ಮತದಾನೋತ್ತರ ಸಮೀಕ್ಷೆಗೆ ಮಾರುತ್ತರ


Team Udayavani, May 21, 2019, 6:00 AM IST

BJP-CON-JDS

ವಿವಿಧ ವಾಹಿನಿಗಳು ನಡೆಸಿರುವ ಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆಗಳು ‘ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಗಲಿದ್ದು, ರಾಜ್ಯದಲ್ಲೂ ಬಿಜೆಪಿಗೆ ಉತ್ತಮ ಫ‌ಲಿತಾಂಶ ವ್ಯಕ್ತವಾಗಲಿದೆ’ ಎಂದು ಹೇಳಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೇರಿ ಹಲವು ಪಕ್ಷಗಳ ಮುಖಂಡರು ಸಮೀಕ್ಷೆಗಳ ಕುರಿತು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೇ 23ರ ಫ‌ಲಿತಾಂಶದ ಕುತೂಹಲದ ನಡುವೆಯೇ ಸಮೀಕ್ಷೆಗಳ ಕುರಿತಂತೆ ವ್ಯಕ್ತವಾದ ರಾಜಕೀಯ ಪ್ರಮುಖರ ಅನಿಸಿಕೆಗಳು ಇಲ್ಲಿವೆ…

23ರ ಬಳಿಕ ರಾಜಕಾರಣ ಚಿತ್ರಣ ಬದಲು
ಬೆಂಗಳೂರು: ‘ದೇಶದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ಬರಲಿದೆ ಎಂದೇ ಹೇಳಿವೆ. ರಾಜ್ಯದಲ್ಲೂ ಬಿಜೆಪಿ 22- 23 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಮೇ 23ರ ನಂತರ ರಾಷ್ಟ್ರ ಹಾಗೂ ರಾಜ್ಯ ರಾಜಕೀಯ ಚಿತ್ರಣ ಬದಲಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಮೀಕ್ಷೆಗಳನ್ನು ಕಂಡು ಕಾಂಗ್ರೆಸ್‌ ಹಿರಿಯ ನಾಯಕರು ಹತಾಶರಾಗಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ಹತಾಶ ಭಾವನೆ ಮೂಡಿದೆ. ಮತಗಟ್ಟೆ ಸಮೀಕ್ಷೆಗಳನ್ನು ರಾಜಕೀಯ ನಾಯಕರು ನಡೆಸಲು ಸಾಧ್ಯವಿದೆಯೇ’ ಎಂದು ಪ್ರಶ್ನಿಸಿದರು.

ಮೇ 23ರ ನಂತರ ಕೇಂದ್ರದಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅದಕ್ಕಿಂತ ದೊಡ್ಡ ರಾಜಕೀಯ ಬದಲಾವಣೆ ಇನ್ನೇನು ಬೇಕು ಎಂದು ಯಡಿಯೂರಪ್ಪ ಹೇಳಿದರು.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಶ್ರೀರಾಮುಲು
ಬಳ್ಳಾರಿ: ‘ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಎನ್‌ಡಿಎ ಪರ ಇದ್ದು, ದೇಶದಲ್ಲಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಐದು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಪ್ರಾಮಾಣಿಕವಾಗಿ ಅಧಿಕಾರ ನಡೆಸಿರುವುದರಿಂದ ದೇಶದ ಮತದಾರರು ಮತ್ತೂಮ್ಮೆ ಬಿಜೆಪಿಗೆ ಜೈಕಾರ ಹಾಕಿದ್ದಾರೆ. ಹೀಗಾಗಿ ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಎನ್‌ಡಿಎ ಪರವಾಗಿ ಬಂದಿದ್ದು, ಮೈತ್ರಿಕೂಟ ರಚಿಸಿಕೊಂಡಿರುವ ಮಹಾಘಟಬಂಧನ್‌ಗೆ ಹಿನ್ನಡೆಯಾಗಿದೆ ಎಂದರು.

ರಾಜ್ಯದಲ್ಲೂ ಮೈತ್ರಿ ಸರ್ಕಾರ ಬದಲಾಗ ಬೇಕಿದೆ. ಯಡಿಯೂರಪ್ಪ ಮತ್ತೂಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕಿದೆ. ಭಾನುವಾರವಷ್ಟೇ ಉಪಚುನಾವಣೆ ನಡೆದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದರು. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ವ್ಯತಿರಿಕ್ತ ಫಲಿತಾಂಶ ಬರಲು ಸೂಕ್ತ ನಾಯಕತ್ವ ಇಲ್ಲದಿರುವುದೇ ಕಾರಣ. ಇದರಿಂದ ಮಹಾಘಟಬಂಧನ್‌ಗೆ ಸರ್ಕಾರ ರಚಿಸಲು ಸಾಧ್ಯವಾಗಲ್ಲ ಎಂದರು.

