ಬಿಎಸ್ವೈಗೆ ಸದನದ ವಿಶ್ವಾಸ
Team Udayavani, Jul 30, 2019, 5:30 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಸೋಮವಾರ ಧ್ವನಿಮತದ ವಿಶ್ವಾಸಮತ ಸಾಬೀತುಪಡಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಅಧಿಕೃತವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ಕಾಂಗ್ರೆಸ್, ಜೆಡಿಎಸ್ ಹಾಗೂ ಕೆಪಿಜೆಪಿ ಸೇರಿ ಹದಿನೇಳು ಶಾಸಕರ ಅನರ್ಹತೆಯಿಂದಾಗಿ ಸದನದ ಸಂಖ್ಯಾಬಲ 208ಕ್ಕೆ ಇಳಿದಿತ್ತು. ಹೀಗಾಗಿ ಬಿಜೆಪಿ 106 ಸದಸ್ಯ ಬಲದೊಂದಿಗೆ ಬಹುಮತ ಹೊಂದಿದ್ದರಿಂದ ಪ್ರತಿಪಕ್ಷವು ವಿಶ್ವಾಸಮತ ನಿರ್ಣಯ ಮತಕ್ಕೆ ಹಾಕುವ ಒತ್ತಾಯವನ್ನೂ ಮಾಡಲಿಲ್ಲ. ಹೀಗಾಗಿ, ಧ್ವನಿಮತದ ಮೂಲಕ ಯಡಿಯೂರಪ್ಪ ಅವರು ಮಂಡಿಸಿದ ವಿಶ್ವಾಸಮತ ನಿರ್ಣಯ ಅಂಗೀಕಾರಗೊಂಡ ಬಗ್ಗೆ ಸ್ಪೀಕರ್ ರಮೇಶ್ಕುಮಾರ್ ಪ್ರಕಟಿಸಿದರು.
ಯಡಿಯೂರಪ್ಪ ಅವರು ವಿಶ್ವಾಸಮತದಲ್ಲಿ ಯಶಸ್ವಿಯಾಗುತ್ತಿದ್ದಂತೆ ಬಿಜೆಪಿ ಸದಸ್ಯರ ಮುಖದಲ್ಲಿ ಸಂತಸ ಮೂಡಿತು. ಕಳೆದೊಂದು ತಿಂಗಳಿನಿಂದ ನಡೆದ ರಾಜಕೀಯ ಹೈಡ್ರಾಮಾ ಕೊನೆಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂತಾಗಿದೆ. ಸದ್ಯದ ಮಟ್ಟಿಗೆ ಆರು ತಿಂಗಳು ನೂತನ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ.
ಸೇಡಿನ ರಾಜಕಾರಣ ಇಲ್ಲ: ವಿಶ್ವಾಸಮತ ನಿರ್ಣಯ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾಡದೇವತೆ ಚಾಮುಂಡೇಶ್ವರಿ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿ, ‘ರಾಜ್ಯದ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಸೇಡಿನ ರಾಜಕಾರಣ ಮಾಡಿಲ್ಲ. ನಮ್ಮ ಸರ್ಕಾರವು ಸಹ ಸೇಡಿನ ರಾಜಕಾರಣ ಮಾಡಲ್ಲ. ‘ಫರ್ಗೆಟ್ ಅಂಡ್ ಫರ್ಗೀವ್’ ನಮ್ಮ ಇಚ್ಛೆ. ಕುಸಿದಿರುವ ಆಡಳಿತ ಯಂತ್ರಕ್ಕೆ ಚುರುಕು ನೀಡಲಾಗುವುದು’ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಕೂಡಲೇ ರೈತರ ನೆರವಿಗೆ ಧಾವಿಸಿದ್ದೇನೆ. