ಇಂದು ಟ್ರಿಪಲ್‌ ತಲಾಖ್‌ ಸಿನಿಮಾ ಪ್ರೀಮಿಯರ್ ಶೋ; ಉಚಿತ ಪ್ರವೇಶ

ಯುವ ಮೆರಿಡಿಯನ್‌ ಹಾಲ್‌ನಲ್ಲಿ ಜ.25ರಂದು ಸಂಜೆ 5.45ಕ್ಕೆ ಟ್ರಿಪಲ್‌ ತಲಾಖ್‌ ಸಿನಿಮಾದ ಪ್ರೀಮಿಯರ್‌ ಪ್ರದರ್ಶನ

Team Udayavani, Jan 25, 2020, 10:13 AM IST

Triple-Talaq-Movie

ಕುಂದಾಪುರ: ಇಲ್ಲಿನ ಯುವ ಮೆರಿಡಿಯನ್‌ ಹಾಲ್‌ನಲ್ಲಿ ಜ.25ರಂದು ಸಂಜೆ 5.45ಕ್ಕೆ ಟ್ರಿಪಲ್‌ ತಲಾಖ್‌ ಸಿನಿಮಾದ ಪ್ರೀಮಿಯರ್‌ ಪ್ರದರ್ಶನ ನಡೆಯಲಿದ್ದು ಸಾರ್ವಜನಿಕ ರಿಗೆ ಮುಕ್ತ ಪ್ರವೇಶ ಇದೆ ಎಂದು ಸಿನಿಮಾ ನಿರ್ದೇಶಕ ಯಾಕೂಬ್‌ ಖಾದರ್‌ ಗುಲ್ವಾಡಿ ಹೇಳಿದರು.

ಅವರು ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. ತ್ರಿವಳಿ ತಲಾಖ್‌ ಸಮಸ್ಯೆ ಹಾಗೂ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿದ ತೀರ್ಪಿನ ಸುತ್ತ ಕಥೆ ಹೆಣೆಯಲಾಗಿದೆ.

96 ನಿಮಿಷಗಳ ಸಿನಿಮಾ ಸಿದ್ಧಪಡಿಸಲಾಗಿದ್ದು ಈ ಮೊದಲೇ ಸಿನಿಮಾ ಚಿತ್ರೀಕರಣ ಮಾಡಲಾಗಿತ್ತು. ಆದರೆ ಮಾರುಕಟ್ಟೆಗೆ ಬಿಡಲು ಸಾಧ್ಯವಾಗಿರಲಿಲ್ಲ. ಅದೇ ಸಂದರ್ಭ ಸುಪ್ರೀಂ
ಕೋರ್ಟ್‌ ತೀರ್ಪು ಬಂದಿದ್ದು ಅನಂತರದ ದಿನಗಳಲ್ಲಿ ನಿರ್ಮಾಪಕರ ಸಹಕಾರದಿಂದ 90 ಶೇ.ದಷ್ಟು ಮರು ಚಿತ್ರೀಕರಣ ನಡೆಸಲಾಗಿದೆ.

ಕುಂದಾಪುರ ತಾಲೂಕಿನಲ್ಲಿಯೇ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದಲ್ಲಿ ರೂಪಾ ವರ್ಕಾಡಿ,ನವ್ಯಾ ಪೂಜಾರಿ, ಅಝರ್‌ ಷಾ, ನ್ಯಾಯವಾದಿ ರವಿಕಿರಣ್‌ ಮುರ್ಡೇಶ್ವರ, ಬೇಬಿ ಪಾಹಿಮಾ, ಸಾಹಿತಿ, ನ್ಯಾಯವಾದಿ ಎ.ಎಸ್‌.ಎನ್‌. ಹೆಬ್ಟಾರ್‌, ಅಮೀರ್‌ ಹಂಝ, ಮಾಸ್ಟರ್‌ ಫ‌ಹಾದ್‌, ಎಂ.ಕೆ. ಮಠ, ದೇವೇಂದ್ರ ಬಡಿಗೇರ್‌, ಮಹಮ್ಮದ್‌ ಬಡ್ಡೂರ್‌, ಉಮರ್‌ ಯು.ಎಚ್‌. ಮೊದಲಾದವರು ನಟಿಸಿದ್ದಾರೆ.

