಗಿತ್ತು. ಅತ್ತ ಶಿವಮೊಗ್ಗದಲ್ಲೂ ತೀರಾ ಭಿನ್ನ ಪರಿಸ್ಥಿತಿ ಇರಲಿಲ್ಲ. ಪಶ್ಚಿಮಘಟ್ಟದಲ್ಲಿ ಸಾಕಷ್ಟು ವಿಶಿಷ್ಟ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದ ಜೀವಸಂಕುಲಗಳಿವೆ. ಇನ್ನೆಲ್ಲೂ ಕಾಣಸಿಗದ ಜೀವವೈವಿಧ್ಯಗಳಿವೆ. ವಿಶಾಲವಾದ ಕಾಡಿನಲ್ಲಿ ಅಲ್ಲಲ್ಲಿ ನೀರಿನ ಆಶ್ರಯ ಇರುವುದರಿಂದ ಪ್ರಾಣಿಗಳು ಬಾಯಾರಿಕೆ ನೀಗಿಸಿಕೊಳ್ಳಲು ಸಮಸ್ಯೆ ಇರಲಿಲ್ಲ. ಆದರೆ ಕಾಡ್ಗಿಚ್ಚು ಹಾಗೂ ಅರಣ್ಯ ಲೂಟಿ ಯಿಂದ ಕಾಡಿನ ಮರಗಳ ಸಂಖ್ಯೆಯೂ ಕ್ಷೀಣಿಸಿದೆ.

ವಲಸೆ

ಸಾಮಾನ್ಯವಾಗಿ ಕಾಡುಪ್ರಾಣಿಗಳು ಕಾಡಿನಲ್ಲಿ ಕೆರೆಗಳು, ನೀರಿನ ಒರತೆ ಬತ್ತಿಹೋದಾಗ ನೀರಿರುವ ಪ್ರದೇಶಕ್ಕೆ ವಲಸೆ ಹೋಗುತ್ತವೆ. ವನ್ಯಜೀವಿಗಳು ಕೂಗುತ್ತಾ ನೀರರಸುತ್ತಾ ಕಾಡಂಚಿನ ಭಾಗದಲ್ಲಿ ತಿರುಗಾಡುವ ದೃಶ್ಯ ಕಾಣಿಸುತ್ತಿತ್ತು.

ಕುಂದಾಪುರ ತಾಲೂಕಿನಲ್ಲಿ ವಾರಾಹಿ ಕಾಲುವೆ ಇರುವ ಕಾರಣ, ವಾರಾಹಿಯ ಸಮೃದ್ಧ ನೀರು ಕಾಡಿನ ಪ್ರಾಣಿಗಳಿಗೆ ನೀರಿನಾಶ್ರಯವಾಗಿದೆ. ಆದರೆ ಕಾಲುವೆಯಲ್ಲಿ ಕಾಡುಪ್ರಾಣಿಗಳಿಗೆ ನೀರು ಕುಡಿಯಲು ಅವಕಾಶ ಇಲ್ಲ. ಕಾಲುವೆ ಆಳಕ್ಕೆ ಇಳಿಯಲು ವ್ಯವಸ್ಥೆ ಇಲ್ಲ. ಪ್ರಾಣಿಗಳು ಬೀಳುವ ಅಪಾಯದ ಸಾಧ್ಯತೆಯೇ ಹೆಚ್ಚು.

ತೊಟ್ಟಿ ರಚನೆ

ಮುಂದಿನ ಬೇಸಗೆಯಲ್ಲಿ ಪ್ರಾಣಿಗಳಿಗೆ ನೀರಿಗೆ ಸಮಸ್ಯೆಯಾಗದಂತೆ ಖಾಸಗಿಯಾಗಿಯೇ ಒಂದಷ್ಟು ತೊಟ್ಟಿಗಳನ್ನು ನಿರ್ಮಿಸಿಕೊಡಬೇಕೆಂದು ಎನ್‌ಇಸಿಎಫ್ ಸಂಘಟನೆ ನಿಶ್ಚಯಿಸಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿದ್ದು ಶೀಘ್ರದಲ್ಲಿಯೇ ಅರಣ್ಯ ಇಲಾಖೆ ಜತೆ ಸಮಾಲೋಚನೆ ನಡೆಸಲಿದೆ.

