ಕುಂದಾಪುರ ತಾ.ಪಂ. ವಿಭಜನೆ: ಬೈಂದೂರು ತಾ.ಪಂ. ರಚನೆ


Team Udayavani, Jul 16, 2019, 5:30 AM IST

kundapura-vibajane

ಕುಂದಾಪುರ: ಬೈಂದೂರು ಹೊಸ ತಾಲೂಕು ರಚನೆ ಬಳಿಕ ಎರಡನೆ ಹಂತವಾಗಿ ಬೈಂದೂರು ತಾಲೂಕು ಪಂಚಾಯತ್‌ ಪ್ರತ್ಯೇಕವಾಗಿ ರಚನೆಯಾಗುತ್ತಿದೆ. ಕುಂದಾಪುರ ತಾಲೂಕು ಪಂಚಾಯತ್‌ ವಿಭಜನೆಯಾಗಲಿದ್ದು ಮೊದಲ ಹಂತವಾಗಿ ಬೈಂದೂರಿಗೆ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಯನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಬೈಂದೂರು ಒಂದೇ ಹೋಬಳಿಗೆ ಒಂದು ತಾಲೂಕು ಪಂಚಾಯತ್‌ ಸೃಷ್ಟಿಯಾಗಲಿದೆ. ಈ ಮೂಲಕ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, 37 ಸದಸ್ಯಬಲದ ಕುಂದಾಪುರ ತಾಲೂಕು ಪಂಚಾಯತ್‌ 23ಕ್ಕೆ ಇಳಿಯಲಿದ್ದು 14 ಸದಸ್ಯರು, 18 ಪಂಚಾಯತ್‌ಗಳು ಬೈಂದೂರು ತಾಲೂಕು ಪಂಚಾಯತ್‌ ವ್ಯಾಪ್ತಿಗೆ ಸೇರಲಿದ್ದಾರೆ.

ತಾಲೂಕು ರಚನೆ
2017ರ ಡಿ.16ರಂದು ಬೈಂದೂರು ತಾಲೂಕು ಪ್ರತ್ಯೇಕ ಘೋಷಣೆಗೆ ಆಕ್ಷೇಪಣೆ ಸಲ್ಲಿಸಲು 30 ದಿನಗಳ ಗಡುವು ನೀಡಿ ಅಧಿಸೂಚನೆ ಹೊರಡಿಸಲಾಗಿತ್ತು. 2018ರ ಜ.27ರಂದು ಈ ಕುರಿತು ಅಧಿಸೂಚನೆ ಹೊರಡಿಸಿತು. ಕುಂದಾಪುರ ತಾಲೂಕಿನಲ್ಲಿದ್ದ 101 ಗ್ರಾಮಗಳ ಪೈಕಿ 26 ಗ್ರಾಮಗಳನ್ನು ಹೊಸ ತಾಲೂಕಿಗೆ ಸೇರಿಸಲಾಗಿತ್ತು.

ಎರಡನೆ ಹಂತ
ತಾಲೂಕು ರಚನೆ ಬಳಿಕ ಎರಡನೆ ಹಂತವಾಗಿ ತಾಲೂಕು ಪಂಚಾಯತ್‌ ರಚನೆಗೆ ಮುಂದಾಗಿದೆ. ಇದರನ್ವಯ ಶಿರೂರು ಪಂಚಾಯತ್‌ನ ಶಿರೂರು, ಪಡುವರಿ ಪಂ., ಉಪ್ಪುಂದ ಪಂ., ಬಿಜೂರು ಪಂ., ಕೆರ್ಗಾಲ್‌ ಪಂಚಾಯತ್‌ನ ಕೆರ್ಗಾಲ್‌ ಹಾಗೂ ನಂದನವನ, ಕೊಲ್ಲೂರು ಪಂ., ಜಡ್ಕಲ್‌ ಪಂ.ನ ಜಡ್ಕಲ್‌, ಮುದೂರು, ಗೋಳಿಹೊಳೆ ಗ್ರಾ.ಪಂ.ನ ಗೋಳಿಹೊಳೆ, ಮುದೂರು, ಕಾಲೊ¤àಡು ಪಂ., ಕಂಬದಕೋಣೆಯ ಕಂಬದಕೋಣೆ, ಹೆರಂಜಾಲು, ಹೇರೂರು ಪಂಚಾಯತ್‌ನ ಹೇರೂರು, ಉಳ್ಳೂರು 2, ಕಿರಿಮಂಜೇಶ್ವರ ಪಂ., ನಾವುಂದ ಪಂ., ಮರವಂತೆ ಪಂ., ಯಡ್ತರೆ ಪಂ., ಬೈಂದೂರು ಪಂ.ನ ಬೈಂದೂರು, ತೆಗ್ಗರ್ಸೆ, ಹಳ್ಳಿಹೊಳೆ ಪಂ., ನಾಡಾ ಪಂ.ನ ನಾಡಾ, ಹಡವು, ಬಡಾಕೆರೆ ಗ್ರಾಮಗಳು ಹೊಸದಾಗಿ ರಚನೆಯಾಗುವ ತಾಲೂಕು ಪಂಚಾಯತ್‌ ವ್ಯಾಪ್ತಿಗೆ ಸೇರಲಿವೆ.

