ಆಟೋಗೆ ಲಾರಿ ಢಿಕ್ಕಿ:ಪ್ರಯಾಣಿಕ ಸಾವು,ಚಾಲಕ ಗಂಭೀರ
Team Udayavani, Dec 15, 2017, 11:14 AM IST
ಕುಂದಾಪುರ: ಇಲ್ಲಿನ ಹೆಮ್ಮಾಡಿ ಬಳಿ ಶುಕ್ರವಾರ ನಸುಕಿನ 2 ಗಂಟೆಯ ವೇಳಗೆ ಲಾರಿ ಯೊಂದು ಆಟೋ ರಿಕ್ಷಾಗೆ ಢಿಕ್ಕಿಯಾದ ಪರಿಣಾಮ ಪ್ರಯಾಣಿಕ ದಾರುಣವಾಗಿ ಸಾವನ್ನಪ್ಪಿದ್ದು, ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಮೃತ ವ್ಯಕ್ತಿ ಸೊರಬ ನಿವಾಸಿ ಗಣೇಶ್ ಪೂಜಾರಿ ಎನ್ನುವವರಾಗಿದ್ದು, ಕುಂದಾಪುರದಿಂದ ಹೆಮ್ಮಾಡಿ ಬಳಿಯಿರುವ ಕನ್ನಡಕುದ್ರುವಿನ ಪತ್ನಿಯ ಮನೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಗಣೇಶ್ ಅಪಘಾತವಾಗುವ ಮುನ್ನ ಪತ್ನಿಗೆ ಕರೆ ಮಾಡಿ ಇನ್ನೈದು ನಿಮಿಷದಲ್ಲಿ ಮನೆಯಲ್ಲಿ ಇರುತ್ತೇನೆ ಎಂದಿದ್ದರು. ಹೆಮ್ಮಾಡಿಯಲ್ಲಿ ನಡು ರಾತ್ರಿ ಆಟೋ ರಿಕ್ಷಾ ಸಿಗುವುದಿಲ್ಲವೆಂದು ಕುಂದಾಪುರದಲ್ಲಿ ಬಸ್ ಇಳಿದು ಆಟೋ ಹಿಡಿದಿದ್ದರು ಎಂದು ತಿಳಿದು ಬಂದಿದೆ.
ಅಪಘಾತವಾದೊಡನೆಯೇ ಗಂಗೊಳ್ಳಿಯ ಅಂಬುಲೆನ್ಸ್ ನಿರ್ವಹಿಸುತ್ತಿರುವ ಇಬ್ರಾಹಿಂ ಅವರು ಸ್ಥಳಕ್ಕಾಗಮಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಕುಂದಾಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