ಆಯುಷ್ಮಾನ್‌ ಭಾರತ್‌: ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ಆಗ್ರಹ

ಪತ್ರ ಬರೆಯಲು ಬಜತ್ತೂರು ಗ್ರಾಮಸಭೆ ನಿರ್ಣಯ; ಉಪ್ಪಿನಂಗಡಿ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಸೇರಿಸಲು ಪಟ್ಟು

Team Udayavani, Aug 5, 2019, 3:27 PM IST

5-AGUST-32

ಕಾಂಚನದ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಬಜತ್ತೂರು ಗ್ರಾಮಸಭೆ ಜರಗಿತು.

ಉಪ್ಪಿನಂಗಡಿ: ಬಜತ್ತೂರು ಗ್ರಾಮವನ್ನು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿಸಬೇಕು ಹಾಗೂ ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ ನೇರವಾಗಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಬೇಕೆಂದು ಕೋರಿ ಪತ್ರ ಬರೆಯುವ ಬಗ್ಗೆ ಬಜತ್ತೂರು ಗ್ರಾಮಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ಬಜತ್ತೂರು ಗ್ರಾ.ಪಂ. ಅಧ್ಯಕ್ಷ ಸಂತೋಷ್‌ ಕುಮಾರ್‌ ಪಂರ್ದಾಜೆ ಅವರ ಅಧ್ಯಕ್ಷತೆಯಲ್ಲಿ ಕಾಂಚನದ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದ ಬಜತ್ತೂರು ಗ್ರಾ.ಪಂ.ನ ಗ್ರಾಮಸಭೆಯಲ್ಲಿ ವಿಷಯ ಪ್ರಸ್ತಾವಿಸಿದ ಗ್ರಾಮಸ್ಥರು, ಬಜತ್ತೂರು ಗ್ರಾಮವನ್ನು ನೆಲ್ಯಾಡಿ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿಸಲಾಗಿದೆ. ಬಜತ್ತೂರು ಗ್ರಾಮದವರಿಗೆ ಹತ್ತಿರವಿರುವುದು ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರ. ನೆಲ್ಯಾಡಿಯನ್ನು ನೂತನ ಕಡಬ ತಾಲೂಕಿಗೆ ಸೇರಿಸಲಾಗಿದೆ. ಆದ್ದರಿಂದ ಪುತ್ತೂರು ತಾಲೂಕಿನಲ್ಲಿರುವ ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬಜತ್ತೂರು ಗ್ರಾಮವನ್ನು ಸೇರಿಸಬೇಕೆಂದು ಆಗ್ರಹಿಸಿದರು.

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ರೋಗಿ ಮೊದಲಿಗೆ ಸರಕಾರಿ ಆಸ್ಪತ್ರೆಗೆ ದಾಖಲಾಗಬೇಕು. ಅಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಮಾತ್ರ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಶಿಫಾರಸು ಮಾಡುತ್ತಾರೆ. ಇದರಿಂದ ಅಮೂಲ್ಯ ಸಮಯ ಹಾಳಾಗುತ್ತದೆ. ಈ ಯೋಜನೆಯಡಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಪತ್ರ ಬರೆಯಲು ನಿರ್ಣಯ ಕೈಗೊಳ್ಳಲಾಯಿತು.

ಟಾರ್ಪಾಲು ನೀಡಲು ಆಗ್ರಹ
ಕೃಷಿ ಇಲಾಖೆಯಿಂದ ದೊರೆಯುವ ಟಾರ್ಪಾಲು ಪಡೆಯಲು ಒಂದು ಎಕ್ರೆ ಕೃಷಿ ಭೂಮಿ ಇರಬೇಕೆಂಬ ನಿಯಮವಿದೆ. 50 ಸೆಂಟ್ಸ್‌ನಲ್ಲೂ ಕೃಷಿ ಮಾಡುವವರು ಇದ್ದಾರೆ. ಆದ್ದರಿಂದ ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯವನ್ನು 50 ಸೆಂಟ್ಸ್‌ ನವರಿಗೂ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಈ ಬಗ್ಗೆ ನಿರ್ಣಯ ಅಂಗೀಕರಿಸಲಾಯಿತು.

