ಆಳ್ವಾಸ್: 3,000 ಮಂದಿಯಿಂದ ಕಷಾಯ ಸೇವನೆ
Team Udayavani, Aug 2, 2019, 11:53 AM IST
ಜೋತಿಷಿ ಪುತ್ತಿಗೆ ಸುಧಾಕರ ತಂತ್ರಿ ಅವರು ಆಟಿ ಕಷಾಯ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದ್ರವ್ಯಗುಣ ವಿಜ್ಞಾನ ಸ್ನಾತಕೋತ್ತರ ವಿಭಾಗದ ವತಿಯಿಂದ ಗುರುವಾರ ಬೆಳಗ್ಗೆ ಸುಮಾರು 3,000 ಮಂದಿಗೆ ಉಚಿತ ಆಟಿ ಕಷಾಯ ವಿತರಿಸಲಾಯಿತು.
ಜೋತಿಷಿ ಪುತ್ತಿಗೆ ಸುಧಾಕರ ತಂತ್ರಿ ಸಾಂಕೇತಿಕವಾಗಿ ಔಷಧ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಸರ್ವರೋಗ ನಿವಾರಕ ಔಷಧೀಯ ಪಾನೀಯ ಸೇವಿಸಿದರು.
ಕಾರ್ಯಕ್ರಮದ ಸಂಯೋಜಕ ಹಾಗೂ ಆತ್ಮ (ಆಳ್ವಾಸ್ ಟ್ರೆಡಿಶನಲ್ ಮೆಡಿಸಿನ್ ಆರ್ಚೀವ್)ರಿಸರ್ಚ್ ಸೆಂಟರ್ನ ನಿರ್ದೇಶಕ ಡಾ| ಸುಬ್ರಮಣ್ಯ ಪದ್ಯಾಣ ಮಾತನಾಡಿ, ಹಾಲೆಮರದ ತೊಗಟೆಯಲ್ಲಿ ಅಮಾವಾಸ್ಯೆಯ ದಿನ ರೋಗ ನಿರೋಧಕ ಶಕ್ತಿ ಜಾಸ್ತಿ ಇರುವುದರಿಂದ ಈ ದಿನ ಮಾಡುವ ಕಷಾಯಕ್ಕೆ ಹೆಚ್ಚಿನ ಪ್ರಾಧಾನ್ಯ ಇದೆ. ಇದು ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ಸಂರಕ್ಷಿಸಿಕೊಳ್ಳಲು ರಾಮಬಾಣ ಎಂದರು.
ಪ್ರಾಂಶುಪಾಲೆ ಡಾ| ಝೆನಿಕಾ ಡಿ’ಸೋಜಾ, ಉಪಪ್ರಾಂಶುಪಾಲ ಡಾ| ರವಿಕಾಂತ್, ಡಾ| ಸೌಮ್ಯಾ ಸರಸ್ವತಿ ಸಹಿತ ಬೋಧಕರು, ವಿದ್ಯಾರ್ಥಿಗಳು, ಸಿಬಂದಿಗಳು ಮೊದಲಾದವರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