ಭಟ್ಕಳ ಸಮೀಪ ಮಂಗಳೂರು ಮೂಲದ ಬೋಟ್ ಮುಳುಗಡೆ
Team Udayavani, Sep 8, 2019, 4:53 PM IST
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮಂಗಳೂರು ಮೂಲದ ಬೋಟ್ ಒಂದು ಭಟ್ಕಳ-ಮುರುಡೇಶ್ವರ ಸಮೀಪದ ನೇತ್ರಾಣಿ ಗುಡ್ಡದ ಸಮೀಪ ಸುಮದ್ರದಲ್ಲಿ ಮುಳುಗಡೆಯಾದ ಘಟನೆ ಸಂಭವಿಸಿದೆ.
ಮುಳುಗಡೆಯಾದ ಈ ಮೀನುಗಾರಿಕಾ ಬೋಟ್ ಮಂಗಳೂರಿನ ಕಸ್ಬಾ ಬೆಂಗ್ರೆಯ ಮೊಹಮ್ಮದ್ ಆಶೀಫ್ ಎಂಬುವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.
ಸೆಪ್ಟೆಂಬರ್ 2 ರಂದು ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆಯಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲಾ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಮೀನುಗಾರಿಕಾ ಬೋಟ್ ಮುಳುಗಡೆಯಾಗಿರುವುದರಿಂದ ಒಟ್ಟಾರೆ ಅಂದಾಜು 85 ಲಕ್ಷ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.