ತಾ.ಪಂ. ಸದಸ್ಯರು
ಪ್ರಸ್ತುತ 37 ಸದಸ್ಯಬಲ ಹೊಂದಿದ ಕುಂದಾಪುರ ತಾ.ಪಂ. ಕಿರಿದಾಗಲಿದೆ. 14 ತಾಲೂಕು ಪಂಚಾಯತ್‌ ಸದಸ್ಯರು, 3 ಜಿಲ್ಲಾ ಪಂಚಾಯತ್‌ ಸದಸ್ಯರು ಹೊಸ ತಾ.ಪಂ.ನಲ್ಲಿ ಇರಲಿದ್ದಾರೆ.

ತಾ. ಪಂ. ಸದಸ್ಯರಾದ ದಸ್ತಗಿರಿ ಮೌಲಾನಾ, ಪುಷ್ಪರಾಜ್‌ ಶೆಟ್ಟಿ, ಗಿರಿಜಾ ಖಾರ್ವಿ, ಪ್ರಮೀಳಾ ದೇವಾಡಿಗ, ಜಗದೀಶ್‌ ದೇವಾಡಿಗ, ಗಿರಿಶ್ಮಾ, ವಿಜಯ ಶೆಟ್ಟಿ, ಮಹೇಂದ್ರ ಪೂಜಾರಿ, ಶ್ಯಾಮಲಾ ಕುಂದರ್‌, ಜಗದೀಶ್‌ ಪೂಜಾರಿ, ಸುಜಾತಾ ದೇವಾಡಿಗ, ಮಾಲಿನಿ ಕೆ., ಪೂರ್ಣಿಮಾ, ಪ್ರವೀಣ್‌ ಕುಮಾರ್‌, ಜಿ.ಪಂ. ಸದಸ್ಯರಾದ ಸುರೇಶ್‌ ಬಟವಾಡಿ, ಗೌರಿ ದೇವಾಡಿಗ, ಶಂಕರ ಪೂಜಾರಿ ಹಾಗೂ ರೋಹಿತ್‌ ಕುಮಾರ್‌ ಶೆಟ್ಟಿ, ಕೆ. ಬಾಬು ಶೆಟ್ಟಿ ಅವರ ಭಾಗಶಃ ವ್ಯಾಪ್ತಿಗಳು ಇರಲಿವೆ.

ಕಟ್ಟಡ
ತಾತ್ಕಾಲಿಕವಾಗಿ ಬೈಂದೂರು ತಾ.ಪಂ. ಈಗ ಇರುವ ಸ್ತ್ರೀಶಕ್ತಿ ಸಂಘದ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದೆ. ನಂತರ ಹೊಸ ಕಟ್ಟಡ ರಚನೆಗೆ ಅನುದಾನ ಬಿಡುಗಡೆಯಾಗಬೇಕಿದೆ.

