ಉಚಿತ “ಕೈ” ಚೀಲ ನೀಡಲು ನಿರಾಕರಿಸಿದ್ದಕ್ಕೆ 15 ಸಾವಿರ ರೂಪಾಯಿ ದಂಡ!

ಬೆಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ಸಲ್ಲಿಸಿದ್ದರು.

Team Udayavani, Jun 8, 2022, 2:34 PM IST

ಉಚಿತ “ಕೈ” ಚೀಲ ನೀಡಲು ನಿರಾಕರಿಸಿದ್ದಕ್ಕೆ 15 ಸಾವಿರ ದಂಡ!

ಬೆಂಗಳೂರು: ರಾಜಧಾನಿಯ ವಾಣಿಜ್ಯ ಮಳಿಗೆಯೊಂದು ಗ್ರಾಹಕನಿಗೆ 16 ರೂ. ಬೆಲೆಯ ಕೈ ಚೀಲ ನೀಡಲು ನಿರಾಕರಿಸಲು ಹೋಗಿ ಬರೋಬ್ಬರಿ 15,000 ರೂ. ಪರಿಹಾರ ಪಾವತಿ ಮಾಡಿದ ಪ್ರಸಂಗ ನಡೆದಿದೆ.

ಗಾಂಧಿ ನಗರದ ವಾಣಿಜ್ಯ ಮಳಿಗೆಯೊಂದು ಉಚಿತವಾಗಿ ನೀಡಬೇಕಿದ್ದ ಕೈ ಚೀಲಕ್ಕೆ 16 ರೂ. ಶುಲ್ಕ ವಿಧಿಸಿರುವುದಕ್ಕೆ ಅಸಮಧಾನಗೊಂಡ ಗ್ರಾಹಕರೊಬ್ಬರು ವಾಣಿಜ್ಯ ಮಳಿಗೆಯಲ್ಲಿ ಗ್ರಾಹಕ ಸೇವೆಯಲ್ಲಿ ಕೊರತೆಯಾಗಿದೆ ಎಂದು ಬೆಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ಸಲ್ಲಿಸಿದ್ದರು.

ದೂರುದಾರರ ಹಾಗೂ ಮಳಿಗೆದಾರರ ಪರವಾಗಿ ವಕೀಲರ ವಾದ ಪರಿಶೀಲನೆ ನಡೆಸಿದ ವ್ಯಾಜ್ಯಗಳ ಪರಿಹಾರ ಆಯೋಗವು ಯು/ಎಸ್‌.12 ಗ್ರಾಹಕರ ಕಾಯ್ದೆ ಅಡಿಯಲ್ಲಿ ಮಳಿಗೆಯು ದೂರುದಾರ ಕಾಂತರಾಜ್‌ ಅವರಿಗೆ ಕೈ ಚೀಲ ನೀಡಲು ವಿಧಿಸಿದ 16 ರೂ. ಶುಲ್ಕದ ಜತೆಗೆ ಪರಿಹಾರ ರೂಪದಲ್ಲಿ 5,000 ರೂ., ಗ್ರಾಹಕ ಸೇವೆಯಲ್ಲಿ ಕೊರತೆಗೆ ಸಂಬಂಧಿಸಿದಂತೆ 3,000 ರೂ., ದೂರುದಾರರಿಗೆ ನೋವು ಮತ್ತು ದಾವೆ ವೆಚ್ಚ 2,000 ರೂ., ಜತೆಗೆ ಗ್ರಾಹಕ ಕಾನೂನು ನೆರವಿಗೆ 5000 ರೂ. ಸೇರಿದಂತೆ ಒಟ್ಟು 15,016 ರೂ. ಮೊತ್ತವನ್ನು ಪಾವತಿಸುವಂತೆ ಆದೇಶಿಸಿದೆ.

ತೀರ್ಪು ನೀಡಿದ 45 ದಿನಗಳೊಳಗೆ ಪರಿಹಾರ ಮೊತ್ತ ಪಾವತಿಯಾಗದಿದ್ದಲ್ಲಿ ಮಳಿಗೆ ಅವರು ದೂರು ದಾಖಲಾದ ದಿನದಿಂದ ಪ್ರಾರಂಭಿಸಿ ಪರಿಹಾರ ವಿತರಿಸುವ ದಿನಕ್ಕೆ ಸರಿಯಾಗಿ ಒಟ್ಟು ಮೊತ್ತಕ್ಕೆ ಶೇ.6ರಷ್ಟು ಬಡ್ಡಿ ನೀಡಬೇಕಾಗುತ್ತದೆ ಎಂದು ತೀರ್ಪು ನೀಡಿದೆ. ದೂರುದಾರರ ಪರವಾಗಿ ವಕೀಲರಾದ ವಿ.ಶಿವಕುಮಾರ್‌ ವಾದ ಮಂಡಿಸಿದ್ದಾರೆ.

ಬೆಂಗಳೂರು ಗಾಂಧಿನಗರದ ನಿವಾಸಿ ಕಾಂತರಾಜ್‌ ವಿ. ಅವರು 2019ರ ಡಿಸೆಂಬರ್‌ 17ರಂದು ಗಾಂಧಿನಗರದ ವಾಣಿಜ್ಯ ಮಳಿಗೆಯೊಂದರಲ್ಲಿ ತನ್ನ ಕ್ರೆಡಿಟ್‌ ಕಾರ್ಡ್‌ ಬಳಸಿಕೊಂಡು 775 ರೂ. ಮೊತ್ತದ ದೀಪಂ ಎಣ್ಣೆ, ಪ್ಯಾರಗನ್‌ ಸ್ಯಾಂಡಲ್‌, ಇತರೆ ಸ್ಟೇಷನರಿ ವಸ್ತುಗಳನ್ನು ಖರೀದಿಸಿದ್ದರು. ಈ ವೇಳೆ ಕಾಂತರಾಜ್‌ ಉಚಿತವಾಗಿ ಕೈ ಚೀಲವನ್ನು ನೀಡುವಂತೆ ಮನವಿ ಮಾಡಿದ್ದರು. ಮಳಿಗೆಯವರು ಅದಕ್ಕೆ ನಿರಾಕರಿಸಿ, ಚೀಲಕ್ಕೆ 16 ರೂ. ಶುಲ್ಕ ವಿಧಿಸಿದ್ದಾರೆ. ಈ ಬಗ್ಗೆ 4ನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಾಣಿಜ್ಯ ಮಳಿಗೆ ವಿರುದ್ಧ ಗ್ರಾಹಕ ಸೇವೆಯಲ್ಲಿ ವ್ಯತ್ಯಯ ದೂರು ದಾಖಲಿಸಲಾಗಿತ್ತು.

●ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.