ಕುಂದಾಪುರ ಆರಕ್ಷಕರಿಗೆ ಆರೋಗ್ಯ ಭಾಗ್ಯವಿಲ್ಲ

ತುರ್ತು ಅನಾರೋಗ್ಯದ ವೇಳೆ ಉಡುಪಿಗೆ ತೆರಳಬೇಕು!

Team Udayavani, Jan 6, 2020, 6:41 AM IST

23

ಕುಂದಾಪುರ: ಪೊಲೀಸ್‌ ಸಿಬಂದಿಗೆ ಜಿಲ್ಲಾ ಕೇಂದ್ರಗಳಲ್ಲಿ “ಆರೋಗ್ಯ ಭಾಗ್ಯ’ ಯೋಜನೆ ಜಾರಿಯಲ್ಲಿದೆ. ಈ ಯೋಜನೆ ಪ್ರಕಾರ ಉಡುಪಿ ಜಿಲ್ಲೆಯ ಪೊಲೀಸರು ನಗದು ರಹಿತ ವೈದ್ಯಕೀಯ ಚಿಕಿತ್ಸೆಗೆ ಜಿಲ್ಲಾ ಕೇಂದ್ರಕ್ಕೆ ತೆರಳಿ ಅಲ್ಲಿ ಆಯ್ದ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಆರೋಗ್ಯ ಭಾಗ್ಯ ಯೋಜನೆಯನ್ನು ಕುಂದಾಪುರ ವ್ಯಾಪಿಗೂ ವಿಸ್ತರಿಸಬೇಕೆನ್ನುವ ಆಗ್ರಹವಿದೆ.

ಎಲ್ಲ ಪೊಲೀಸರು ಆರೋಗ್ಯ ಇಲಾಖೆ ಆಯ್ಕೆ ಮಾಡಿಕೊಟ್ಟ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಆದರೆ ಇದು ಹೆಚ್ಚಿನ ಜಿಲ್ಲೆಗಳಲ್ಲಿ ಜಿಲ್ಲಾ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದೆ. ಇದನ್ನು ತಾಲೂಕು ವ್ಯಾಪ್ತಿಗೂ ವಿಸ್ತರಿಸಿದರೆ ಪೊಲೀಸರಿಗೆ ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯವಿದೆ.

ಏನು ಸಮಸ್ಯೆ?
ಪೊಲೀಸರಿಗೆ ನೀಡಲಾದ ನಗದು ರಹಿತ ಚಿಕಿತ್ಸೆ ಜಿಲ್ಲಾ ಕೇಂದ್ರಕ್ಕೆ ಮಾತ್ರ ಸೀಮಿತ ವಾಗಿರುವುದರಿಂದ ಬೈಂದೂರು, ಕೊಲ್ಲೂರು, ಅಮಾಸೆಬೈಲುವಿನಂತಹ ಗ್ರಾಮೀಣ ಭಾಗದಲ್ಲಿರುವ ಠಾಣೆಗಳಲ್ಲಿ ಕೆಲಸ ಮಾಡುವ ಪೊಲೀಸರು ತುರ್ತು ಅನಾರೋಗ್ಯ ಉಂಟಾದ ಸಂದರ್ಭದಲ್ಲಿ 80-70 ಕಿ.ಮೀ. ದೂರದ ಉಡುಪಿ, ಮಣಿಪಾಲಕ್ಕೆ ತೆರಳಬೇಕು. ಆದರೆ ಕುಂದಾಪುರ ಭಾಗದಲ್ಲಿ ಇದಕ್ಕೆ ವ್ಯವಸ್ಥೆ ಮಾಡಿದರೆ ಹತ್ತಿರವಾಗಲಿದೆ.

ಏನಿದು ಆರೋಗ್ಯ ಭಾಗ್ಯ?
ರಾಜ್ಯ ಸರಕಾರ ಸುಮಾರು 5 ವರ್ಷಗಳ ಹಿಂದೆಯೇ ರಾಜ್ಯಾದ್ಯಂತ ಪೊಲೀಸರಿಗೆ “ಆರೋಗ್ಯ ಭಾಗ್ಯ’ ಯೋಜನೆಯನ್ನು ಜಾರಿಗೊಳಿಸಿದೆ. ಇದರನ್ವಯ ಪೊಲೀಸರು ಹಾಗೂ ಅವರ ಸಂಬಂಧಿಕರು ತುರ್ತು ಚಿಕಿತ್ಸೆ ಅಥವಾ ಅನಾರೋಗ್ಯ, ಶಸ್ತ್ರ ಚಿಕಿತ್ಸೆ ಹಾಗೂ ಇನ್ನಿತರ ವೈದ್ಯಕೀಯ ಚಿಕಿತ್ಸೆಗೆ ರಾಜ್ಯ ಸರಕಾರ ನಿಗದಿಪಡಿಸಿದ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳುವುದೇ “ಆರೋಗ್ಯ ಭಾಗ್ಯ’ ಯೋಜನೆ.