ಅಭಿವೃದ್ಧಿಗೆ ವರದಾನ
ಪ್ರತ್ಯೇಕ ತಾ.ಪಂ. ರಚನೆಯಾದರೆ ಆ ಪ್ಯಾಪ್ತಿಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆಯಲಿದೆ. ವಾರ್ಷಿಕ ಅನುದಾನ, ಉದ್ಯೋಗ ಖಾತ್ರಿ, ವಸತಿ ಯೋಜನೆಗಳು ಹೀಗೆ ಎಲ್ಲವೂ ಪ್ರತ್ಯೇಕ ದೊರೆಯಲಿದೆ. ಇದರಿಂದಾಗಿ ಎರಡೂ ತಾಲೂಕಿಗೆ ಪ್ರಯೋಜನ ಆಗಲಿದೆ.

ಚುನಾವಣೆ ಇಲ್ಲ
ಹೊಸದಾಗಿ ಬೈಂದೂರು ತಾ.ಪಂ. ರಚನೆಯಾದರೂ ಚುನಾವಣೆ ಸದ್ಯಕ್ಕಿಲ್ಲ. ಈಗ ಇರುವ ಸದಸ್ಯರೇ ಹೊಸ ಆಡಳಿತ ಮಂಡಳಿ ರಚಿಸಿ ತಾ.ಪಂ. ಸಭೆ ನಡೆಸಲು ಕಾನೂನಿನಲ್ಲಿ ಅವಕಾಶ ಇದೆ. ಅವರು ಆಯ್ಕೆಯಾಗಿ ಐದು ವರ್ಷದ ಅವಧಿಯಾಗುವಾಗ ನಡೆಯುವ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲೇ ಚುನಾವಣೆ ನಡೆಯುತ್ತದೆ.

ಅಧ್ಯಕ್ಷ, ಉಪಾಧ್ಯಕ್ಷ
ತಾ.ಪಂ.ಗೆ ಈಗ ಜಿ.ಪಂ.ನಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿರುವ ಭಾರತಿ ಅವರನ್ನು ಕಾರ್ಯನಿರ್ವಹಣಾಧಿಕಾರಿ ಯಾಗಿ ನೇಮಿಸಿ ಆದೇಶ ಹೊರಡಿಸಿದೆ. ಪ್ರತ್ಯೇಕ ತಾ.ಪಂ. ರಚನೆಗೆ ಇನ್ನೂ ಗಜೆಟ್‌ ಆದೇಶ ಹೊರಬಿದ್ದಿಲ್ಲ. ಅನಂತರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಯಾಗುತ್ತದೆ. ಹೊಸ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದು ಇದೇ 14 ಮಂದಿಗೆ ಪ್ರತ್ಯೇಕ ಸಭೆ ನಡೆಯಲು ಅವಕಾಶ ಇದೆ. ಈಗ ಕುಂದಾಪುರ ತಾ.ಪಂ. ಅಧ್ಯಕ್ಷೆಯಾಗಿರುವ ಶ್ಯಾಮಲಾ ಕುಂದರ್‌ ಅವರೇ ಬೈಂದೂರು ತಾ.ಪಂ. ವ್ಯಾಪ್ತಿಗೆ ಒಳಪಡಲಿದ್ದಾರೆ. ಆದ್ದರಿಂದ ಕುಂದಾಪುರ ತಾ.ಪಂ. ಅಧ್ಯಕ್ಷರೂ ಬದಲಾಗಲಿದ್ದಾರೆ.

ಅಧಿಸೂಚನೆ ಬಂದ ಬಳಿಕ ರಚನೆ
ತಾ.ಪಂ.ನಿಂದ ಅವಶ್ಯವಿರುವ ಎಲ್ಲ ಮಾಹಿತಿಗಳನ್ನೂ ಕಳುಹಿಸಿಕೊಡಲಾಗಿದೆ. ಸರಕಾರದ ಅಧಿಕೃತ ಅಧಿಸೂಚನೆ ಬಂದ ಬಳಿಕ ಹೊಸ ತಾ.ಪಂ. ಮಂಡಳಿ ರಚನೆಯಾಗಲಿದೆ. ಇಒ ನೇಮಕ ಮೂಲಕ ಅದಕ್ಕೆ ಚಾಲನೆ ದೊರೆತಿದೆ.
– ಕಿರಣ್‌ ಪೆಡೆ°àಕರ್‌ ಇಒ, ಕುಂದಾಪುರ ತಾ.ಪಂ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.