ನೋಡ್ತಾ ಇರಿ, 24ಕ್ಕೆ ಸರ್ಕಾರ ಬಿದ್ದೇ ಬೀಳುತ್ತೆ
ಕಲಬುರಗಿ: ‘
ಚಿಂಚೋಳಿಯಲ್ಲಿ ಯಾವ ಪಕ್ಷದ ಶಾಸಕರು ಇರುತ್ತಾರೆಯೋ ಅದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಇರುತ್ತದೆ ಎಂಬ ಇತಿಹಾಸ ನೋಡಿದರೆ ಮತ್ತೆ ಯಡಿಯೂರಪ್ಪ ಸಿಎಂ ಆಗಲೆಂದೇ ಚಿಂಚೋಳಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿರುವುದು ಸನ್ನಿವೇಶ ಹಾಗೂ ಪರಿಸ್ಥಿತಿ ನಿರೂಪಿಸುತ್ತಿದೆ’ ಎಂದು ಮಾಜಿ ಶಾಸಕ ಡಾ.ಉಮೇಶ ಜಾಧವ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಕುಂದಗೋಳ ಹಾಗೂ ಚಿಂಚೋಳಿಯಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ. 23ಕ್ಕೆ ಫ‌ಲಿ ತಾಂಶ ಬರುತ್ತೆ. 24ಕ್ಕೆ ರಾಜ್ಯ ಸರ್ಕಾರ ಬೀಳುತ್ತೆ, ನೋಡ್ತಾ ಇರಿ ಯಡಿಯೂರಪ್ಪ ಸಿಎಂ ಆಗ್ತಾರೆ. ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ನಿಜ. ದೇಶದಲ್ಲಿ ಮತ್ತೂಮ್ಮೆ ಮೋದಿ ಪ್ರಧಾನಿ ಆಗುವುದು ನಿಶ್ಚಿತ’ ಎಂದರು.

ಸಮೀಕ್ಷೆಗಿಂತ ಮುಂಚೆಯೇ ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬರುತ್ತದೆ ಎಂದು ಹೇಳ ಲಾಗಿತ್ತು. ಈಗ ಅದು ನಿಜವಾಗುತ್ತಿದೆ. ಕಲಬುರಗಿಯಲ್ಲಿ ಮಲ್ಲಿ ಕಾರ್ಜುನ ಖರ್ಗೆ ಸುಳ್ಳಿನ ಕೋಟೆ ಛಿದ್ರವಾಗಲಿದೆ. ಖರ್ಗೆ ಸೋತು ಮನೆಗೆ ಹೋಗಲಿದ್ದಾರೆ. ಇದುವರೆಗೂ ಹೊಂದಾಣಿಕೆ ರಾಜಕಾರಣ ದಿಂದ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು. ಆದರೆ ಇದೇ ಸಲ ತಮ್ಮ ವಿರುದ್ಧ ನಿಜವಾದ ಚುನಾವಣೆ ಎದುರಿಸಿದ್ದಾರೆ ಎಂದರು.

ಸಮೀಕ್ಷೆಗಳು ಸತ್ಯವಾಗಿಲ್ಲ: ಎಂಬಿಪಿ
ವಿಜಯಪುರ: ‘ಮತದಾನೋತ್ತರ ಸಮೀಕ್ಷೆ ಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ ಎನ್‌ಡಿಎ ಅಧಿಕಾರಕ್ಕೆ ಬರುತ್ತದೆ ಎಂಬುದು ಸತ್ಯಕ್ಕೆ ದೂರವಾದ ಕಲ್ಪನೆ ಅಷ್ಟೇ. ಬದಲಾಗಿ ಕಾಂಗ್ರೆಸ್‌ ಪಕ್ಷ 250ಕ್ಕೂ ಹೆಚ್ಚು ಸ್ಥಾನ ಗಳಿಸಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂಬುದೇ ಸತ್ಯ. ಮೇ 23ರಂದು ಸತ್ಯ ಬಯಲಿಗೆ ಬರಲಿದೆ’ ಎಂದು ಗೃಹ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ‘ಈ ಹಿಂದೆ ಇಂಥ ಸಮೀಕ್ಷೆಗಳೆಲ್ಲ ತಲೆ ಕೆಳಗಾಗಿವೆ. ಸಮೀಕ್ಷೆಗಳಲ್ಲಿ ಸಂಗ್ರಹಿಸಿದ್ದು ಕೆಲವೇ ಕೆಲವು ಮತದಾರರ ಭಾವ ನೆಯೇ ಹೊರತು ಇಡೀ ಕ್ಷೇತ್ರದ ಜನತೆಯ ಅಶಯವಾಗಿರುವುದಿಲ್ಲ.

ಇದನ್ನೇ ನಂಬಿ ಬಿಜೆಪಿ ಈಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದರೆ 23ರಂದು ನಿರಾಸೆ ಅನುಭವಿಸುವ ಜೊತೆಗೆ ಮುಜುಗರಕ್ಕೆ ಈಡಾಗಬೇಕಾದೀತು. ಇದರ ಹೊರತಾಗಿಯೂ ಸಮೀಕ್ಷೆಗಳಂತೆ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಜನಾದೇಶಕ್ಕೆ ನಾವೆಲ್ಲ ತಲೆ ಬಾಗಲೇಬೇಕು’ ಎಂದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.