ಕುಂದಾಪುರದಲ್ಲಿ ಎರ್ನಾಕುಲಂ – ಪುಣೆ ಸೂಪರ್ ಫಾಸ್ಟ್ ರೈಲಿಗೆ ನಿಲುಗಡೆ; ಸ್ವಾಗತ
Team Udayavani, Oct 23, 2019, 4:18 AM IST
ಕುಂದಾಪುರ: ಎರ್ನಾಕುಲಂ-ಪುಣೆ ಸೂಪರ್ಫಾಸ್ಟ್ ರೈಲಿಗೆ ಮಂಗಳವಾರದಿಂದ ಕುಂದಾಪುರ (ಮೂಡ್ಲಕಟ್ಟೆ)ದ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದ್ದು, ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ವತಿಯಿಂದ ಸ್ವಾಗತ ಕೋರಲಾಯಿತು.
ಜೈ ಭಾರ್ಗವ ಬಳಗದ ಮನವಿ ಮೇರೆಗೆ ಸಂಸದ ಪ್ರತಾಪ್ಸಿಂಹ ರೈಲ್ವೇ ಸಚಿವರಲ್ಲಿ ಮಾತನಾಡಿ ರೈಲು ನಿಲುಗಡೆಗೆ ಸಹಕರಿಸಿದ್ದರು. ಎರಡು ದಿನಗಳ ಹಿಂದಷ್ಟೇ ಅಂದರೆ ಅ. 20ರಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಪ್ರಯತ್ನದಿಂದಾಗಿ ಕುಂದಾಪುರದಲ್ಲಿ ಕೊಚ್ಚುವೇಲಿ-ಗಂಗಾನಗರ ರೈಲಿಗೆ ನಿಲುಗಡೆಗೆ ಅವಕಾಶ ನೀಡಲಾಗಿತ್ತು. ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ, ಜೈ ಭಾರ್ಗವ ಬಳಗದ ಸದಸ್ಯರು, ಕೋಟೇಶ್ವರ ರೋಟರಿ, ರೋಟರ್ಯಾಕ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ರೈಲು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಎರ್ನಾಕುಲಂನಿಂದ ಮಂಗಳೂರು – ಉಡುಪಿ – ಕುಂದಾಪುರ- ಕಾರವಾರ – ಮಡಗಾಂವ್- ಪನ್ವೇಲ್ ಮಾರ್ಗವಾಗಿ ಪುಣೆಗೆ ಹಾಗೂ ಸೋಮವಾರ ಮತ್ತು ಶುಕ್ರವಾರ ಪುಣೆಯಿಂದ ಎರ್ನಾಕುಲಂಗೆ ಸಂಚರಿಸುತ್ತದೆ. ಇದರಿಂದ ಕೇರಳದಿಂದ ಕೊಲ್ಲೂರು, ಕುಂದಾಪುರದಿಂದ ಕೇರಳ, ಮಹಾರಾಷ್ಟ್ರ, ಗೋವಾಕ್ಕೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