ಸರಳ ಮಳೆಕೊಯ್ಲು: ಮಡಂತ್ಯಾರು ಗ್ರಾ.ಪಂ. ಮಾದರಿ

ಆರಂಭದ 100 ಮನೆಗಳಿಗೆ ಅಳವಡಿಕೆ

Team Udayavani, Jul 23, 2019, 5:00 AM IST

i-5

ಬೆಳ್ತಂಗಡಿ: ಜಲಕ್ಷಾಮ ಎಲ್ಲೆಡೆ ಗಂಭೀರ ಸ್ವರೂಪ ಪಡೆಯುತ್ತಿರುವ ನಡುವೆಯೇ ಮಳೆ ಪ್ರಮಾಣ ತೀವ್ರ ಕ್ಷೀಣಿಸಿರುವುದು ಮುಂದಿನ ಬೇಸಗೆ ಪರಿಣಾಮವನ್ನು ಇಂದೇ ಚಿತ್ರಿಸಿದಂತಿದೆ. ಈ ನಡುವೆ ಮಡಂತ್ಯಾರು ಗ್ರಾಮ ಪಂಚಾಯತ್‌ ಅತೀ ಸರಳ ಮಳೆಕೊಯ್ಲು ವಿಧಾನ ಅನುಸರಿಸುವ ಮೂಲಕ ಜಿಲ್ಲೆಗೆ ಮಾದರಿ ಗ್ರಾಮವಾಗಿ ವಿಭಿನ್ನತೆ ಸಂದೇಶ ಸಾರಿದೆ.

ಗ್ರಾಮ ಪಂಚಾಯತ್‌ ಅನುದಾನ
ಆಡಳಿತ ಮಂಡಳಿ ಸಭೆಯಲ್ಲಿ ಮೊದಲ 100 ಮನೆಗಳನ್ನು ಆಯ್ಕೆ ಮಾಡಿದ್ದು, ಪ್ರತಿ ಮನೆಗೆ ರೂ. 1 ಸಾವಿರದಂತೆ 100 ಮನೆಗೆ 1 ಲಕ್ಷ ರೂ. ಮೀಸಲಿಟ್ಟಿದೆ. ಮನೆಮಂದಿ ಆಸಕ್ತಿಯಿಂದ ಮುಂದೆ ಬಂದಲ್ಲಿ ಗ್ರಾಮ ಪಂಚಾಯತ್‌ ಪ್ರಾತ್ಯಕ್ಷಿಕೆ ಮೂಲಕ ಸ್ಥಳೀಯರಿಗೂ ಮಾಹಿತಿ ನೀಡಿ ಅಳವಡಿಸುವ ಮುಖೇನ ಈಗಾಗಲೇ 20 ಮನೆಗಳನ್ನು ಪೂರ್ಣಗೊಳಿಸಿದೆ.

ಶ್ರೀಕ್ಷೇತ್ರ ಧ.ಗ್ರಾ. ಸಹಕಾರ
ಮಡಂತ್ಯಾರು ಗ್ರಾಮ ಪಂಚಾಯತ್‌ ಮಳೆ ಕೊಯ್ಲು ಅನುಷ್ಠಾನಗೊಳ್ಳುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯೂ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಹಲವು ಆಯಾಮಗಳಲ್ಲಿ ಸಮಾಜ ಕಾರ್ಯದಲ್ಲಿ ತೊಡಿಕೊಂಡಿರುವ ಸಂಸ್ಥೆ ಮಡಂತ್ಯಾರು ಗ್ರಾಮ ಪಂಚಾಯತ್‌ ಜತೆಗೂಡಿ ಮೊದಲ 20 ಮನೆಗಳಿಗೆ 500 ರೂ. ನಂತೆ ಸಹಾಯಧನ ಒದಗಿಸುವ ಮೂಲಕ ಅಭಿಯಾನ ಯಶಸ್ಸಿಗೆ ಕೈಜೋಡಿಸಿದೆ. ಇದು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲು ಮತ್ತೂಂದು ಹೆಜ್ಜೆಯಾಗಿದೆ.

