ಮರಳು, ವಿಜಯ ಬ್ಯಾಂಕ್‌, ಫ್ಲೈಓವರ್‌!


Team Udayavani, Apr 3, 2019, 11:05 AM IST

44

ಕುಂದಾಪುರ: ಕರಾವಳಿಯ ಚುನಾವಣ ಪ್ರಚಾರದಲ್ಲಿ ಈಗ ಮುಖ್ಯ ಸದ್ದು ಮರಳು, ಫ್ಲೈಓವರ್‌ ಮತ್ತು ವಿಜಯ ಬ್ಯಾಂಕ್‌! ಕ್ಷೀಣವಾದ ಧ್ವನಿ ಎತ್ತಿನಹೊಳೆಯದು.

ಫ್ಲೈಓವರ್‌
ಮಂಗಳೂರಿನ ಪಂಪ್‌ವೆಲ್‌, ಕುಂದಾಪುರದ ಶಾಸಿŒ ಸರ್ಕಲ್‌ ಫ್ಲೈಓವರ್‌ ಅರ್ಧಕ್ಕೆ ಬಾಕಿ ಯಾಗಿವೆ. ಈ ಕುರಿತು ಕಾಂಗ್ರೆಸ್‌- ಬಿಜೆಪಿ ಆರೋಪ -ಪ್ರತ್ಯಾರೋಪ ಮಾಡುತ್ತಿವೆ. ನಳಿನ್‌ ಅಂತೂ ಚುನಾವಣೆಗೆ ಮುನ್ನ ಹೇಗಾದರೂ ಲೋಕಾರ್ಪಣೆ ಮಾಡಬೇಕೆಂಬ ಹಠ ತೊಟ್ಟಿ ದ್ದರು. ಜಾಲತಾಣದಲ್ಲಿ ಫ್ಲೈಓವರ್‌ ಸಾಕಷ್ಟು ಟ್ರೋಲ್‌ಗೆ ಒಳಗಾಗಿದೆ. ಕಾಂಗ್ರೆಸ್‌ ಇದನ್ನೇ ಪದೇಪದೇ ಕೆಣಕಿತ್ತು. ಫ್ಲೈಓವರ್‌ ಆಗದೇ ಇರಲು ಲೋಬೋ, ಐವನ್‌, ಮನಪಾ ಆಯುಕ್ತರಾಗಿದ್ದ ಇಬ್ರಾಹಿಂ ಕಾರಣ ಎಂದು ನಳಿನ್‌ ಪ್ರತ್ಯಸ್ತ್ರ ಹೂಡಿದ್ದರು. ಕುಂದಾಪುರದ ಫ್ಲೈಓವರ್‌ ಕೂಡ ಸಾಕಷ್ಟು ಟೀಕೆ, ಟ್ರೋಲ್‌ಗೆ ಆಹಾರವಾಯಿತು. ಶೋಭಾ ತಲೆಕೆಡಿಸಿಕೊಳ್ಳುವ ಗೋಜಿಗೆ ಹೋಗಲಿಲ್ಲ. ಫ್ಲೈಓವರ್‌ ಕಾಂಗ್ರೆಸ್‌ ಸಂಸದರ ಕಾಲದ್ದು ಎಂದು ಉತ್ತರ ಕೊಟ್ಟು ನುಣುಚಿಕೊಂಡರು. ಆದರೆ ಜಾಲತಾಣಿಗರು ಟೀಕಿಸುವುದು ಬಿಡಲೇ ಇಲ್ಲ.

ಬ್ಯಾಂಕ್‌ ವಿಲೀನ
ವಿಜಯ ಬ್ಯಾಂಕ್‌ ಅವಿಭಜಿತ ದ.ಕ. ಜಿಲ್ಲೆ ಯೊಂದಿಗೆ ಬಂಧ ಹೊಂದಿದ್ದರೂ ಚುನಾವಣ ಅಸ್ತ್ರವಾಗಿಸುತ್ತಿರುವುದು ದ. ಕನ್ನಡದವರು ಮಾತ್ರ. ಸಂಸದ ನಳಿನ್‌ ಮೌನವೇ ವಿಲೀನಕ್ಕೆ ಕಾರಣ, ಅವರು ವಿಜಯ ಬ್ಯಾಂಕ್‌ನ್ನು ಗುಜರಾತಿ ಗಳಿಗೆ ಮಾರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್‌ ನವರು ಹೇಳುತ್ತಿದ್ದಾರೆ. ಆದರೆ ವಾಸ್ತವ ಹೇಳುವಲ್ಲಿ ಸೋತ ಬಿಜೆಪಿಯವರು ಸುಂದರ ರಾಮ ಶೆಟ್ಟರ ಹೆಸರನ್ನು ರಸ್ತೆಗೆ ಇರಿಸಲು ಲೋಬೋ ಬಿಡಲಿಲ್ಲ, ಐವನ್‌ ಬಿಡಲಿಲ್ಲ ಎನ್ನುತ್ತಿದ್ದಾರೆ.

ಮರಳು ಮರುಳು
ಮರಳು ದೊರೆಯದ ಕಾರಣ ಕಾಮಗಾರಿ ವಿಳಂಬ, ಉದ್ಯೋಗ ಕಡಿಮೆ, ವಹಿವಾಟಿನ ಮೇಲೆ ಗಂಭೀರ ಪರಿಣಾಮಗಳಾಗಿವೆ. ಮರಳು ಚಿನ್ನದ ಬೆಲೆಯಲ್ಲಿ ಕಾಳಸಂತೆಯಲ್ಲಿ ಮಾರಾಟ ವಾಗುತ್ತಿದೆ. ಉಡುಪಿಯಲ್ಲಿ ಮರಳು ಸಮಸ್ಯೆಗೆ ಸಚಿವರಾಗಿದ್ದ ಪ್ರಮೋದ್‌ ಕಾರಣ ಎಂದು ಶೋಭಾ ಹೇಳಿಕೆ ಕೊಟ್ಟರೆ, ಶೋಭಾರಿಂದಾಗಿಯೇ ಮರಳು ಹೊರೆಯಾಗಿದೆ ಎಂದು ಪ್ರಮೋದ್‌ ಹೇಳುತ್ತಾರೆ.

ಎರಡೂ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕಳೆದ ಚುನಾವಣೆ ಸಂದರ್ಭ ಎತ್ತಿನಹೊಳೆ ಯೋಜನೆ ನಿಲ್ಲಿಸಲು ಪಾದಯಾತ್ರೆ, ರಥಯಾತ್ರೆ, ಕರಸೇವೆ ಮಾಡುತ್ತೇವೆ, ಅಣೆಕಟ್ಟು ಒಡೆಯುತ್ತೇವೆ ಎಂದಿದ್ದವರು ಈ ಬಾರಿ ಅದರ ತಂಟೆಗೆ ಹೋಗಿಲ್ಲ. ಕರಾವಳಿಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರದ ಕಾಮಗಾರಿ ಒದಗಿಸುತ್ತೇವೆ ಎಂದ ಕಾಂಗ್ರೆಸಿಗರೂ ತಾವು ಹೇಳಿದ್ದನ್ನು ಮರೆತಿದ್ದಾರೆ.

 ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.