ಉಪನೋಂದಣಿ ಕಚೇರಿಯಲ್ಲಿ ಜನದಟ್ಟಣೆ

ನಿಧಾನಗತಿ ಪ್ರಕ್ರಿಯೆ; ತಾಂತ್ರಿಕ ಸಮಸ್ಯೆ ಇಲ್ಲ: ಅಧಿಕಾರಿಗಳು

Team Udayavani, Oct 23, 2019, 4:24 AM IST

T-18

ಪುತ್ತೂರು: ಕೆಲವು ದಿನಗಳಿಂದ ಪುತ್ತೂರು ಉಪ ನೋಂದಣಿ ಕಚೇರಿಯಲ್ಲಿ ಜನದಟ್ಟಣೆ ಕಾಣಿಸಿಕೊಂಡಿದೆ. ನೋಂದಣಿಗೆ ಸಂಬಂಧಿಸಿದ ಪ್ರಕ್ರಿಯೆಗಳು ನಿಧಾನ ಗತಿಯಲ್ಲಿ ನಡೆಯುತ್ತಿವೆ ಎನ್ನುವ ಆರೋಪ ಸಾರ್ವಜನಿಕ ಕಡೆಯಿಂದ ಬಂದರೆ, ಈಗ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ ಎನ್ನುವ ಉತ್ತರವನ್ನು ಅಧಿಕಾರಿಗಳು ನೀಡುತ್ತಿದ್ದಾರೆ.

ಈ ತಿಂಗಳ ಆರಂಭದಿಂದಲೇ ನೋಂದಣಿಗೆ ಸಂಬಂಧಿಸಿದ ಸಾಫ್ಟ್‌ ವೇರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿ ಕೊಂಡು ಕಚೇರಿಯಲ್ಲಿ ವಿವಾಹ ಮತ್ತು ಭೂ ದಾಖಲೆಗಳ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡು ಸಮಸ್ಯೆ ಉಂಟಾಗಿತ್ತು. ಅನಂತರ ಉಪ ನೋಂದಣಾಧಿಕಾರಿ ಬೆಂಗಳೂರು ಮುಖ್ಯ ಕಚೇರಿಗೆ ತೆರಳಿ ಅದನ್ನು ಸರಿಪಡಿಸಿಕೊಂಡು ಬಂದಿದ್ದರು. ಈ ಮಧ್ಯೆ ಸುಮಾರು ಎರಡು ವಾರಗಳ ಕಾಲ ನೋಂದಣಿ ಪ್ರಕ್ರಿಯೆಗಳಿಗೆ ಹಿನ್ನಡೆಯಾಗಿತ್ತು. ಸಾರ್ವಜನಿಕರಿಗೂ ತೊಂದರೆಯಾಗಿತ್ತು.

ಉಪನೋಂದಣಿ ಕಚೇರಿಯಲ್ಲಿ ವಿವಾಹ ನೋಂದಣಿಯೊಂದಿಗೆ ಅಗ್ರಿಮೆಂಟ್‌ ರಿಜಿಸ್ಟ್ರೇಶನ್‌, ಮನೆ ಮಾರಾಟ ನೋಂದಣಿ ಸಹಿತ ಭೂಮಿಗೆ ಸಂಬಂಧಿಸಿದ ಎಲ್ಲ ರೀತಿಯ ನೋಂದಣಿ ಪ್ರಕ್ರಿಯೆಗಳು ನಡೆಯುತ್ತವೆ. ಜನರಿಗೆ ಅತಿ ಅಗತ್ಯದ ಕಚೇರಿ ಇದಾಗಿರುವುದರಿಂದ ಜನ ದಟ್ಟಣೆಯೂ ಉಂಟಾಗುತ್ತದೆ. ಪ್ರಸ್ತುತ ಎಲ್ಲ ಸರಕಾರಿ ಕಚೇರಿಗಳಲ್ಲಿ ಇರುವಂತೆ ಸರ್ವರ್‌ ನಿಧಾನಗತಿಯಲ್ಲಿಯೂ ಇದೆ. ಜತೆಗೆ ನೋಂದಣಿ ಸ್ಥಗಿತಗೊಂಡ ದಿನಗಳ ಕೆಲಸವನ್ನೂ ಮುಗಿಸ ಬೇಕಾಗಿದ್ದರಿಂದ ಒಂದಷ್ಟು ಜನದಟ್ಟಣೆ ಉಂಟಾಗಿದೆ ಎನ್ನುವುದು ಅಧಿಕಾರಿಗಳ ಸಮಜಾಯಿಷಿ.