ಬ್ಯಾರಿ ಭಾಷೆಯ ಈ ಚಿತ್ರವನ್ನು ಮುಂದಿನ ದಿನಗಳಲ್ಲಿ ಕನ್ನಡಕ್ಕೆ ಭಾಷಾಂತರಿಸಿ ಟಾಕೀಸ್‌ನಲ್ಲಿ ಬಿಡುಗಡೆ ಮಾಡ ಲಾಗುವುದು. ಈಗ ಟಾಕೀಸ್‌ ನಲ್ಲಿ ಬಿಡುಗಡೆ ಮಾಡುವ ಯೋಜನೆ ಇಲ್ಲ. ಏಕೆಂದರೆ ಥಿಯೇಟರ್‌ಗಳ ಲಾಬಿ ಎದುರಿಸುವುದು ಕಷ್ಟ, ಥಿಯೇಟರ್‌ಗಳು ದೊರೆಯುವುದು ಕಷ್ಟ, ಥಿಯೇಟರ್‌ಗಳ ಬಾಡಿಗೆ ಕಟ್ಟುವುದೂ ಕಷ್ಟ . ಈಗಾಗಲೇ ಸಿನಿಮಾ ಲಂಡನ್‌ನಲ್ಲಿ ಚಿತ್ರೋತ್ಸವದಲ್ಲಿ
ಪ್ರದರ್ಶನ ಕಂಡಿದೆ ಎಂದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಪೂರಕ ಮಾಹಿತಿ ನೀಡಿ, ಕನ್ನಡಕ್ಕೆ 2017ರಲ್ಲಿ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಗುಲ್ವಾಡಿ ಟಾಕೀಸ್‌ ನಿರ್ಮಾಣದ ಯಾಕೂಬ್‌ ಖಾದರ್‌ ತಲಾಖ್‌ ವಿಚಾರದಲ್ಲಿ ಸಾರ್ವಜನಿಕ ವಲಯದಲ್ಲಿ ಬಹಳಷ್ಟು ಕಲ್ಪನೆಗಳಿವೆ. ಕುರಾನ್‌ನಲ್ಲಿ ತಲಾಖ್‌ ಬಗ್ಗೆ ಏನು ಹೇಳಲಾಗಿದೆ ಎನ್ನುವುದನ್ನು ಈ ಸಿನಿಮಾದಲ್ಲಿ ಹೇಳಲು
ಪ್ರಯತ್ನಿಸಲಾಗಿದೆ ಎಂದರು.

ಚಿತ್ರದ ನಿರ್ಮಾಪಕ ನಾರಾಯಣ ಪಿ. ಸುವರ್ಣ ಮುಂಬಯಿ ಮಾತನಾಡಿ, ಚಿತ್ರವು ಪ್ರಾದೇಶಿಕ ಭಾಷೆ ವಿಭಾಗದಲ್ಲಿ ಚಿತ್ರೀಕರಿಸಲ್ಪಟ್ಟಿದ್ದು ಬ್ಯಾರಿ ಭಾಷೆಯಲ್ಲಿದೆ. ಇಂಗ್ಲಿಷ್‌ ಸಬ್‌ಟೈಟಲ್‌ ಒಳಗೊಂಡಿದೆ.

ನ್ಯಾಯಾಲಯ ಹಾಗೂ ಪೊಲೀಸ್‌ ಠಾಣೆ ದೃಶ್ಯಗಳನ್ನು ಸಹಜವಾಗಿ ಬರಲು ಕನ್ನಡದಲ್ಲೇ ಉಳಿಸಿಕೊಳ್ಳಲಾಗಿದೆ. ಎಂದರು. ನಿರ್ಮಾಪಕಿ ಪ್ರಭಾ ಎನ್‌. ಸುವರ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.