ಪರಿಹಾರ ಸಿಕ್ಕಿಲ್ಲ
ಗ್ರಾಮೀಣ ಭಾಗಗಳಲ್ಲಿ ಸರಕಾರಿ ಬಸ್‌ಗಳ ಕೊರತೆ ಇದ್ದು, ಇದರಿಂದ ಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಸರಕಾರಿ ಬಸ್‌ಗಳ ಕೊರತೆಯನ್ನು ನೀಗಿಸಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು, ಕಳೆದ ಮಳೆಗಾಲದಲ್ಲಿ ಹಾನಿಗೊಂಡ ಮನೆಗಳ ಮಾಲಕರಿಗೆ ಇನ್ನೂ ಪರಿಹಾರ ದೊರಕಿಲ್ಲ. ಇದನ್ನು ಶೀಘ್ರ ನೀಡಬೇಕು ಹಾಗೂ ಅಂತ್ಯಸಂಸ್ಕಾರ ಯೋಜನೆಯಡಿ ನೀಡುವ ಅನುದಾನವೂ ವಿಳಂಬವಾಗಿ ಸಿಗುತ್ತಿದೆ. ಇವುಗಳನ್ನು ತತ್‌ಕ್ಷಣಕ್ಕೆ ಸಿಗುವಂತೆ ಮಾಡಬೇಕೆಂಬ ಒತ್ತಾಯ ಕೇಳಿಬಂತು. ಈ ಬಗ್ಗೆ ಕೋರಿ ಸರಕಾರಕ್ಕೆ ಪತ್ರ ಬರೆಯಲು ನಿರ್ಧರಿಸಲಾಯಿತು.

ಮರಳು ಕೊಡಿ
ಮರಳು ನೀತಿಯನ್ನು ಸರಳಗೊಳಿಸುವ ಮೂಲಕ ಎಲ್ಲರಿಗೂ ಕಡಿಮೆ ದರದಲ್ಲಿ ಮರಳು ಲಭ್ಯವಾಗುವಂತೆ ಮಾಡಬೇಕು. ಅಗತ್ಯವಿರುವಲ್ಲಿ ವಿದ್ಯುತ್‌ನ ಎಚ್.ಟಿ. ಲೈನ್‌ಗಳಿಗೆ ಗಾರ್ಡಿಂಗ್‌ ಅಳವಡಿಸಬೇಕು. ಹೆಚ್ಚು ಉದ್ದದ ವಿದ್ಯುತ್‌ ಲೈನ್‌ಗಳಿದ್ದು, ಮದ್ಯದಲ್ಲಿ ಕಂಬಗಳಿಲ್ಲದೆ ವಿದ್ಯುತ್‌ ತಂತಿಗಳು ಜೋತಾಡುತ್ತಿವೆ. ಇಂತಹ ಕಡೆ ವಿದ್ಯುತ್‌ ಕಂಬಗಳನ್ನು ಅಳವಡಿಸಬೇಕೆಂಬ ಆಗ್ರಹ ಸಭೆಯಲ್ಲಿ ಪ್ರಸ್ತಾವವಾಯಿತು.

ತಾ.ಪಂ. ಸದಸ್ಯ ಮುಕುಂದ ಗೌಡ ಬಜತ್ತೂರು, ಗ್ರಾ.ಪಂ. ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ಪ್ರಸಿಲ್ಲಾ ಡಿ’ಸೋಜಾ, ರಾಜೇಶ್‌ ಕುಮಾರ್‌, ತೇಜಕುಮಾರಿ, ಲೀಲಾವತಿ, ನವೀನ, ಶಶಿತಾ, ಆನಂದ ಕೆ.ಎಸ್‌., ಮಾಧವ ಪೂಜಾರಿ, ಕಮಲಾಕ್ಷಿ, ಗಣೇಶ್‌ ಕೆ., ಚಂಪಾ ಉಪಸ್ಥಿತರಿದ್ದರು.

ನೋಡಲ್ ಅಧಿಕಾರಿಯಾಗಿದ್ದ ಪಶು ಸಂಗೋಪನ ಇಲಾಖೆಯ ಪಶು ವೈದ್ಯಾಧಿಕಾರಿ ಡಾ| ರಾಮ್‌ ಪ್ರಕಾಶ್‌ ಸಭೆ ನಿರ್ವಹಿಸಿದರು. ವಿವಿಧ ಇಲಾಖಾಧಿಕಾರಿಗಳಾದ ಹರಿಣಾಕ್ಷಿ, ಸವಿತಾ ಕೆ., ಪುಷ್ಪವಲ್ಲಿ, ಅಣ್ಣಮ್ಮ, ಸಂದೀಪ್‌, ಸುನೀಲ್, ಕೆ. ರಾಜೇಶ್‌, ಗಣೇಶ್‌, ವಿರೂಪಾಕ್ಷ, ಸಂಗಯ್ಯ ಕಾಳೆ ಇಲಾಖಾ ಮಾಹಿತಿ ನೀಡಿದರು. ಗ್ರಾಮಸ್ಥರಾದ ಗಣೇಶ್‌ ಕುಲಾಲ್, ಗೋಪಾಲಕೃಷ್ಣ ಪೊರೋಳಿ, ವಸಂತ ಗೌಡ ಪಿಜಕ್ಕಳ ಚರ್ಚೆಯಲ್ಲಿ ಭಾಗವಹಿಸಿದ್ದರು.

ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರವೀಣ್‌ ಸ್ವಾಗತಿಸಿ, ವಂದಿಸಿದರು. ಸಿಬಂದಿ ಮಮತಾ, ರಮೇಶ್‌, ಮುಹಮ್ಮದ್‌ ಮುಂತಾದವರು ಸಹಕರಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.