ದಲ್ಲಾಳಿಗಳ ಹಾವಳಿಯೂ ಕಾರಣ
ಉಪನೋಂದಣಿ ಕಚೇರಿಯಲ್ಲಿ ಜಮೀನು ಸಹಿತ ಇತರ ನೋಂದಣಿ ಗಳನ್ನು ಮಾಡಿಸಿಕೊಡುವ ಬ್ರೋಕರ್‌ಗಳ ಸಂಖ್ಯೆ ಹೆಚ್ಚಾಗಿದೆ. ಅಧಿಕಾರಿಗಳು ಬ್ರೋಕರ್‌ ಮೂಲಕ ಬಂದ ಅರ್ಜಿಗಳಿಗೆ ಮೊದಲ ಆದ್ಯತೆ ನೀಡುತ್ತಿದ್ದಾರೆ. ಇದರಿಂದ ನೇರವಾಗಿ ಬರುವ ಸಾರ್ವಜನಿಕರು ಗಂಟೆಗಟ್ಟಲೆ, ದಿನಗಟ್ಟಲೆ ಕಾಯುವಂತಾಗುತ್ತಿದೆ ಎನ್ನುವ ಆರೋಪವೂ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಸರಕಾರಿ ಆಸ್ಪತ್ರೆಯ ಬಳಿ ಪ್ರತ್ಯೇಕವಾಗಿದ್ದ ಉಪ ನೋಂದಣಾ ಧಿಕಾರಿ ಕಚೇರಿಯನ್ನು ಪಾರದರ್ಶಕ ಸೇವೆಯ ದೃಷ್ಟಿಯಿಂದ ಎಲ್ಲ ಕಚೇರಿ ಗಳಿರುವ ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎನ್ನುವ ಸಾರ್ವಜನಿಕ ಆಗ್ರಹದೊಂದಿಗೆ ಕೆಲವು ವರ್ಷಗಳ ಹೊಯ್ದಾಟದ ಬಳಿಕ ಕಚೇರಿ ಮಿನಿ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿತ್ತು. ಆದರೆ ಉಪನೋಂದಣಿ ಕಚೇರಿಯ ತಾಂತ್ರಿಕ ಹಾಗೂ ಸೇವೆಯ ತೊಡಕುಗಳು ಇನ್ನೂ ಸಮರ್ಪಕಗೊಂಡಿಲ್ಲ ಎನ್ನುವ ಆರೋಪಗಳೂ ಇವೆ. ಕಚೇರಿಯಲ್ಲಿ ಪಾರದರ್ಶಕ ಸೇವೆಗೆ ಗಮನ ಹರಿಸಬೇಕು ಎಂದು ಇತ್ತೀಚೆಗೆ ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿಯೂ ಮನವಿಯ ಮೂಲಕ ಆಗ್ರಹಿಸಿತ್ತು.

ತೊಡಕಿಲ್ಲ
ತಾಂತ್ರಿಕ ಸಮಸ್ಯೆಯಿಂದ ಒಂದಷ್ಟು ದಿನ ನೋಂದಣಿ ಪ್ರಕ್ರಿಯೆಗಳು ಸ್ಥಗಿತಗೊಂಡ ಕಾರಣ ಸರಿಯಾದ ಬಳಿಕ ಒಂದಷ್ಟು ಜನದಟ್ಟಣೆ ಇತ್ತು. ಈಗ ಎಲ್ಲ ಪ್ರಕ್ರಿಯೆಗಳು ವೇಗವಾಗಿ ನಡೆಯುತ್ತಿವೆ. ಕೆಲವೊಮ್ಮೆ ಸರ್ವರ್‌ ನಿಧಾನ ಇರುವುದು ಬಿಟ್ಟರೆ ಯಾವುದೇ ತೊಡಕು ಇಲ್ಲ.
– ಶಶಿಧರ್‌ ಗಂಟಿ, ಉಪನೋಂದಣಾಧಿಕಾರಿ, ಪುತ್ತೂರು

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.