Jharkhand: ಜಾರ್ಖಂಡ್‌ ನ ಖನಿಜ ಸಂಪತ್ತಿನ ರಾಜಕೀಯ- 23 ವರ್ಷಗಳಲ್ಲಿ 12 ಮುಖ್ಯಮಂತ್ರಿಗಳು!

ಕೇವಲ ಒಬ್ಬರು ಮುಖ್ಯಮಂತ್ರಿ ಮಾತ್ರ ಐದು ವರ್ಷಗಳ ಕಾಲ ಆಡಳಿತ

ನಾಗೇಂದ್ರ ತ್ರಾಸಿ, Feb 1, 2024, 6:11 PM IST

Jharkhand: ಜಾರ್ಖಂಡ್‌ ನ ಖನಿಜ ಸಂಪತ್ತಿನ ರಾಜಕೀಯ- 23 ವರ್ಷಗಳಲ್ಲಿ 12 ಮುಖ್ಯಮಂತ್ರಿಗಳು!

ಜಾರ್ಖಂಡ್‌ ಅಪಾರ ಪ್ರಮಾಣದ ಖನಿಜ ಸಂಪತ್ತು ಹೊಂದಿರುವ ರಾಜ್ಯವಾಗಿದೆ. ಈ ಖನಿಜ ಸಂಪತ್ತೇ ರಾಜಕೀಯದ ಪ್ರಮುಖ ಬಂಡವಾಳವಾಗಿದೆ. ಖನಿಜ ಸಂಪತ್ತಿನಿಂದಾಗಿಯೇ ಜಾರ್ಖಂಡ್‌ ನಲ್ಲಿ ಕಳೆದ 23 ವರ್ಷಗಳಲ್ಲಿ 12 ಮುಖ್ಯಮಂತ್ರಿ ಗದ್ದುಗೆ ಏರಿ, ಇಳಿದಿದ್ದು, ಮೂರು ಬಾರಿ ರಾಷ್ಟ್ರಪತಿ ಆಡಳಿತಕ್ಕೆ ಒಳಪಟ್ಟಿರುವುದು ಇತಿಹಾಸವಾಗಿದೆ.

ಜಾರ್ಖಂಡ್‌ ನ 23 ವರ್ಷಗಳ ರಾಜಕೀಯ ಇತಿಹಾಸದಲ್ಲಿ 12 ಬಾರಿ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಅಂದರೆ ಜಾರ್ಖಂಡ್‌ ನ ಮುಖ್ಯಮಂತ್ರಿಯಾದವರು ಕೇವಲ ಒಂದೂವರೆ ವರ್ಷಗಳ ಕಾಲ ಆಡಳಿತ ನಡೆಸಿದ್ದರು!

ಜಾರ್ಖಂಡ್‌ ನ 10 ದಿನದ ಮುಖ್ಯಮಂತ್ರಿ:

ಬಿಹಾರಕ್ಕೆ ಸೇರಿದ್ದ ಜಾರ್ಖಂಡ್‌ ಅನ್ನು ಪ್ರತ್ಯೇಕ ರಾಜ್ಯವಾಗಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿ ಪರಿಗಣಿಸಬೇಕಾದ ನಾಯಕನೆಂದರೆ ಶಿಬು ಸೊರೇನ್. ನೂತನ ಜಾರ್ಖಂಡ್‌ ನ ಮೊದಲ ಮುಖ್ಯಮಂತ್ರಿಯಾಗಿದ್ದವರು ಶಿಬು ಸೊರೇನ್.‌ ಆದರೆ ಸೊರೇನ್‌ ಗದ್ದುಗೆಯಲ್ಲಿ ಇದ್ದದ್ದು ಕೇವಲ ಹತ್ತು ದಿನ ಮಾತ್ರ!

ಗುರೂಜೀ ಎಂದೇ ಕರೆಯಲ್ಪಡುತ್ತಿದ್ದ ಶಿಬು ಸೊರೇನ್‌ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವನ್ನು ಸ್ಥಾಪಿಸಿದ್ದರು. ಇವರು ಹೇಮಂತ್‌ ಸೊರೇನ್‌ ತಂದೆ. ಭೂಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೇಮಂತ್‌ ಸೊರೇನ್‌ ಅವರನ್ನು ಬಂಧಿಸಿದ್ದು, ಕೋರ್ಟ್‌ ಒಂದು ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ರಾಜಕೀಯ ಅಸ್ಥಿರತೆ ಮತ್ತು ಮುಖ್ಯಮಂತ್ರಿಗಳ ಬದಲಾವಣೆ ಕಾಣುತ್ತಿರುವ ಜಾರ್ಖಂಡ್‌ ಇದೀಗ 12ನೇ ಮುಖ್ಯಮಂತ್ರಿ ಗದ್ದುಗೆ ಏರಲು ಸಿದ್ಧರಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೇನ್‌ ಚಂಪೈ ಸೊರೇನ್‌ ಅವರ ಹೆಸರನ್ನು ಸೂಚಿಸಿದ್ದಾರೆ.

