ಮಂಡ್ಯ : ಕಟುಕರ ಕೈಯಿಂದ ರಕ್ಷಿಸಲ್ಪಟ್ಟ 11 ಒಂಟೆಗಳು ಮರಳಿ ರಾಜಸ್ಥಾನಕ್ಕೆ ವಾಪಾಸ್
ಬಕ್ರೀದ್ ಹಬ್ಬಕ್ಕಾಗಿ ತಂದಿದ್ದ ಒಂಟೆಗಳು
Team Udayavani, Jun 30, 2021, 8:26 PM IST
– ಚಿಂತಾಮಣಿ ಬಳಿ ರಕ್ಷಣೆ ಮಾಡಿದ್ದ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಕಾರ್ಯಕರ್ತರು
– ಪಾಂಡವಪುರ ಚೈತ್ರಾ ಗೋಶಾಲೆಯಲ್ಲಿ ಪಾಲನೆ
ಮಂಡ್ಯ: ರಾಜಸ್ಥಾನದಿಂದ ರಾಜ್ಯಕ್ಕೆ ಬಕ್ರೀದ್ ವೇಳೆ ಮಾಂಸಕ್ಕೆ ಬಳಸಲು ತರುತ್ತಿದ್ದ 11 ಒಂಟೆಗಳನ್ನು ರಕ್ಷಿಸಿ, ನ್ಯಾಯಾಲಯದ ಆದೇಶದಂತೆ ಮರಳಿ ರಾಜಸ್ತಾನಕ್ಕೆ ಕಳುಹಿಸಲು ಬುಧವಾರ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಚಾಲನೆ ನೀಡಿ ಬಿಗಿ ಭದ್ರತೆಯಲ್ಲಿ ಕಳುಹಿಸಲಾಯಿತು.
ಬಕ್ರೀದ್ ಸಂದರ್ಭದಲ್ಲಿ ರಾಜ್ಯಕ್ಕೆ ಮಾಂಸಕ್ಕೆ ಬಳಸಲು ಒಂಟೆಗಳನ್ನು ತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಬರುತ್ತಿದ್ದಾಗ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ದಯಾನಂದ ಸ್ವಾಮೀಜಿ ಹಾಗೂ ಬೆಂಬಲಿಗರು ಪ್ರಕರಣ ಪತ್ತೆ ಹಚ್ಚಿ ಚಿಂತಾಮಣಿ ಪೊಲೀಸರಿಗೆ ಒಪ್ಪಿಸಿ ನಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಳಿಕ ಒಂಟೆಗಳನ್ನು ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಬಳಿ ಇರುವ ಚೈತ್ರಾ ಗೋಶಾಲೆಯಲ್ಲಿ ಬಿಟ್ಟು ಪಾಲನೆ ಮಾಡಲಾಗುತ್ತಿತ್ತು. ನಂತರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಲಯದ ಆದೇಶದಂತೆ ಬುಧವಾರ ಪೊಲೀಸ್ ಭದ್ರತೆಯಲ್ಲಿ ಎರಡು ಲಾರಿಗಳಲ್ಲಿ ಮರಳಿ ರಾಜಸ್ತಾನಕ್ಕೆ ಕಳುಹಿಸಲಾಯಿತು.
ಇದನ್ನೂ ಓದಿ :2022 ರಲ್ಲಿ ಉ. ಪ್ರದೇಶದಲ್ಲಿ ಪ್ರಜಾಪ್ರಭುತ್ವದ ಕ್ರಾಂತಿ ಸೃಷ್ಟಿ : ಅಖಿಲೇಶ್ ಯಾದವ್
ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ದಯಾನಂದ ಸ್ವಾಮೀಜಿ ಮಾತನಾಡಿ, ಬಕ್ರೀದ್ ಹಬ್ಬದ ನೆಪದಲ್ಲಿ 11 ಒಂಟೆಗಳನ್ನು ಕೊಂದು ಮಾಂಸಕ್ಕೆ ಬಳಸಲು ರಾಜಸ್ಥಾನದಿಂದ ನಡೆಸಿಕೊಂಡು ಬರಲಾಗುತ್ತಿತ್ತು. ಇವು ಚಿಕ್ಕಬಳ್ಳಾಪುರದ ಚಿಂತಾಮಣಿ ಬರುತ್ತಿದ್ದಾಗ ನಮಗೆ ಮಾಹಿತಿ ಬಂದಿದ್ದರಿಂದ ಕೂಡಲೇ ನಾವು ತೆರಳಿ ಕಾರ್ಯಕರ್ತರ ನೆರವಿನಿಂದ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು. ಅವುಗಳ ರಕ್ಷಣೆಗಾಗಿ ಪಾಂಡವಪುರದ ಬ್ಯಾಡರಹಳ್ಳಿ ಚೈತ್ರಾ ಶಾಲೆಗೆ ಬಿಡಲಾಗಿತ್ತು ಎಂದರು.
ನಮ್ಮ ಮಂಡಳಿಯಿಂದ ಇದುವರೆಗೂ ಸಾವಿರಾರು ಗೋವುಗಳನ್ನು ರಕ್ಷಿಸಲಾಗಿದೆ. ಒಂಟೆಗಳ ಪ್ರಕರಣ ನ್ಯಾಯಾಲಯದ ಆದೇಶದಂತೆ ವಾಪಸ್ ಕಳುಹಿಸುವಂತೆ ಆದೇಶ ನೀಡಿದ್ದರಿಂದ ನಾವು ಮತ್ತೆ ವಾಪಸ್ ರಾಜಸ್ತಾನಕ್ಕೆ ಕಳುಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಎಲೆಕ್ಟೊ ಕಚೇರಿಯ ಜಾಗರೂಕಾ ಅಧಿಕಾರಿ ಲವೀಶ್ ಮೊರಡಿಯಾ, ಡಿವೈಎಸ್ಪಿ ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