ಕುಂದಾಪುರ: ಫ್ಲೈಓವರ್‌ಗಾಗಿ ಹೆದ್ದಾರಿಗಿಳಿದ ಪ್ರತಿಭಟನಕಾರರು

ರಸ್ತೆ ತಡೆಗೆ ನಿರಾಕರಿಸಿದ ಪೊಲೀಸರು; ಮಾತಿನ ಚಕಮಕಿ; ಸ್ಥಳಕ್ಕಾಗಮಿಸಿದ ಎಸಿ, ರಾ.ಹೆ. ಎಂಜಿನಿಯರ್‌

Team Udayavani, Dec 3, 2019, 9:30 PM IST

rt-29

ಕುಂದಾಪುರ: ಕುಂದಾಪುರ ನಗರದ ಅಂದಗೆಡಿಸಿ ಸುಂದರ ಕುಂದಾಪುರ ಕನಸನ್ನು ಭಗ್ನಗೊಳಿಸಿದೆ ಎಂದು ಆರೋಪಿಸಿ ಫ್ಲೈಓವರ್‌ ಕಾಮಗಾರಿ ಬೇಗ ಪೂರೈಸಬೇಕು ಎಂದು ಆಗ್ರಹಿಸಿ ಮಂಗಳವಾರ ನಡೆದ ಪ್ರತಿಭಟನೆ ಸಂದರ್ಭ ಪ್ರತಿಭಟನಕಾರರು ರಾ.ಹೆದ್ದಾರಿ ತಡೆಗೆ ಮುಂದಾದರು. ಪೊಲೀಸರು ಇದಕ್ಕೆ ಅವಕಾಶ ಕೊಡಲಿಲ್ಲ. ಹೆದ್ದಾರಿ ಅಧಿಕಾರಿಗಳ ಜತೆ ಪ್ರತಿಭಟನಕಾರ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಗೆ ಬೆಂಬಲ ಸೂಚಿಸಲು ಬಂದಿದ್ದ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಅವರು ಪ್ರತಿಭಟನೆಯಲ್ಲಿದ್ದ ಕೆಲವರ ವರ್ತನೆಯಿಂದಾಗಿ ಅರ್ಧದಿಂದ ಹೊರನಡೆದು ಮನವೊಲಿಸಿದ ಬಳಿಕ ಮರಳಿ ಬಂದ ಘಟನೆಗೂ ಪ್ರತಿಭಟನೆ ಸಾಕ್ಷಿಯಾಯಿತು. ಸ್ಥಳಕ್ಕೆ ಎಸಿ, ರಾ.ಹೆ. ಎಂಜಿನಿಯರ್‌, ನವಯುಗ ಎಂಜಿನಿಯರ್‌ ಭೇಟಿ ನೀಡಿದರು. ಬಿಗಿ ಪೊಲೀಸ್‌ ಭದ್ರತೆ ನಿಯೋಜಿಸಲಾಗಿತ್ತು.

ಗಡುವು
ಮನವಿ ಆಲಿಸಿದ ಸಹಾಯಕ ಕಮಿಷನರ್‌ ಕೆ. ರಾಜು, 4 ದಿನಗಳ‌ಲ್ಲಿ ಕೆಲಸ ಚುರುಕುಗೊಳಿಸಲು ಸೂಚಿಸಿದರು. ವಾರಕ್ಕೊಮ್ಮೆ ಕೆಲಸದ ಮಾಹಿತಿ ನೀಡಬೇಕು, ಈಗಾಗಲೇ ಹಾಕಿದ ಸೆಕ್ಷನ್‌ 133ನ್ನು ಮತ್ತೆ ತೆರೆಯುವುದಾಗಿ ಹೇಳಿದರು. ರಾ.ಹೆ. ಎಂಜಿನಿಯರ್‌ ರಮೇಶ್‌, ನವಯುಗ ಎಂಜಿನಿಯರ್‌ ರಾಘವೇಂದ್ರ, ಮಾ.31ಕ್ಕೆ ಫ್ಲೈಓವರ್‌, ಮೇ 31ಕ್ಕೆ ಬಸ್ರೂರು ಮೂರುಕೈ ಅಂಡರ್‌ಪಾಸ್‌ ಕೆಲಸ ಮುಗಿಸುವುದಾಗಿ ಭರವಸೆ ನೀಡಿದರು.

ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ, ಬಾಕಿ ಸರ್ವಿಸ್‌ ರಸ್ತೆ, ಫ್ಲೈಓವರ್‌, ಸೇತುವೆಗಳಿಗಾಗಿ ಇಲ್ಲಿ ಹೋರಾಡುವುದರ ಜತೆಗೆ ದಿಲ್ಲಿಯಲ್ಲೂ ಹೋರಾಡಬೇಕು. ಬಾಕಿ ಉಳಿದ ಕಾಮಗಾರಿಯನ್ನು ಬದಲಿ ಗುತ್ತಿಗೆದಾರರಿಗೆ ಒಳಗುತ್ತಿಗೆ ನೀಡುವ ಕುರಿತು ತೀರ್ಮಾನವಾಗಬೇಕು. ಕಾಮಗಾರಿ ಅಭಿವೃದ್ಧಿಯ ಮಾಹಿತಿಯನ್ನು ವಾರಕ್ಕೊಮ್ಮೆ ಎಸಿಗೆ ಕೊಡಬೇಕು ಎಂದರು.

ಮಾಹಿತಿಯಿಲ್ಲ
ರಾಷ್ಟ್ರೀಯ ಹೆದ್ದಾರಿ ಹೋರಾಟ ಜಾಗೃತಿ ಸಮಿತಿ ಹಾಗೂ ಕುಂದಾಪುರ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ಆಯೋಜನೆಯಾಗಿತ್ತು. ಜಾಗೃತಿ ಸಮಿತಿ ಅಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಹೆದ್ದಾರಿ ಸ್ಥಿತಿ ಏನಾಗುತ್ತಿದೆ ಎಂದು ಜನಪ್ರತಿನಿಧಿಗಳಿಗೇ ಮಾಹಿತಿಯಿಲ್ಲ. ಶೇ. 45 ಮಾತ್ರ ಕೆಲಸವಾಗಿದ್ದು 93 ಶೇ. ಎಂದು ಸುಳ್ಳು ಹೇಳುತ್ತಿದ್ದಾರೆ. 640 ಕೋ.ರೂ.ಗಳಿಂದ 1,200 ಕೋ.ರೂ.ಗೆ ಕಾಮಗಾರಿ ವೆಚ್ಚ ಏರಿದೆ ಎಂದರು.

ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಸುಂಕ ಕಟ್ಟಿ ಸಂಕಟಪಡುವ ಸ್ಥಿತಿ ಬಂದಿದೆ. ನಮ್ಮ ರಸ್ತೆ ನಮ್ಮ ಹಕ್ಕು. ಅಪಘಾತ ಸಂದರ್ಭ ಪ್ರಾಧಿಕಾರ, ಗುತ್ತಿಗೆದಾರರ ಮೇಲೆ ಕೇಸು ಹಾಕಬೇಕು ಎಂದರು.
ಹೋರಾಟ ಸಮಿತಿಯ ಕಿಶೋರ್‌ ಕುಮಾರ್‌ ಕುಂದಾಪುರ, ಜನರ ತಾಳ್ಮೆಗೆ ಮಿತಿಯಿದೆ. 10 ವರ್ಷಗಳಿಂದ ಈ ದುರವಸ್ಥೆ ನೋಡಿ ಸಾಕಾಗಿದೆ. ಮತಯಾಚನೆಗೆ ಬರುವವರು ಆಮೇಲೆ ಜನಹಿತ ಮರೆತು ಬಿಡುವ ಸ್ಥಿತಿ ಬಂದಿದೆ. ಜನರ ಮುಗ್ಧತೆಯ ದುರುಪಯೋಗವಾಗುತ್ತಿದೆ ಎಂದರು.

ಮುಷ್ಕರ
ಸಿಪಿಐಎಂ ಮುಖಂಡ ಎಚ್‌.ನರಸಿಂಹ, ಮುಂದಿನ ತಿಂಗಳು ಎಡಪಕ್ಷಗಳಿಂದ ಸಾರ್ವತ್ರಿಕ ಮುಷ್ಕರ ನಡೆಯಲಿದ್ದು ಫ್ಲೈಓವರ್‌ ವಿಚಾರವೂ ಇರಲಿದೆ ಎಂದರು. ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್‌ ಕಾವೇರಿ, ಗುತ್ತಿಗೆದಾರರು ಕೇವಲ ಗಡುವು ನೀಡುತ್ತಿದ್ದಾರೆ. ಕೆಲಸ ಮಾಡುವುದೇ ಕಾಣುವುದಿಲ್ಲ ನಂಬಿಕೆ ಹೇಗೆ ಬರಬೇಕು ಎಂದರು.