ಮಾಹಿತಿ ಸಂಗ್ರಹ

ಚಾರ್ಮಾಡಿಯಿಂದ ಕೊಡಚಾದ್ರಿವರೆಗೆ ದ.ಕ. ಉಡುಪಿ ಜಿಲ್ಲೆಗಳಲ್ಲಿ ಹಾದುಹೋಗುವ ಪಶ್ಚಿಮ ಘಟ್ಟದಲ್ಲಿ ಎಲ್ಲೆಲ್ಲೆ ಪ್ರಾಣಿಗಳಿಗೆ ಕುಡಿಯುವ ನೀರಿನ ತೀವ್ರ ಬರ ಎದುರಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತದೆ. ನಂತರ ಜೀವವೈವಿಧ್ಯ ಎಲ್ಲಿ ಸಾಕಷ್ಟು ಸಂಖ್ಯೆಯಲ್ಲಿದೆ, ಎಲ್ಲಿ ಅಳವಿನಿಂಚಿನ ಪ್ರಾಣಿಗಳಿವೆ, ಯಾವ ಪ್ರಾಣಿಗಳಿಗೆ ನೀರು ಹುಡುಕುತ್ತಾ ವಲಸೆ ಹೋಗುವುದು ಕಷ್ಟ ಎಂಬ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ. ಎಲ್ಲಿ ನೀರಿನ ಒರತೆ ಬತ್ತುತ್ತದೆ ಎಂದು ಕೂಡಾ ಗಮನಿಸಲಾಗುತ್ತದೆ. ಇಷ್ಟಾದ ಬಳಿಕ ಅರಣ್ಯ ಇಲಾಖೆಯ ಸಂಬಂಧಪಟ್ಟ ವಿಭಾಗಗಳ ಅಧಿಕಾರಿಗಳನ್ನು ಕೂಡಿಕೊಂಡು ತೊಟ್ಟಿ ಹಾಕಲಾಗುತ್ತದೆ.

ತೊಟ್ಟಿ

ನೀರಿನ ತೊಟ್ಟಿಗಳನ್ನು ಇಡುವ ಕುರಿತು ಯೋಚಿಸ ಲಾಗಿದೆ. 6×6 ಅಳತೆಯ 1.5 ಅಡಿ ಎತ್ತರದ ಇಳಿಜಾರು ಮಾದರಿಯ ತೊಟ್ಟಿಗಳನ್ನು ನಿರ್ಮಿಸಲಾಗುತ್ತದೆ. 300 ಮೀ.ಗೊಂದರಂತೆ ಸುಮಾರು 300 ತೊಟ್ಟಿ ಗಳನ್ನು ಹಾಕುವ ಯೋಚನೆಯಿದೆ. ಈ ತೊಟ್ಟಿಗೆ ಯಾವುದೇ ಸಣ್ಣ ಸಣ್ಣ ಪ್ರಾಣಿಗಳು ಬಿದ್ದರೂ ಅವು ರಕ್ಷಿಸಿಕೊಂಡು ಹೋಗುವ ಮಾದರಿಯಲ್ಲಿ ಇರಲಿವೆ. ಈ ತೊಟ್ಟಿಗಳಿಗೆ ಸ್ಥಳೀಯರು ಅಥವಾ ಅರಣ್ಯ ಇಲಾಖೆಯವರು ನೀರು ಹಾಕುವ ಜವಾಬ್ದಾರಿ ಕೂಡಾ ನೀಡಲಾಗುವುದು. ತೊಟ್ಟಿಗಳ ವೆಚ್ಚವನ್ನು ಪರಿಸರಾಸಕ್ತ ದಾನಿಗಳೇ ಭರಿಸಲಿದ್ದಾರೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.