ನಗರದಲ್ಲಿ ಮುಂದುವರಿದ ಮಳೆ: ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ


Team Udayavani, Aug 10, 2019, 12:34 PM IST

10-Naveen-1

ಮಹಾನಗರ: ದ.ಕ. ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಗರದಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದೆ.

ಶುಕ್ರವಾರ ಬೆಳಗ್ಗಿನಿಂದಲೇ ಆರಂಭ ಗೊಂಡಿದ್ದ ಜಿಟಿ ಜಿಟಿ ಮಳೆ ಮಧ್ಯಾಹ್ನ ವೇಳೆಗೆ ತುಸು ಕಡಿಮೆಯಾಗಿತ್ತು. ಬಳಿಕ ಬಿಟ್ಟು ಬಿಟ್ಟು ಮಳೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿತ್ತು.

ನಗರದ ಬಿಜೈ ಬಳಿ ರಸ್ತೆಗೆ ಮರ ಬಿದ್ದು, ಕೆಲವು ಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರ ತೆರವು ಮಾಡಿದರು.

ಸಂಚಾರಕ್ಕೆ ತೊಂದರೆ

ಶುಕ್ರವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ ಪಡೀಲು ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ನಗರದ ಕೊಟ್ಟಾರ, ಕುದ್ರೋಳಿ, ಕೊಟ್ಟಾರಚೌಕಿ, ಮಣ್ಣಗುಡ್ಡೆ, ಕುದ್ರೋಳಿ, ಡೊಂಗರಕೇರಿ, ಅಳಕೆ ಮತ್ತಿತರ ಪ್ರದೇಶಗಳಲ್ಲಿ ನೀರು ನಿಂತು, ಕೃತಕ ನೆರೆ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಬೆಳಗ್ಗೆ ಕೆಲಸಕ್ಕೆಂದು ತೆರಳುವ ಸಮಯದಲ್ಲಿ ಭಾರೀ ಮಳೆಯಾಗಿದ್ದು, ಇದರಿಂದಾಗಿ ನಗರದ ಜ್ಯೋತಿ ವೃತ್ತ, ಬಂಟ್ಸ್‌ ಹಾಸ್ಟೆಲ್, ಸ್ಟೇಟ್ಬ್ಯಾಂಕ್‌, ಪಂಪ್‌ವೆಲ್, ನಂತೂರು, ಕಂಕನಾಡಿ, ಪಿ.ವಿ.ಎಸ್‌. ವೃತ್ತ, ಕೊಟ್ಟಾರ ಚೌಕಿ, ಹಂಪನಕಟ್ಟೆ ಇನ್ನಿತರ ಪ್ರದೇಶಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಹಬ್ಬದ ಸಂದರ್ಭಸಲ್ಲಿ ವಿವಿಧೆಡೆಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಯಿತು.

ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ಕರಾವಳಿ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. .

ಸುರತ್ಕಲ್: ದಿನವಿಡೀ ಮಳೆ; ಮತ್ತೆ ಭೋರ್ಗರೆದ ಸಮುದ್ರ

ಸುರತ್ಕಲ್: ಸುರತ್ಕಲ್, ಪಣಂಬೂರು ಸಹಿತ ಗ್ರಾಮಾಂತರ ಪ್ರದೇಶದಲ್ಲಿ ಶುಕ್ರ ವಾರ ಬಿರುಸಿನ ಮಳೆಯಾಗಿದೆ.

ಚಿತ್ರಾಪುರ, ಬೈಕಂಪಾಡಿ ಕಡಲತೀರದಲ್ಲಿ ಸಮುದ್ರ ಭೋರ್ಗರೆದಿದ್ದು ಮತ್ತು ಭೂಮಿ ಯನ್ನು ಕೊರೆಯತೊಡಗಿದೆ. ಶುಕ್ರವಾರ ಮನೆಗಳನ್ನು ಉಳಿಸುವ ಸಲುವಾಗಿ ಚಿತ್ರಾಪುರ ಭಾಗದಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್ ಆದೇಶ ಮೇರೆಗೆ ಕಪ್ಪು ಕಲ್ಲುಗಳನ್ನು ಸಮುದ್ರ ತೀರದಲ್ಲಿ ಹಾಕಲಾಗಿದೆ.

ತುರ್ತು ಕಾಮಗಾರಿಯಿಂದ ಎರಡು ಬಡ ಕುಟುಂಬಗಳ ಮನೆಗಳು ಸದ್ಯಕ್ಕೆ ಸಮುದ್ರ ಪಾಲಾಗುವುದು ತಪ್ಪಿದಂತಾಗಿದೆ. ಹೆದ್ದಾರಿಯಲ್ಲಿ ವಾಹನಗಳು ಹಗಲಿನಲ್ಲಿಯೇ ದೀಪ ಬೆಳಗಿಸುತ್ತಾ ಮುಂಜಾಗ್ರತೆಯಿಂದ ಚಲಿಸುತ್ತಿರುವುದು ಕಂಡು ಬಂತು. ವಿವಿಧ ತಗ್ಗು ಪ್ರದೇಶದಲ್ಲಿ ನೀರು ನಿಂತರೂ ಹೆಚ್ಚಿನ ಹಾನಿ ಸಂಭವಿಸಿಲ್ಲ.

