ನಾಡಿನೆಲ್ಲೆಡೆ ಸಂಭ್ರಮದ ಮಹಾಶಿವರಾತ್ರಿ

ಭಕ್ತರಿಂದ ಮಹಾದೇವನ ಸ್ಮರಣೆ

Team Udayavani, Feb 21, 2020, 10:21 PM IST

kala-26

ಕುಂದಾಪುರ: ತಾಲೂಕಿನ ವಿವಿಧೆಡೆ ಶುಕ್ರವಾರ ಮಹಾಶಿವರಾತ್ರಿ ಆಚರಿಸಲಾಯಿತು. ಶಿವ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಿ ನಂದಾದೀಪಕ್ಕೆ ತೈಲ ಪೂರಣ ಮಾಡಿದರು. ಶಿವನಿಗೆ ಇಷ್ಟವಾದ ಎಕ್ಕದ (ಅರ್ಕ) ಹೂವಿನ ಮಾಲೆಗಳನ್ನು ಶಿವನಿಗೆ ಅರ್ಪಿಸಿದರು. ರುದ್ರಾಭಿಷೇಕಗಳನ್ನು ಮಾಡಿಸಿದರು.

ಶಿವಾಲಯಗಳಲ್ಲಿ ಶತರುದ್ರಾಭಿಷೇಕ, ರುದ್ರಾರ್ಚನೆ, ರುದ್ರ ಪಾರಾಯಣ ನಡೆಯಿತು. ಭಜನೆ ಸೇವೆ ನಡೆಯಿತು. ವಿವಿಧ ದೇವಸ್ಥಾನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಜೆ ಜಾಗರಣೆ ಸಲುವಾಗಿ ಭಜನೆ, ಪಾರಾಯಣ, ಶಿವನಾಮ ಜಪ ನಡೆದವು. ಶಿವರಾತ್ರಿ ಉಪವಾಸದ ನಿಮಿತ್ತ ಉಪಾಹಾರ, ಫ‌ಲಾಹಾರದ ವ್ಯವಸ್ಥೆಯನ್ನು ಬಹುತೇಕ ಕಡೆ ಮಾಡಲಾಗಿತ್ತು. ದೇವಾಲಯಗಳಲ್ಲಿಯೂ ಪುಷ್ಪಾಲಂಕಾರ, ದೇವರ ವಿಗ್ರಹಕ್ಕೆ, ಶಿವಲಿಂಗಕ್ಕೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.

ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇಗುಲ
ಕೆರಾಡಿ: ಇಲ್ಲಿನ ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಲಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ, ಜಾಗರಣೆ, ಭಜನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.  ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಶ್ರೀ ಕೇಶವ ನಾಥೇಶ್ವರನಿಗೆ ವಿಶೇಷ ಪೂಜೆ, ಶತರುದ್ರಾಭಿಷೇಕ, ಭಕ್ತರಿಂದ ಭಜನಾ ಸೇವೆ, ಮತ್ತಿತರ ಸೇವೆಗಳು ನಡೆದವು. ನೂರಾರು ಭಕ್ತರು ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು.

ಸುಮಾರು 50 ಅಡಿಗಳಷ್ಟು ದೂರದ ಕಲ್ಲಿನ ಗುಹೆಯೊಳಗೆ ಉದ್ಭವ ಲಿಂಗ ಇಲ್ಲಿನ ವೈಶಿಷ್ಟವಾಗಿದ್ದು, ಸುಮಾರು 50 ಅಡಿಗಳಷ್ಟು ವಿಶಾಲ ಜಾಗದಲ್ಲಿ ಹರಡಿರುವ ನೀರು, ಆ ನೀರಿನಲ್ಲಿ ಹಲವು ಬಗೆಯ ಮೀನುಗಳು, ಕತ್ತಲು ತುಂಬಿದ ಗುಹೆಯೊಳಗೆ ಕೇವಲ ದೇವರ ದೀಪದ ಬೆಳಕು ಬಿಟ್ಟರೆ ಬೇರೆ ಬೆಳಕಿನ ವ್ಯವಸ್ಥೆ ಇಲ್ಲ. ಕಾಡಿನೊಳಗೆ ದುರ್ಗಮವಾದ ರಸ್ತೆಯಲ್ಲಿ ಬರಬೇಕಿದ್ದರೂ ಅನೇಕ ಮಂದಿ ಭಕ್ತರು ಇಲ್ಲಿ ಪೂಜೆ ಸಲ್ಲಿಸಿದರು.

ಕೊಡಪಾಡಿಯ ಶ್ರೀ ಗುಹೇಶ್ವರ ದೇವಸ್ಥಾನ
ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಕೊಡಪಾಡಿಯ ಶ್ರೀ ಗುಹೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶತ ರುದ್ರಾಭಿಷೇಕ, ಭಜನೆ, ಜಾಗರಣೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಈ ಮೊದಲು ಇಲ್ಲಿ ಶಿವರಾತ್ರಿಯ ದಿನದಂದು ಗುಹೆ ಪ್ರವೇಶಿಸಿ ಶಿವನ ದರ್ಶನ ಪಡೆಯುವ ಅವಕಾಶವಿತ್ತು. ಶ್ರೀ ಗುಹೇಶ್ವರನ ಸನ್ನಿಧಾನದಲ್ಲಿ ನಡೆದ ಸ್ವರ್ಣಾರೂಢ ಪ್ರಶ್ನೆ ಚಿಂತನೆಯಲ್ಲಿ ಗುಹಾ ಪ್ರವೇಶ ಸಾರ್ವಜನಿಕವಾಗಿ ನಿಷೇಧಿಸಬೇಕೆಂಬ ಸೂಚನೆ ದೊರಕಿರು ವುದರಿಂದ ಭಕ್ತರಿಗೆ ಪ್ರವೇಶ ನಿಷೇಧಿಸ ಲಾಗಿದೆ. ಈ ಬಾರಿಯು ಭಕ್ತರಿಗೆ ಗುಹಾ ಪ್ರವೇಶದ್ವಾರದಲ್ಲಿ ಶಿವನಿಗೆ ಪೂಜಾರ್ಚನೆ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು.

ಗಣಪತಿಹೋಮ, ರುದ್ರಾಭಿಷೇಕ ಆರಂಭಗೊಂಡು ಬಳಿಕ ಆಹ್ವಾನಿತ ಭಜನಾ ತಂಡಗಳಿಂದ ನಿರಂತರ ಭಜನೆ ಕಾರ್ಯಕ್ರಮ ನಡೆಯಿತು. ಸಂಜೆ ದೇಗುಲದಿಂದ ದೀಪವನ್ನು ಮೆರವಣಿಗೆ ಮೂಲಕ ಹಣಬಿನ ಗದ್ದೆಗೆ ಕೊಂಡೊಯ್ದು, ಹಣಬಿನ ಸೇವೆ, ಗೋಪಾಲಕೃಷ್ಣ ದೇವರಿಗೆ ಸಮಿತಿಯಿಂದ ವಿಶೇಷ ಪೂಜೆ ನಡೆಯಿತು.

ಸಹಸ್ರಾರು ಭಕ್ತರು ಭಾಗಿ
20 ಅಡಿ ಉದ್ದದ ಮುರಕಲ್ಲಿನ ಗುಹೆಯೊಳಗೆ ಅಂತರ್ಗತವಾಗಿರುವ ಶ್ರೀ ಗುಹೇಶ್ವರನ ಸನ್ನಿಧಾನಕ್ಕೆ ಮಹಾಶಿವರಾತ್ರಿ ಪ್ರಯುಕ್ತ ಸಹಸ್ರಾರು ಭಕ್ತರು ಆಗಮಿಸಿ, ಪೂಜೆ ಸಲ್ಲಿಸಿ, ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು, ಸದಸ್ಯರು, ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಶ್ರೀ ಕೋಟಿಲಿಂಗೇಶ್ವರ ದೇಗುಲ
ಕೋಟೇಶ್ವರ: ಇಲ್ಲಿನ ಪುರಾಣ ಪ್ರಸಿದ್ಧ ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಫೆ. 21ರಂದು ನೆರೆದ ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದ ಶಿವರಾತ್ರಿ ಉತ್ಸವ ಜರಗಿತು. ಬೆಳಗ್ಗೆ ಶಿವ ಸಹಸ್ರ ನಾಮಾವಳಿ ಪಠಣ, ಮಹಾಪೂಜೆಯು ಪ್ರಧಾನ ಅರ್ಚಕ ಪ್ರಸನ್ನ ಕುಮಾರ ಐತಾಳ ಅವರ ನೇತೃತ್ವದಲ್ಲಿ ನಡೆಯಿತು. ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಜಾಗರಣೆಯ ಅಂಗವಾಗಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8ರ ತನಕ ವಿವಿಧ ಭಜನ ತಂಡಗಳಿಂದ ಅಖಂಡ ಭಜನೆ ನಡೆಯಿತು. ರಾತ್ರಿ ದೊಡ್ಡ ರಂಗಪೂಜೆ ಹಾಗೂ ಸಣ್ಣ ರಥೋತ್ಸವ ನಡೆಯಿತು. ದೇಗುಲದ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ, ಆಡಳಿತ ಮಂಡಳಿ ಸದಸ್ಯರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.