ಉಪಸ್ಥಿತಿ
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ನಿತ್ಯಾನಂದ ಶೆಟ್ಟಿ ಅಂಪಾರು, ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ, ಕಾಂಗ್ರೆಸ್‌ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿನೋದ್‌ ಕ್ರಾಸ್ಟೊ, ಆಶಾ, ಕೇಶವ ಭಟ್‌, ತಾ.ಪಂ. ಸದಸ್ಯ ವಾಸುದೇವ ಪೈ, ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಗಿರೀಶ್‌ ಜಿ.ಕೆ., ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಅಬ್ಬು ಮಹಮ್ಮದ್‌, ವಿದ್ಯುತ್‌ ಗುತ್ತಿಗೆದಾರ ಕೆ.ಆರ್‌. ನಾಯಕ್‌, ಗಣ್ಯರಾದ ಕೃಷ್ಣಪ್ರಸಾದ ಅಡ್ಯಂತಾಯ, ಅನಂತಕೃಷ್ಣ ಕೊಡ್ಗಿ, ನ್ಯಾಯವಾದಿ ಎ.ಎಸ್‌.ಎನ್‌. ಹೆಬ್ಟಾರ್‌, ರೋಟರಿ ಕ್ಲಬ್‌ ಮಿಡ್‌ಟೌನ್‌ ಕಾರ್ಯದರ್ಶಿ ಪ್ರವೀಣ್‌, ಹೆದ್ದಾರಿ ಹೋರಾಟ ಸಮಿತಿ ಸಾಸ್ತಾನ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ, ನಿಯೋಜಿತ ಅಧ್ಯಕ್ಷ ಶ್ಯಾಮಸುಂದರ ನಾಯರಿ ಉಪಸ್ಥಿತರಿದ್ದರು.

ಕೇಳಿದ್ದು
– ಕೃತಯುಗ, ತ್ರೇತಾಯುಗ, ದ್ವಾಪರಯುಗ, ಕಲಿಯುಗದ ಅನಂತರ ದೀರ್ಘ‌ ಅವಧಿಯ ಯುಗ ಅಂದರೆ ನವಯುಗ!
– ಮಾ.31ಕ್ಕೆ ಪೂರ್ಣ ಎಂದು ಅನೇಕ ವರ್ಷಗಳಿಂದ ಹೇಳುತ್ತಿದ್ದಾರೆ ಯಾವ ವರ್ಷ ಎಂದೂ ಸ್ಪಷ್ಟಪಡಿಸಬೇಕು.
-ಅಧಿಕಾರಿಗಳು, ಜನಪ್ರತಿನಿಧಿಗಳಿಂದಲೂ ಟೋಲ್‌ ತೆಗೆದುಕೊಳ್ಳಬೇಕು. ಕಷ್ಟದ ಅರಿವಾಗುತ್ತದೆ.
– ದಿನಕ್ಕೆ 25 ಲಕ್ಷ ರೂ. ಸಂಗ್ರಹವಾಗುವ ಕಾರಣ
2 ತಿಂಗಳ ಟೋಲ್‌ ಸಂಗ್ರಹವೇ ಫ್ಲೈಓವರ್‌ ಕೆಲಸ ಮುಗಿಸಲು ಸಾಕು.
-ಪ್ರಾಧಿಕಾರದ ಎಂಜಿನಿಯರ್‌ ಮನೆ ಮೇಲೆ ಐಟಿ ರೈಡ್‌, ಗುತ್ತಿಗೆದಾರ ಕಂಪೆನಿಗಳ ಮೇಲೆ ಕೇಸ್‌ ಆಗಬೇಕು.

ಡಿ.31ಕ್ಕೆ ವಿಶ್ವಾದ್ಯಂತ ಪ್ರತಿಭಟನೆ!
ಫ್ಲೈಓವರ್‌ನಿಂದಾಗಿ ಕುಂದಾಪುರದ ಸೌಂದರ್ಯ ಹಾಳಾಗಿದೆ ಎಂದು ಆರೋಪಿಸಿ ಐ ಹೇಟ್‌ ನವಯುಗ ಅಭಿಯಾನ ನಡೆಯಲಿದ್ದು ಡಿ. 31ರಂದು ವಿಶ್ವಾದ್ಯಂತ ಇರುವ ಕುಂದಾಪುರದವರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಬೇಕು.
-ರಾಜೇಶ್‌ ಕಾವೇರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.