ಉಪ್ಪಿನಕುದ್ರು: ಉಪ್ಪು ನೀರು ತಡೆಗೆ ದಂಡೆ ನಿರ್ಮಾಣ

2 ಕೋ.ರೂ. ವೆಚ್ಚದ ಯೋಜನೆ; ಕಾಮಗಾರಿ ಆರಂಭ, ಎಪ್ರಿಲ್‌ಗೆ ಮುಗಿಯುವ ನಿರೀಕ್ಷೆ

Team Udayavani, Jan 19, 2020, 12:21 AM IST

meg-27

ತಲ್ಲೂರು: ಉಪ್ಪಿನಕುದ್ರುವಿನಲ್ಲಿರುವ ಮಾರನಮನೆ ಪ್ರದೇಶದ ನೂರಾರು ಮಂದಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನದಿ ದಂಡೆ ಸಂರಕ್ಷಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ 2 ಕೋ.ರೂ. ಸಣ್ಣ ಅನುದಾನ ಮಂಜೂರಾಗಿದೆ. ಈಗಾಗಲೇ ಕಾಮಗಾರಿ ಕೂಡ ಆರಂಭಗೊಂಡಿದ್ದು, ಈ ವರ್ಷದ ಎಪ್ರಿಲ್‌ನೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ಉಪ್ಪಿನಕುದ್ರು ಸಮೀಪದ ಮಾರನ ಮನೆ ಪ್ರದೇಶದಲ್ಲಿ 2 ಕೋ.ರೂ. ವೆಚ್ಚದಲ್ಲಿ ಸುಮಾರು 2,450 ಮೀಟರ್‌ ಉದ್ದದ ನದಿ ದಂಡೆ ನಿರ್ಮಾಣವಾಗಲಿದೆ. ಇದು ಮಾರನಮನೆಯ ಸಂಸಾಲ್‌ಕಟ್ಟೆಯಿಂದ ಆರಂಭವಾಗಿ ತಲ್ಲೂರು – ಹೆಮ್ಮಾಡಿ ಮಧ್ಯೆಯಿರುವ ರಾಜಾಡಿ ಸೇತುವೆಯವರೆಗೆ ಈ ನದಿ ದಂಡೆ ನಿರ್ಮಾಣವಾಗಲಿದೆ.

ವಿಸ್ತರಣೆಗೆ ಶಾಸಕರ ಸೂಚನೆ
ಮೊದಲಿಗೆ ಇಲ್ಲಿ ಕೇವಲ 750 ಮೀಟರ್‌ ಮಾತ್ರ ನದಿ ದಂಡೆ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿತ್ತು. ಆದರೆ ಇದರಿಂದ ಅಷ್ಟೇನೂ ಪ್ರಯೋಜನ ವಾಗುವುದಿಲ್ಲ ಎನ್ನುವ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು 750 ಮೀ.ನಿಂದ 2,450 ಮೀ. ವರೆಗೆ ವಿಸ್ತರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಅನೇಕ ವರ್ಷಗಳ ಬೇಡಿಕೆ
ಇಲ್ಲಿ ಕೃಷಿ ಭೂಮಿಗೆ ಉಪ್ಪು ನೀರು ನುಗ್ಗುವುದರಿಂದ ಭತ್ತ, ಕಬ್ಬು ಮತ್ತಿತರ ಕೃಷಿ ಬೆಳೆಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ನದಿ ದಂಡೆ ನಿರ್ಮಾಣ ಮಾಡಬೇಕು ಎನ್ನುವುದು ಇಲ್ಲಿನ ರೈತರ ಅನೇಕ ವರ್ಷಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಗ್ರಾಮಸ್ಥರು ಅನೇಕ ಬಾರಿ ಮನವಿ ಸಲ್ಲಿಸಿದ್ದರು. ಈಗ ಕಾಮಗಾರಿಗೆ ಚಾಲನೆ ದೊರೆತಿದ್ದು, ಆ ಮೂಲಕ ಈ ಭಾಗದ ಜನರ ಬಹು ವರ್ಷಗಳ ಬೇಡಿಕೆಯೊಂದು ಈಡೇರುತ್ತಿದೆ.

ಹತ್ತಾರು ಎಕರೆಗೆ ಅನುಕೂಲ
ಉಪ್ಪಿನಕುದ್ರು ಭಾಗದಲ್ಲಿನ ರೈತರಿಗೆ ಕೃಷಿಗೆ ಪ್ರಮುಖವಾಗಿ ಸಮಸ್ಯೆ ಇರುವುದೇ ಕೃಷಿ ಭೂಮಿಗೆ ಉಪ್ಪು ನೀರು ನುಗ್ಗುವುದು. ಈ ಸಮಸ್ಯೆಗೆ ಹೈರಾಣಾಗಿ ಹೋಗಿರುವ ಇಲ್ಲಿನ ಹೆಚ್ಚಿನ ರೈತರು ಬೇಸಾಯದಿಂದಲೇ ವಿಮುಖರಾಗುವತ್ತ ಹೆಜ್ಜೆಯಿಟ್ಟಿದ್ದರು. ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ಎನ್ನುವಂತೆ ಈ ನದಿ ದಂಡೆ ಸಂರಕ್ಷಣ ಕಾಮಗಾರಿಗೆ 2 ಕೋ.ರೂ. ಅನುದಾನ ಮಂಜೂರಾಗಿ, ಕಾಮಗಾರಿಯೂ ಆರಂಭಗೊಂಡಿದೆ. ಇದರಿಂದ ಈ ಭಾಗದ 100ಕ್ಕೂ ಮಿಕ್ಕಿದ ರೈತರ 25-30 ಎಕರೆ ಕೃಷಿ ಪ್ರದೇಶಕ್ಕೆ ಅನುಕೂಲವಾಗಲಿದೆ.

ಭತ್ತ, ಕಬ್ಬು ಬೆಳೆಗೆ ಸಹಕಾರಿ
ಮಾರನಮನೆ ಬಳಿಯ ನದಿ ದಂಡೆ ನಿರ್ಮಾಣದಿಂದಾಗಿ ಈ ಭಾಗದ ರೈತರಿಗೆ ಭತ್ತ, ಕಬ್ಬು, ಧಾನ್ಯ, ತರಕಾರಿ ಕೃಷಿ ಮಾಡಲು ಅನುಕೂಲವಾಗಲಿದೆ. ಹಿಂದೆ ಉಪ್ಪು ನೀರಿನ ಸಮಸ್ಯೆಯಿಂದಾಗಿ ಮುಂಗಾರು ಕೃಷಿಗೆ ಸಮಸ್ಯೆಯಾಗುತ್ತಿತ್ತು. ಆದರೆ ಈಗ ನದಿ ದಂಡೆ ಸಂಕ್ಷರಣೆಯಿಂದಾಗಿ ಮುಂಗಾರು ಕೃಷಿಯೊಂದಿಗೆ ಹಿಂಗಾರು ಹಂಗಾಮಿಗೂ ರೈತರಿಗೆ ಪ್ರಯೋಜನವಾಗಲಿದೆ.
-ಚಂದ್ರ ದೇವಾಡಿಗ, ಕೃಷಿಕರು

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.