ಬಾಯಾರಿಕೆ ನೀಗಿಸಿಕೊಳ್ಳಲು ಬಂದ ಗಜಹಿಂಡು ಕೆರೆಯಲ್ಲೇ ಬಾಕಿ

ಅರಣ್ಯ ಇಲಾಖೆಯಿಂದ ವನ್ಯಜೀವಿಯ ರಕ್ಷಣೆ

Team Udayavani, Apr 13, 2019, 6:00 AM IST

i-18

ಆನೆಗಳು ಕೆಲಕಾಲ ಕೆಸರಿನಲ್ಲಿ ಹೊರಳಾಡಿದವು.

ಮಡಿಕೇರಿ: ಬಾಯಾರಿಕೆ ನೀಗಿಸಿಕೊಳ್ಳಲು ತೋಟದ ಕೆರೆಗಿಳಿದ ಕಾಡಾನೆಗಳ ಹಿಂಡೊಂದು, ಕೆಸರು ಮಯವಾಗಿದ್ದರಿಂದ ದಂಡೆಯನ್ನೇರಲಾಗದೆ ಕೆಲ ಕಾಲ ಅಲ್ಲಿಯೇ ಬಂಧಿಯಾದ ಘಟನೆ ದಕ್ಷಿಣ ಕೊಡಗಿನ ಪಾಲಂಗಾಲ ಗ್ರಾಮದಲ್ಲಿ ನಡೆಯಿತು.

ಪಾಲಂಗಾಲ ಗ್ರಾಮದ ಕರಿನೆರವಂಡ ಮಿಟ್ಟು ಅಯ್ಯಪ್ಪ ಅವರ ತೋಟದ ಕೆರೆಗೆ ರಾತ್ರಿಯ ವೇಳೆ ನೀರು ಕುಡಿಯಲು ಬಂದ ಕಾಡಾನೆಗಳ ಹಿಂಡೊಂದು ಕೆರೆಗಿಳಿದು, ಹರ ಸಾಹಸಪಟ್ಟರು ಕೆರೆಯಿಂದ ಹೊರ ಬರಲು ಸಾಧ್ಯವಾಗದೆ ಅಹೋರಾತ್ರಿ ಅಲ್ಲಿಯೇ ಸಿಲುಕಿಕೊಂಡು, ಮರು ದಿನ ಅರಣ್ಯ ಇಲಾಖೆಯ ಸಿಬಂದಿಗಳ ಮತ್ತು ಗ್ರಾಮಸ್ಥರು ಕೆರೆ ಬದಿಯಲ್ಲಿ ನಿರ್ಮಿಸಿಕೊಟ್ಟ ಹಾದಿಯನ್ನು ಬಳಸಿ ಕೆರೆಯಿಂದ ಹೊರ ಬಂದ ಘಟನೆ ನಡೆಯಿತು.

ರಾತ್ರಿ ಇಡೀ ಕೆರೆಯಲ್ಲಿ ಸಿಲುಕಿಳಿಡುತ್ತಿದ್ದ ಆನೆಗಳ ಬಗ್ಗೆ ತೋಟ ಮಾಲಕರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬಂದಿಗಳು ಬೆಳಗಿನಿಂದ ಹರಸಾಹಸದಿಂದ ಕೆರೆಯ ಒಂದು ಭಾಗದ ಅಂಚನ್ನು ಜೆಸಿಬಿ ಬಳಸಿ ಅಗೆದು ಹಾದಿ ಕಲ್ಪಿಸಿದ ಬಳಿಕ ಕಾಡಾನೆಗಳ ಹಿಂಡು ಒಂದರ ಹಿಂದೆ ಮತ್ತೂಂದರಂತೆ ಕೆರೆಯಿಂದ ಹೊರಬಂದು ಕಾಡಿನತ್ತ ತೆರಳಿದವು.

ಸ್ಥಳೀಯ ಕಾಫಿ ಬೆಳೆಗಾರರಾದ ಕರಿನೆ ರವಂಡ ಅಚ್ಚಮ್ಮ ಕಸ್ತೂರಿ ಮಾತನಾಡಿ, ಪಾಲಂಗಾಲ ಗ್ರಾಮದಲ್ಲಿ ಇಂತಹ ಘಟನೆಗಳು ಮುಂದುವರಿದಿದ್ದು, ಕಾಡಾನೆಗಳಿಂದ ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಪಾಲಂಗಾಲ ಗ್ರಾಮ ದಲ್ಲಿ ಎರಡು ಬಾರಿ ಮತ್ತು ಚೇಲಾವರ ಗ್ರಾಮದಲ್ಲಿ ಒಂದು ಬಾರಿ ಕಾಡಾನೆಗಳು ದಾಂಧಲೆ ನಡೆಸಿ ಅಪಾರ ಕೃಷಿ ಹಾನಿಗೆ ಕಾರಣವಾಗಿವೆ. ವೈಜ್ಞಾನಿಕವಾಗಿ ಅರಣ್ಯದ ಅಂಚಿನಲ್ಲಿ ಕಂದಕ ಮತ್ತು ರೈಲು ಹಳಿಗಳಿಂದ ಬೇಲಿ ನಿರ್ಮಾಣ ಮಾಡದಿರುವ ಪರಿಣಾಮ ಕಾಡಾನೆಗಳು ಮೇವು ಅರಸಿಕೊಂಡು ನಾಡಿಗೆ ಬರುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಗ್ರಾಮಸ್ಥರ ಅಡ್ಡಿ-ಕಾಡಾನೆಗಳ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬಂದಿಗಳಿಗೆ ಘೇರಾವೋ ಹಾಕಿದರಲ್ಲದೆ, ಡಿಎಫ್ಒ ಕ್ರಿಸ್ತರಾಜು ಅವರೊಂದಿಗೆ ವಾದ ವಿವಾದಕ್ಕೆ ಇಳಿದ ಘಟನೆ ನಡೆಯಿತು. ಬಳಿಕ ಅರಣ್ಯಾಧಿಕಾರಿಗಳು ಕಾಡಾನೆ ಹಾವಳಿ ನಿಯಂತ್ರಣದ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಗ್ರಾಮಸ್ಥರ ಮನವೊಲಿಸಿದರು.

ಕಾಡಾನೆಗಳನ್ನು ರಕ್ಷಿಸುವ ಕಾರ್ಯಾ ಚರಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬಂದಿಗಳು, ಗ್ರಾಮ ಸ್ಥರು ಹಾಗೂ ತೋಟ ಕಾರ್ಮಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.