ದ.ಕ. ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಗರದಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದೆ.

ಶುಕ್ರವಾರ ಬೆಳಗ್ಗಿನಿಂದಲೇ ಆರಂಭ ಗೊಂಡಿದ್ದ ಜಿಟಿ ಜಿಟಿ ಮಳೆ ಮಧ್ಯಾಹ್ನ ವೇಳೆಗೆ ತುಸು ಕಡಿಮೆಯಾಗಿತ್ತು. ಬಳಿಕ ಬಿಟ್ಟು ಬಿಟ್ಟು ಮಳೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿತ್ತು.

ನಗರದ ಬಿಜೈ ಬಳಿ ರಸ್ತೆಗೆ ಮರ ಬಿದ್ದು, ಕೆಲವು ಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರ ತೆರವು ಮಾಡಿದರು.

ಸಂಚಾರಕ್ಕೆ ತೊಂದರೆ
ಶುಕ್ರವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ ಪಡೀಲು ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ನಗರದ ಕೊಟ್ಟಾರ, ಕುದ್ರೋಳಿ, ಕೊಟ್ಟಾರಚೌಕಿ, ಮಣ್ಣಗುಡ್ಡೆ, ಕುದ್ರೋಳಿ, ಡೊಂಗರಕೇರಿ, ಅಳಕೆ ಮತ್ತಿತರ ಪ್ರದೇಶಗಳಲ್ಲಿ ನೀರು ನಿಂತು, ಕೃತಕ ನೆರೆ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಬೆಳಗ್ಗೆ ಕೆಲಸಕ್ಕೆಂದು ತೆರಳುವ ಸಮಯದಲ್ಲಿ ಭಾರೀ ಮಳೆಯಾಗಿದ್ದು, ಇದರಿಂದಾಗಿ ನಗರದ ಜ್ಯೋತಿ ವೃತ್ತ, ಬಂಟ್ಸ್‌ ಹಾಸ್ಟೆಲ್, ಸ್ಟೇಟ್ಬ್ಯಾಂಕ್‌, ಪಂಪ್‌ವೆಲ್, ನಂತೂರು, ಕಂಕನಾಡಿ, ಪಿ.ವಿ.ಎಸ್‌. ವೃತ್ತ, ಕೊಟ್ಟಾರ ಚೌಕಿ, ಹಂಪನಕಟ್ಟೆ ಇನ್ನಿತರ ಪ್ರದೇಶಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಹಬ್ಬದ ಸಂದರ್ಭಸಲ್ಲಿ ವಿವಿಧೆಡೆಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಯಿತು.

ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ಕರಾವಳಿ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. .

ಸುರತ್ಕಲ್: ದಿನವಿಡೀ ಮಳೆ; ಮತ್ತೆ ಭೋರ್ಗರೆದ ಸಮುದ್ರ
ಸುರತ್ಕಲ್: ಸುರತ್ಕಲ್, ಪಣಂಬೂರು ಸಹಿತ ಗ್ರಾಮಾಂತರ ಪ್ರದೇಶದಲ್ಲಿ ಶುಕ್ರ ವಾರ ಬಿರುಸಿನ ಮಳೆಯಾಗಿದೆ.

ಚಿತ್ರಾಪುರ, ಬೈಕಂಪಾಡಿ ಕಡಲತೀರದಲ್ಲಿ ಸಮುದ್ರ ಭೋರ್ಗರೆದಿದ್ದು ಮತ್ತು ಭೂಮಿ ಯನ್ನು ಕೊರೆಯತೊಡಗಿದೆ. ಶುಕ್ರವಾರ ಮನೆಗಳನ್ನು ಉಳಿಸುವ ಸಲುವಾಗಿ ಚಿತ್ರಾಪುರ ಭಾಗದಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್ ಆದೇಶ ಮೇರೆಗೆ ಕಪ್ಪು ಕಲ್ಲುಗಳನ್ನು ಸಮುದ್ರ ತೀರದಲ್ಲಿ ಹಾಕಲಾಗಿದೆ.

ತುರ್ತು ಕಾಮಗಾರಿಯಿಂದ ಎರಡು ಬಡ ಕುಟುಂಬಗಳ ಮನೆಗಳು ಸದ್ಯಕ್ಕೆ ಸಮುದ್ರ ಪಾಲಾಗುವುದು ತಪ್ಪಿದಂತಾಗಿದೆ. ಹೆದ್ದಾರಿಯಲ್ಲಿ ವಾಹನಗಳು ಹಗಲಿನಲ್ಲಿಯೇ ದೀಪ ಬೆಳಗಿಸುತ್ತಾ ಮುಂಜಾಗ್ರತೆಯಿಂದ ಚಲಿಸುತ್ತಿರುವುದು ಕಂಡು ಬಂತು. ವಿವಿಧ ತಗ್ಗು ಪ್ರದೇಶದಲ್ಲಿ ನೀರು ನಿಂತರೂ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.