ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ: ಅಪಾರ ನಷ್ಟ
ಬಂಟ್ವಾಳದ ಬ್ರಹ್ಮರಕೂಟ್ಲಿನಲ್ಲಿ ಘಟನೆ
Team Udayavani, Oct 24, 2019, 2:43 AM IST
ಬೆಂಕಿ ತಗಲಿ ಸುಟ್ಟು ಹೋಗಿರುವ ಫ್ಲೈವುಡ್ ಫ್ಯಾಕ್ಟರಿಯ ಸೊತ್ತುಗಳು.
ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದಾಗಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಅಪಾರ ಸೊತ್ತು ಭಸ್ಮವಾದ ಘಟನೆ ಬುಧವಾರ ಸಂಭವಿಸಿದೆ. ಬ್ರಹ್ಮರಕೂಟ್ಲು ಶಾಲೆಯ ಮುಂಭಾಗದ ಕೆ. ಹಮೀದ್ ಅವರಿಗೆ ಸೇರಿದ ಕೋಸ್ಟಲ್ ವುಡ್ ಫ್ಯಾಕ್ಟರಿಯಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾವಲುಗಾರ ಫ್ಯಾಕ್ಟರಿ ಮಾಲಕರಿಗೆ ತಿಳಿಸಿದ್ದಾರೆ.
ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿದರು. ಬೆಂಕಿಯ ತೀವ್ರತೆಯನ್ನು ಗಮ ನಿಸಿ ಬಂಟ್ವಾಳದ ಮತ್ತೂಂದು ವಾಹನ ಹಾಗೂ ಮಂಗಳೂರಿನ ಪಾಂಡೇಶ್ವರ ಹಾಗೂ ಕದ್ರಿಯಿಂದ ಲೂ ಅಗ್ನಿಶಾಮಕ ವಾಹನಗಳನ್ನು ತರಿಸಲಾಯಿತು. ಒಟ್ಟು 4 ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬಂದಿ ಮೂರೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಫ್ಲೈವುಡ್ ತಯಾರಿ ಸಲು ಒಣಗಿ ಸಿದ ಕೋರ್, ಸ್ಪೇಸ್, ಶೀಟ್ಗಳು, ಯಂತ್ರೋಪಕರಣ, ವಿದ್ಯುತ್ ಪರಿಕರ ಹಾಗೂ ಮೇಲ್ಛಾವಣಿ ಸುಟ್ಟು ಹೋಗಿವೆ. 41 ಲ.ರೂ. ಗಳಿಗೂ ಅಧಿಕ ನಷ್ಟ ಅಂದಾಜಿಸಲಾಗಿದೆ ಎಂದು ಅಗ್ನಿ ಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯ ಅಗ್ನಿಶಾಮಕ ಅಧಿಕಾರಿ ಶಿವಶಂಕರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ತಿಪ್ಪೇಸ್ವಾಮಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ. ಶೇಖರ್, ಬಂಟ್ವಾಳ ಸಹಾಯಕ ಠಾಣಾಧಿಕಾರಿ ರಾಜೀವ್, ಪಾಂಡೇಶ್ವರ ಸಹಾಯಕ ಠಾಣಾಧಿಕಾರಿ ಆರ್. ಟಿ. ರಮೇಶ್ ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