2000ನೇ ಇಸವಿ ನವೆಂಬರ್‌ 15ರಂದು ಜಾರ್ಖಂಡ್‌ ನೂತನ ರಾಜ್ಯವಾಗಿ ಗುರುತಿಸಲ್ಪಟ್ಟಿತ್ತು. ಅಂದಿನಿಂದ ಈವರೆಗೂ ಜಾರ್ಖಂಡ್‌ ನಲ್ಲಿ ರಾಜಕೀಯ ಅಸ್ಥಿರತೆಯೇ ಮುಂದುವರಿದಿದೆ. ತಂದೆ ಶಿಬು ಸೊರೇನ್‌ ಅವರಂತೆ ಹೇಮಂತ್‌ ಸೊರೇನ್‌ ಬಂಧನಕ್ಕೊಳಗಾದ ಜಾರ್ಖಂಡ್‌ ನ ಮೂರನೇ ಮುಖ್ಯಮಂತ್ರಿಯಾಗಿದ್ದಾರೆ. (ಸಿಎಂ ಮಧು ಕೋಡಾ ಕೂಡಾ ಬಂಧನಕ್ಕೊಳಗಾಗಿದ್ದರು). 23 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಕೇವಲ ಒಬ್ಬರು ಮುಖ್ಯಮಂತ್ರಿ ಮಾತ್ರ ಐದು ವರ್ಷಗಳ ಕಾಲ ಪೂರ್ಣಾವಧಿ ಆಡಳಿತ ನಡೆಸಿದ್ದಾರೆ.

ಚುನಾವಣೆ ಮತ್ತು ಮೈತ್ರಿ ಸರ್ಕಾರ:

2000ನೇ ಇಸವಿಯಿಂದ 2014ರ ನಡುವೆ ಜಾರ್ಖಂಡ್‌ ಒಂಬತ್ತು ಸರ್ಕಾರಗಳನ್ನು ಕಂಡಿದ್ದು, ಐವರು ಮುಖ್ಯಮಂತ್ರಿಗಳಾಗಿದ್ದರು. ಜತೆಗೆ ಮೂರು ಬಾರಿ ರಾಷ್ಟ್ರಪತಿ ಆಡಳಿತಕ್ಕೆ ಒಳಪಟ್ಟಿತ್ತು. ಭಾರತೀಯ ಜನತಾ ಪಕ್ಷದ ಬಾಬುಲಾಲ್‌ ಮರಾಂಡಿ ಎರಡು ವರ್ಷ ಮೂರು ತಿಂಗಳ ಕಾಲ ಆಡಳಿತ ನಡೆಸಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳಾಗಿದ್ದ ಬಾಬುಲಾಲ್‌ ಮರಾಂಡಿ, ಅರ್ಜುನ್‌ ಮುಂಡಾ, ಶಿಬು ಸೊರೇನ್‌, ಮಧು ಕೋಡಾ ಮತ್ತು ಹೇಮಂತ್‌ ಸೊರೇನ್‌ ಅಂದಾಜು ಆಡಳಿತಾವಧಿ (2004ರಿಂದ 2014) 15 ತಿಂಗಳ ಕಾಲ!

ಅರ್ಜುನ್‌ ಮುಂಡಾ ಅವರು 2014ರ ವಿಧಾನಸಭಾ ಚುನಾವಣೆಯಲ್ಲಿ ರಘುಬರ್‌ ದಾಸ್‌ ಸೋಲುವಂತೆ ಮಾಡಿದ್ದರು ಎಂದು ಹೆಸರು ಹೇಳಲು ಇಚ್ಚಿಸದ ಪತ್ರಕರ್ತರೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

14 ವರ್ಷಗಳ ಕಾಲಾವಧಿಯಲ್ಲಿ ಜೆಎಂಎಂನ ಶಿಬು ಸೊರೇನ್‌ ಮತ್ತು ಬಿಜೆಪಿಯ ಅರ್ಜುನ್‌ ಮುಂಡಾ ಮೂರು ಬಾರಿ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಹೇಮಂತ್‌ ಸೊರೇನ್‌, ಮಧು ಕೋಡಾ ಮತ್ತು ಬಾಬುಲಾಲ್‌ ಮರಾಂಡಿ ಒಂದು ಬಾರಿಗೆ ಸಿಎಂ ಆಗಿ ಆಯ್ಕೆಯಾಗಿದ್ದರು.

ಇದೀಗ ಹೇಮಂತ್‌ ಸೊರೈನ್‌ ಬಂಧನದ ಬಳಿಕ ಚಂಪೈ ಸೊರೇನ್‌ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸಿದ್ದಾರೆ.

ಬಿಜೆಪಿಯ ರಘುಬರ್‌ ದಾಸ್‌ ಮಾತ್ರ 5 ವರ್ಷ ಪೂರ್ಣಾಡಳಿತ:

2014ರ ನಂತರ ಜಾರ್ಖಂಡ್‌ ನಲ್ಲಿ ರಾಜಕೀಯ ಸ್ಥಿತಿ ಸ್ಥಿರತೆ ಕಂಡಿತ್ತು. ಭಾರತೀಯ ಜನತಾ ಪಕ್ಷದ ರಘುಬರ್‌ ದಾಸ್‌ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಿದ್ದರು. ಈ ನಿಟ್ಟಿನಲ್ಲಿ ಐದು ವರ್ಷ ಆಡಳಿತ ನಡೆಸಿದ ಜಾರ್ಖಂಡ್‌ ನ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ದಾಸ್‌ ಅವರದ್ದಾಗಿದೆ.

ಐದು ವರ್ಷಗಳ ಆಡಳಿತ ಪೂರ್ಣಗೊಳಿಸಿದ ನಂತರ 2019ರಲ್ಲಿ ನಡೆದ ಜಾರ್ಖಂಡ್‌ ವಿಧಾನಸಭಾ ಚುನಾವಣೆಯಲ್ಲಿ ರಘುಬರ್‌ ದಾಸ್‌ ಪರಾಜಯಗೊಂಡಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಬಿಜೆಪಿಯ ಅರ್ಜುನ್‌ ಮುಂಡಾ ಅವರನ್ನು ದೆಹಲಿಗೆ ಕರೆಯಿಸಿ ಕೇಂದ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು.

2019ರಲ್ಲಿ ಹೇಮಂತ್‌ ಸೊರೇನ್‌ ನೇತೃತ್ವದ ಜೆಎಂಎಂ ಮೈತ್ರಿಕೂಟ ಸರ್ಕಾರ ರಚಿಸಿತ್ತು. ಜಾರ್ಖಂಡ್‌ ಮುಕ್ತಿ ಮೋರ್ಚಾಕ್ಕೆ ಕಾಂಗ್ರೆಸ್‌ ಮತ್ತು ಇತರ ಮೂರು ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡಿದ್ದವು. ಜೆಎಂಎಂನ ಶಿಬು ಸೊರೇನ್‌, ಹೇಮಂತ್‌ ಸೊರೇನ್‌ ಅವರನ್ನು ಹೊರತುಪಡಿಸಿ ಜಾರ್ಖಂಡ್‌ ನ ಎಲ್ಲಾ ಮುಖ್ಯಮಂತ್ರಿಗಳು ರಾಷ್ಟ್ರೀಯ ಸ್ವಯಂ ಸೇವಕ (ಆರ್‌ ಎಸ್‌ ಎಸ್)‌ ಸಂಘದ ಜತೆ ಸಂಪರ್ಕ ಹೊಂದಿದ್ದರು.

ಜೆಎಂಎಂ 5 ವರ್ಷ ಆಡಳಿತ ಪೂರ್ಣಗೊಳಿಸುವ ಸಾಧ್ಯತೆ:

ಭಾರತೀಯ ಜನತಾ ಪಕ್ಷದೊಳಗಿನ ಆಂತರಿಕ ಕಚ್ಚಾಟದ ಲಾಭಗಳಿಸಲು ಮುಂದಾಗಿರುವ ಜೆಎಂಎಂ ಮತ್ತೆ ಅಧಿಕಾರದ ಗದ್ದುಗೆ ಏರಲು ಕಸರತ್ತು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಜೆಎಂಎಂ ಮೈತ್ರಿ ಸರ್ಕಾರ ಐದು ವರ್ಷಗಳ ಆಡಳಿತ ಪೂರ್ಣಗೊಳಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.