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರದಿಂದ ನಾಲ್ಕು ಸಾವಿರ ಕೋಟಿ ರೂ. ನೀಡುವ ತೀರ್ಮಾನ ಕೈಗೊಂಡಿದ್ದೇನೆ. ನೇಕಾರರ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದ್ದೇನೆ. ಉತ್ತಮ ಆಡಳಿತ ನೀಡುವ ಗುರಿ ಹೊಂದಿದ್ದು ಪ್ರತಿಪಕ್ಷಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಆಡಳಿತ ಯಂತ್ರ ಸ್ಥಗಿತವಾಗಿಲ್ಲ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಯಡಿಯೂರಪ್ಪ ಅವರು ಯಾವ ಮಾರ್ಗದಿಂದ ಮುಖ್ಯಮಂತ್ರಿಯಾದರು ಎಂಬ ಬಗ್ಗೆ ನಾನು ಚರ್ಚೆ ಮಾಡಲ್ಲ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಡಿನ ಒಳಿತಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಾನು ಹಾಗೂ ಕುಮಾರಸ್ವಾಮಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಆಡಳಿತ ಯಂತ್ರ ಸ್ಥಗಿತಗೊಂಡಿದೆ ಎಂಬುದು ಸರಿಯಲ್ಲ. ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ತಿರುಗೇಟು ನೀಡಿದರು.
ಮೈತ್ರಿ ಸರ್ಕಾರ ಜನ ಮೆಚ್ಚುವ ಆಡಳಿತ ನೀಡಿದೆ. ಆಡಳಿತ ಸ್ಥಗಿತವಾಗಿಲ್ಲ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿ ದ್ದೇವೆ. ನಾನು ಕಡೇ ಬಜೆಟ್ ಮಂಡಿಸಿದ್ದ ವೇಳೆ ರೈತ ಬೆಳಕು ಯೋಜನೆಯಡಿ 10 ಸಾವಿರ ರೂ. ನೀಡುವ ಯೋಜನೆ ಘೋಷಿಸಿದ್ದೆ ಎಂದರು.
ನೇಕಾರರ ಸಾಲ ಮನ್ನಾ ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು. ನೀವು ಅದನ್ನು ಪುನರುಚ್ಛಾರ ಮಾಡಿದ್ದೀರಿ, ಅದಕ್ಕೆ ನಿಮಗೆ ಅಭಿನಂದನೆಗಳು ಎಂದು ಹೇಳಿದರು.
ಜನಾದೇಶವಿರಲಿಲ್ಲ: ಬಿಜೆಪಿಗೆ ಜನಾದೇಶವಿಲ್ಲ, ಶಾಸಕರು ಅತೃಪ್ತರಾಗಿರಲಿಲ್ಲ, ನೀವು ಅವರನ್ನು ಅತೃಪ್ತರಾಗಿ ಮಾಡಿದ್ದೀರಿ. ಯಡಿಯೂರಪ್ಪ ಅವರಿಗೆ ಒಂದು ಬಾರಿಯೂ ಜನಾದೇಶ ಸಿಗಲಿಲ್ಲ. ಎಷ್ಟು ದಿನ ನೀವು ಅಧಿಕಾರದಲ್ಲಿ ಇರುತ್ತೀರೋ ನೋಡೋಣ ಎಂದು ಕಾಲೆಳೆದರು. ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಒಂದೇ ದಿನದಲ್ಲಿ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶ, ವರ್ಗಾವಣೆ, ಕಾಮಗಾರಿ ಟೆಂಡರ್ ಎಲ್ಲದಕ್ಕೂ ತಡೆ ನೀಡಿದ್ದೀರಿ. ದ್ವೇಷದ ರಾಜಕಾರಣ ಮಾಡಲ್ಲ ಎಂದು ಹೇಳಿ ಹೀಗೆ ಮಾಡಿದ್ದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ದಾಖಲೆ ಸಮೇತ ಹೇಳಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಆಡಳಿತ ಯಂತ್ರ ಕುಸಿದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಪ್ರತಿಪಕ್ಷ ನಾಯಕರಾಗಿ ಹೇಗೆ ಆಡಳಿತ ಯಂತ್ರ ಇತ್ತು ಎಂಬ ಮಾಹಿತಿ ಪಡೆದಿದ್ದಾರೆ. ಅದನ್ನು ಸದನದಲ್ಲಿ ದಾಖಲೆ ಸಹಿತ ಚರ್ಚೆ ಮಾಡಲಿ, ಕೇವಲ ಬಾಯಿ ಚಪಲಕ್ಕೆ ಮಾತನಾಡುವುದು ಬೇಡ ಎಂದು ಹೇಳಿದರು. ಹಲವಾರು ಅಡಚಣೆಗಳ ಮಧ್ಯೆ, 14 ತಿಂಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮೈತ್ರಿ ಸರ್ಕಾರದಲ್ಲಿ ನನ್ನ ಇತಿಮಿತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ.ಪಾಪದ ಸರ್ಕಾರ ತೆಗೆದು ಪುಣ್ಯದ ಸರ್ಕಾರ ಮಾಡಿದ್ದೀರಿ. 17 ಶಾಸಕರನ್ನು ನಡು ನೀರಿನಲ್ಲಿ ಕೈ ಬಿಡಬೇಡಿ. ಅವರು ಈಗ ಬೀದಿಗೆ ಬಂದಿದ್ದಾರೆ. ವಿಶೇಷ ವಿಮಾನದಲ್ಲಿ ಕರೆದೊಯ್ದಿರಿ, ವಾಪಸ್ ಬರುವಾಗ ಸ್ಪೆಷಲ್ ಫ್ಲೈಟ್ ಎಲ್ಲಿ ಎಂದು ಯಡಿಯೂರಪ್ಪ ಆವರಿಗೆ ಟಾಂಗ್ ನೀಡಿದರು.
ಅತೃಪ್ತರ ಕೈ ಬಿಡಬೇಡಿ: ಡಿ.ಕೆ.ಶಿವಕುಮಾರ್ ಮಾತನಾಡಿ, ನಿಮ್ಮನ್ನು ನಂಬಿರುವ ಅತೃಪ್ತರನ್ನು ಕೈ ಬಿಡಬೇಡಿ. ಅವರಿಗೆ ಏನೆಲ್ಲಾ ಭರವಸೆ ಕೊಟ್ಟಿದ್ದೀರೋ ಅವೆಲ್ಲವನ್ನು ಪೂರೈಸಿ. ನಿಮ್ಮ ಜತೆಯಲ್ಲೇ ಸಚಿವ ಸ್ಥಾನ ಕೊಡಿ. ವಿಪ್ಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಹೇಳಿದ್ದೀರಿ. ಈಗ ಏನಾಯ್ತು ನೋಡಿದಿರಲ್ಲಾ ಎಂದು ಹೇಳಿದರು.
ಮೀನುಗಾರರು ಹಾಗೂ ವಿಶೇಷವಾಗಿ ಮಹಿಳಾ ಮೀನುಗಾರರು, ಮೀನುಗಾರಿಕೆ ಚಟುವಟಿಕೆಗಳಾದ ಮೀನು ಮಾರಾಟ ಪರಿಕರಗಳ ಖರೀದಿ, ಮೀನಿನ ವ್ಯಾಪಾರಕ್ಕಾಗಿ ಬಂಡವಾಳ, ಮೀನಿನ ಸಂರಕ್ಷಣೆ ಹಾಗೂ ಮೀನಿನ ಸಾಗಾಣಿಕೆ ಇತರೆ ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ನೆರವು ನೀಡುವುದು. ಇದಕ್ಕಾಗಿ ಶೇ. 2ರಷ್ಟು ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಿಂದ ಸಾಲ ಪಡೆಯುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಸದ್ಯ ಅವರ ಸಾಲ ಮನ್ನಾ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಕೊಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್