ಕೋಟ ಅವಳಿ ಕೊಲೆ ಪ್ರಕರಣ:ರಾಘವೇಂದ್ರ ಕಾಂಚನ್ಗೆ ಹೈಕೋರ್ಟ್ ಜಾಮೀನು
Team Udayavani, Jul 18, 2019, 1:34 PM IST
ಕೋಟ: ಇಲ್ಲಿನ ಮಣೂರಿನಲ್ಲಿ ಜ. 26ರಂದು ನಡೆದಿದ್ದ ಸ್ನೇಹಿತರಿಬ್ಬರ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಉಡುಪಿ ಜಿ.ಪಂ. ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಗೆಳೆಯರಾದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 18 ಮಂದಿ ಆರೋಪಿಗಳಲ್ಲಿ ರಾಘವೇಂದ್ರ ಕಾಂಚನ್ ಓರ್ವನಾಗಿದ್ದು, ಬಂಧನಕ್ಕೊಳಗಾಗಿ ಜೈಲು ಸೇರಿದ್ದ. ಆರೋಪಿಗಳು ತಪ್ಪಿಸಿಕೊಳ್ಳಲು ಸಹಕರಿಸಿದ ಆರೋಪದಡಿಯಲ್ಲಿ ಬಂಧಿತನಾದ ಪೊಲೀಸ್ ಪೇದೆ ವೀರೇಂದ್ರ ಆಚಾರ್ಯನ ಜಾಮೀನು ಅರ್ಜಿ ಇದೇ ಸಂದರ್ಭ ತಿರಸ್ಕೃತ ಗೊಂಡಿದೆ. ಕಾನೂನು ಪ್ರಕ್ರಿಯೆಗಳ ಅನಂತರ 2-3 ದಿನಗಳಲ್ಲಿ ಕಾಂಚನ್ ಬಿಡುಗಡೆಗೊಳ್ಳಲಿದ್ದಾನೆ ಎನ್ನಲಾಗಿದೆ.
ಕುಂದಾಪುರ ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆ ನಡೆಯಬೇಕಿದ್ದು, 2-3 ದಿನಗಳು ತಗಲುವ ಸಾಧ್ಯತೆಗಳಿವೆ. ಜೆಎಂಎಫ್ ಸಿ ಹಾಗೂ ಸೆಷನ್ಸ್ ನ್ಯಾಯಾಲಯದಲ್ಲಿ ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ್ ಈ ಹಿಂದಿನ ವಿಚಾರಣೆಯಲ್ಲೂ ವಾದ ಮಂಡಿಸಿದ್ದು, ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