ತುರ್ತು ಅಗತ್ಯಕ್ಕೆ 15,000 ಆಮ್ಲಜನಕ ಸಾಂದ್ರಕಗಳ ಖರೀದಿ: ಡಿಸಿಎಂ


Team Udayavani, May 9, 2021, 8:14 PM IST

ತುರ್ತು ಅಗತ್ಯಕ್ಕೆ 15,000 ಆಮ್ಲಜನಕ ಸಾಂದ್ರಕಗಳ ಖರೀದಿ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಒದಗಿಸಲು ಕೂಡಲೇ 15,000 ಆಮ್ಲಜನಕ ಸಾಂದ್ರಕಗಳನ್ನು (oxygen concentrator) ಖರೀದಿ ಮಾಡಲಾಗುತ್ತಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಆಮ್ಲಜನಕ ಕೊರತೆ ಎದುರಿಸುತ್ತಿರುವ “ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ”ಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ಯದುಗಿರಿ ಯತಿರಾಜ ಮಠದ ಶ್ರೀ ನಾರಾಯಣ ರಾಮಾನುಜ ಜಿಯರ್ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಚಾಲನೆ ನೀಡಿದ ನಂತರ ಅವರು ಈ ವಿಷಯ ತಿಳಿಸಿದರು.

ತತ್‌ಕ್ಷಣವೇ ಯಾರ ಬಳಿ ಸ್ಟಾಕ್ ಇದ್ದರೆ ಅವರಿಂದ 5,000 ಸಾಂದ್ರಕಗಳನ್ನು ