ಊರ ಸರಕಾರಿ ಕನ್ನಡ ಶಾಲೆ ಉಳಿವಿಗೆ “ನಮ್ಮಶಾಲೆ ನಮ್ಮ ಕನಸು’

ಗಿಳಿಯಾರು ಯುವಕ ಮಂಡಲ

Team Udayavani, Dec 13, 2019, 9:10 PM IST

xd-4

ಕೋಟ: ನಿರಂತರ ಸಮಾಜಮುಖೀ ಕಾರ್ಯದಲ್ಲಿ ತೊಡಗಿರುವ ಕೋಟ ಸಮೀಪದ ಗಿಳಿಯಾರು ಯುವಕ ಮಂಡಲ ಸಂಘಟನೆ ತನ್ನೂರು ಮೂಡುಗಿಳಿಯಾರಿನ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಅಭಿವೃದ್ಧಿಗಾಗಿ “ನಮ್ಮ ಶಾಲೆ ನಮ್ಮ ಕನಸು’ ಎನ್ನುವ ವಿನೂತನ ಕಾರ್ಯಕ್ರಮವನ್ನು ಡಿ.14ರಂದು ಮೂಡುಗಿಳಿಯಾರಿನಲ್ಲಿ ಹಮ್ಮಿಕೊಂಡಿದೆ.

ಶಾಲೆಯ ಉಳಿವಿಗೆ ಅಕ್ಷರ ತೇರು
ಆಂಗ್ಲಮಾಧ್ಯಮ, ವಾಹನ ಸೌಲಭ್ಯ ಮುಂತಾದ ಸೌಕರ್ಯಗಳಿಗೆ ಮಾರುಹೋಗಿ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಇಂದು ಸರಕಾರಿ ಕನ್ನಡ ಶಾಲೆಗಳಿಂದ ದೂರವಾಗುತ್ತಿದ್ದಾರೆ. ಹೀಗಾಗಿ ತನ್ನೂರಿನ ಸರಕಾರಿ ಶಾಲೆಯಲ್ಲೂ ಆಂಗ್ಲಮಾಧ್ಯಮಕ್ಕೆ ಸರಿಸಾಟಿಯಾದ ಗುಣಮಟ್ಟದ ಶಿಕ್ಷಣ ಸಿಗಬೇಕು. ತಮ್ಮೂರ ಮಕ್ಕಳು ಉಚಿತವಾಗಿ ವಾಹನದ ಮೂಲಕ ಶಾಲೆಗೆ ಪ್ರಯಾಣಿಸಬೇಕು ಎನ್ನುವ ನಿಟ್ಟಿನಲ್ಲಿ ಸಂಘಟನೆಯು ಅಕ್ಷರ ತೇರು ಎನ್ನುವ ಸ್ವಂತ ವಾಹನ ಖರೀದಿಸುವ ಯೋಜನೆಯನ್ನು ಹಾಕಿಕೊಂಡಿದೆ. ಈ ಪ್ರಯುಕ್ತ ಧನ ಸಂಗ್ರಹಕ್ಕಾಗಿ ಹಳೆ ವಿದ್ಯಾರ್ಥಿಗಳು, ಸ್ಥಳೀಯ ಸಂಘಸಂಸ್ಥೆಗಳ ನೆರವಿನೊಂದಿಗೆ ಡಿ.14ರಂದು ಶಾಲೆಯ ಆವರಣದಲ್ಲಿ ಪೆರ್ಡೂರು ಮೇಳದ ಯಕ್ಷಗಾನ ಕಾರ್ಯಕ್ರಮವನ್ನು ಆಯೋಜಿಸಿದ್ದು ಕಾರ್ಯಕ್ರಮದಿಂದ ಸಂಗ್ರಹವಾಗುವ ಹಣವನ್ನು ವಾಹನ ಖರೀದಿ ಮತ್ತು ನಿರ್ವಹಣೆಗೆ ಮೀಸಲಿಡುತ್ತದೆ.

ಈ ಯುವಕ ಮಂಡಲದ ವತಿಯಿಂದ ಶಾಲೆಯ ಅಭಿವೃದ್ಧಿಗಾಗಿ ಈ ಹಿಂದೆ ದಾನಿಗಳ ಸಹಕಾರದೊಂದಿಗೆ ಸ್ಮಾರ್ಟ್‌ ಕ್ಲಾಸ್‌, ನ್ಪೋಕನ್‌ ಇಂಗ್ಲಿಷ್‌, ಕಂಪ್ಯೂಟರ್‌ ಶಿಕ್ಷಣ, ಹ್ಯಾಪಿ ಇಂಗ್ಲಿಷ್‌ ಕ್ಲಾಸ್‌, ವಿದ್ಯಾರ್ಥಿ ವೇತನ, ಕೈತೋಟ ಮುಂತಾದ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದು ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಈಗಾಗಲೇ ದೊರೆಯುತ್ತಿದೆ.

ಸಮಾಜಮುಖಿ ಕಾರ್ಯಕ್ಕಾಗಿ ವಾರ್ಷಿಕೋತ್ಸವವಿಲ್ಲ
ಪ್ರತಿಯೊಂದು ಸಂಘಟನೆಗಳು ವರ್ಷಕ್ಕೊಮ್ಮೆ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವುದು ಮಾಮೂಲಿ. ಆದರೆ ಗಿಳಿಯಾರು ಯುವಕ ಮಂಡಲವು ಶಾಲೆಯ ಅಭಿವೃದ್ಧಿಗಾಗಿ ಕೈಗೊಂಡ ಈ ಸಮಾಜಮುಖಿ ಕಾರ್ಯಕ್ರಮಕ್ಕಾಗಿ ವಾರ್ಷಿಕೋತ್ಸವ ಆಚರಿಸಿಕೊಳ್ಳದೆ ಕೇವಲ ಈ ಕಾರ್ಯಕ್ರಮಕ್ಕೆ ಒತ್ತು ನೀಡಿದೆ.

ಅಕ್ಷರ ತೇರು ಯೋಜನೆ
ನಮ್ಮೂರ ಸರಕಾರಿ ಶಾಲೆಯ ಉಳಿವಿಗಾಗಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಇದರ ಮುಂದಿನ ಭಾಗವಾಗಿ ವಿದ್ಯಾರ್ಥಿಗಳ ಪ್ರಯಾಣಕ್ಕೆ “ನಮ್ಮಶಾಲೆ ನಮ್ಮ ಕನಸು ಎಂಬ ಅಕ್ಷರ ತೇರು ಯೋಜನೆ ಕೈಗೊಂಡಿದ್ದೇವೆ. ನಮ್ಮ ಸಮಾಜಮುಖೀ ಕಾರ್ಯಕ್ಕೆ ಶಿಕ್ಷಣಾಭಿಮಾನಿಗಳ ಸಹಕಾರ ಅಗತ್ಯ.
-ರಾಘವೇಂದ್ರ ಕುಂದರ್‌, ಅಧ್ಯಕ್ಷರು ಗಿಳಿಯಾರು ಯುವಕ ಮಂಡಲ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.