ಅಂಕಿ – ಅಂಶ
ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ಉಪ ಅಧೀಕ್ಷಕರ ಕಚೇರಿ ಹೊರತುಪಡಿಸಿ, ಕುಂದಾಪುರ ನಗರ, ಗ್ರಾಮಾಂತರ, ಸಂಚಾರಿ ಠಾಣೆಗಳು, ಗಂಗೊಳ್ಳಿ, ಬೈಂದೂರು, ಕೊಲ್ಲೂರು, ಅಮಾಸೆಬೈಲು ಹಾಗೂ ಶಂಕರನಾರಾಯಣ ಸೇರಿ ಒಟ್ಟು 8 ಠಾಣೆಗಳಿವೆ. ಒಬ್ಬರು ಉಪ ಅಧೀಕ್ಷಕರು, ಇಬ್ಬರು ವೃತ್ತ ನಿರೀಕ್ಷಕರು, 8 ಉಪ ನಿರೀಕ್ಷಕರು, ಎಎಸ್‌ಐ, ಹೆಡ್‌ಕಾನ್‌ಸ್ಟೆಬಲ್‌, ಕಾನ್‌ಸ್ಟೆಬಲ್‌ ಹಾಗೂ ಪೊಲೀಸ್‌ ಸಿಬಂದಿ ಸೇರಿ ಒಟ್ಟು 333 ಹುದ್ದೆಗಳಿವೆ. ಈ ಪೈಕಿ ಬೈಂದೂರು ಎಸ್‌ಐ ಹುದ್ದೆ ಸೇರಿ 50 ಹುದ್ದೆ ಖಾಲಿಯಿದ್ದು, ಎಎಸ್‌ಪಿ ಸೇರಿ 283 ಪೊಲೀಸ್‌ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪೊಲೀಸರಿಗೆ ಇರುವ “ಆರೋಗ್ಯ ಭಾಗ್ಯ’ ಯೋಜನೆಯ ಪ್ರಕಾರ ಪೊಲೀಸರು ಹಾಗೂ ಅವರ ಸಂಬಂಧಿಕರು ತುರ್ತು ಚಿಕಿತ್ಸೆ ಅಥವಾ ಅನಾರೋಗ್ಯ, ಶಸ್ತ್ರ ಚಿಕಿತ್ಸೆ ಹಾಗೂ ಇನ್ನಿತರ ವೈದ್ಯಕೀಯ ಚಿಕಿತ್ಸೆಗೆ ರಾಜ್ಯ ಸರಕಾರ ನಿಗದಿಪಡಿಸಿದ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಆದರೆ ಇದು ಹೆಚ್ಚಿನ ಜಿಲ್ಲೆಗಳಲ್ಲಿ ಜಿಲ್ಲಾ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿದೆ. ಈ ಯೋಜನೆಯನ್ನು ಕುಂದಾಪುರ ವ್ಯಾಪ್ತಿಗೂ ವಿಸ್ತರಿಸಬೇಕೆನ್ನುವುದು ಪೊಲೀಸರ ಬೇಡಿಕೆ.

ಪ್ರಸ್ತಾವನೆ ಕಳುಹಿಸಲಾಗಿದೆ
ಕುಂದಾಪುರ ಉಪ ವಿಭಾಗ ವ್ಯಾಪ್ತಿಯ ಪೊಲೀಸರಿಗೆ ಅನುಕೂಲವಾಗುವಂತೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಈಗಾಗಲೇ ಸಂಬಂಧಪಟ್ಟವರಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಇಲ್ಲಿನ ಪೊಲೀಸರು ತುರ್ತು ಸಂದರ್ಭ ಉಡುಪಿಗೆ ಹೋಗುವುದಕ್ಕಿಂತ ಇಲ್ಲೇ ವ್ಯವಸ್ಥೆ ಮಾಡಿದರೆ ಪ್ರಯೋಜನಕಾರಿ.
-ಹರಿರಾಂ ಶಂಕರ್‌,  ಪೊಲೀಸ್‌ ಉಪ ಅಧೀಕ್ಷಕರು, ಕುಂದಾಪುರ ಉಪ ವಿಭಾಗ

ತುರ್ತು ಅಗತ್ಯವಿದೆ
ಪೊಲೀಸರಿಗೆ ತಾಲೂಕು ವ್ಯಾಪ್ತಿಯಲ್ಲಿಯೇ ನಗದು ರಹಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದರಿಂದ ಬಹಳಷ್ಟು ಅನುಕೂಲ. ಇದರಿಂದ ಬೈಂದೂರು ಮತ್ತಿತರ ಗ್ರಾಮೀಣ ಭಾಗದಿಂದ ದೂರದ ಉಡುಪಿಗೆ ಹೋಗುವ ಸಮಸ್ಯೆ ತಪ್ಪುತ್ತದೆ. ಪೊಲೀಸರು ಅನಾರೋಗ್ಯಗೊಂಡು ಆಸ್ಪತ್ರೆಯಲ್ಲಿ ದಾಖಲಾದರೆ ಅವರಿಗೆ ಇಷ್ಟು ದೂರದ ಮನೆಯಿಂದ ಆಹಾರವನ್ನೆಲ್ಲ ತೆಗೆದುಕೊಂಡು ಹೋಗುವುದು ಕೂಡ ಕಷ್ಟ. ತಾಲೂಕು ವ್ಯಾಪ್ತಿಯಲ್ಲಿಯೇ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುವುದು ತುರ್ತು ಅಗತ್ಯವಾಗಿದೆ.
-ಸುರೇಶ್‌ ನಾಯ್ಕ,  ಪೊಲೀಸ್‌ ವೃತ್ತ ನಿರೀಕ್ಷಕರು, ಬೈಂದೂರು

-  ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.