2 ಸಾವಿರ ರೂ. ವೆಚ್ಚ
200 ಲೀ. ಸಾಮರ್ಥ್ಯದ ಡ್ರಮ್‌, 5 ಚಟ್ಟಿ 40 ಎಂ.ಎಂ. ಗಾತ್ರದ ಜಲ್ಲಿ, 2 ಬುಟ್ಟಿ ಮರಳು, ನೈಲಾನ್‌ ನೆಟ್‌, 5 ಕೆ.ಜಿ. ಇದ್ದಿಲು, ಬಟ್ಟೆ ಬಳಸಿ ಮನೆ ಆವರಣದ ನೀರನ್ನು ಬಾವಿ ಅಥವಾ ಬೋರ್‌ವೆಲ್‌ಗೆ ಶುದ್ಧೀಕರಿಸಿ ಮರುಪೂರಣ ಮಾಡಲು ತಗಲುವ ವೆಚ್ಚ 2 ಸಾವಿರ ರೂ. ಆರಂಭದಲ್ಲಿ 200 ಲೀ.ನ ಡ್ರಮ್‌ಗೆ ಜಲ್ಲಿ, ನೆಟ್‌, ಜಲ್ಲಿ, ಇದ್ದಿಲು, ನೆಟ್‌, ಮರಳು, ಬಳಿಕ ಬಿಳಿ ನೈಲಾನ್‌ ಬಟ್ಟೆ ಹಂತ ಹಂತವಾಗಿ ಜೋಡಿಸಲಾಗುತ್ತದೆ. ಮನೆ ಛಾವಣೆಗೆ ಬಿದ್ದ ಮಳೆ ನೀರು ಪೈಪ್‌ ಮೂಲಕ ಡ್ರಮ್‌ ಸೇರಿ ಶುದ್ಧಗೊಂಡು ಬೋರ್‌ವೆಲ್‌ ಅಥವಾ ಬಾವಿಗೆ ಸೇರುವ ಮೂಲಕ ಸರಳ ವಿಧಾನದಲ್ಲಿ ಕಡಿಮೆ ಖರ್ಚಿನಲ್ಲಿ ಮರುಪೂರಣ ಮಾಡಿರುವುದು ವಿಶೇಷತೆಯಾಗಿದೆ.

 ಜಲ ಸಂರಕ್ಷಣೆ
ನೀರಿನ ಅಭಾವ ಭವಿಷ್ಯದಲ್ಲಿ ಬಾರದಿರುವ ಉದ್ದೇಶದಿಂದ ಆಡಳಿತ ಮಂಡಳಿ, ಸದಸ್ಯರು ಗಮನಾರ್ಹ ಚಿಂತನೆ ಕೈಗೊಂಡಿದ್ದೇವೆ. ಎಲ್ಲರ ಒಮ್ಮತದಿಂದ ಅಭಿಯಾನ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ 2,500ಕ್ಕೂ ಹೆಚ್ಚು ಮನೆಗಳಿದ್ದು, ಮೊದಲ ಹಂತವಾಗಿ 100 ಮನೆಗಳಿಗೆ ಅನುದಾನ ನೀಡಲಾಗಿದೆ. ಸರಳ ವಿಧಾನವಾದ್ದರಿಂದ ಪ್ರತಿಯೊಂದು ಮನೆಯಲ್ಲೂ ಅಳವಡಿಸಿ ಜಲ ಸಂರಕ್ಷಣೆ, ಅಂತರ್ಜಲ ಹೆಚ್ಚಿಸಬೇಕಾಗಿದೆ.
 -ಗೋಪಾಲಕೃಷ್ಣ ಕೆ., ಅಧ್ಯಕ್ಷರು, ಮಡಂತ್ಯಾರು ಗ್ರಾ.ಪಂ.

ಅತೀ ಕಡಿಮೆ ವೆಚ್ಚ
ನೀರಿನ ಸಮಸ್ಯೆ ಮನಗಂಡು ಮನೆಮಂದಿ ಈ ಸರಳವಿಧಾನ ಅಳವಡಿಸಲು ಮುಂದಾಗಿದ್ದೆವು. ಅತೀ ಕಡಿಮೆ ವೆಚ್ಚದಲ್ಲಿ ಜಲ ಮರುಪೂರಣ ಮಾಡಲಾಗಿದೆ. ಈ ವಿಧಾನವನ್ನು ಪ್ರತಿಯೊಬ್ಬರು ಅಳವಡಿಸಿದಲ್ಲಿ ನೀರಿನ ಸಮಸ್ಯೆ ಭವಿಷ್ಯದಲ್ಲಿ ಆಪತ್ತು ಬರದಂತೆ ಕಾಪಾಡಲಿದೆ.
– ಹರಿಣಾಕ್ಷಿ, ಸೇವಾನಿರತೆ, ಪಾರೆಂಕಿ

 ಪ್ರಾತ್ಯಕ್ಷಿಕೆ
ಶ್ರೀಕ್ಷೇತ್ರ ಧ.ಗ್ರಾ. ಸಂಸ್ಥೆ ಈಗಾಗಲೇ ರಾಜ್ಯಾದ್ಯಂತ ಕೆರೆ ಪುನಶ್ಚೇತನ, ಇಂಗುಗುಂಡಿ ನಿರ್ಮಾಣ ಕಾರ್ಯದಲ್ಲಿ ನಿರತವಾಗಿದೆ. ಮಡಂತ್ಯಾರು ಗ್ರಾ.ಪಂ. ಚಿಂತನೆಗೆ ಪೂರಕವಾಗಿ ಮೊದಲ 20 ಮನೆಗಳಿಗೆ ಅನುದಾನ ನೀಡಿ ಪ್ರಾತ್ಯಕ್ಷಿಕೆ ಮೂಲಕವೂ ಮಾಹಿತಿ ಒದಗಿಸಿದ್ದೇವೆ.
-ಸಚಿನ್‌, ವಲಯ ಮೇಲ್ವಿಚಾರಕರು, ಎಸ್‌.ಕೆ.ಡಿ.ಆರ್‌.ಡಿ.ಪಿ.

-  ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.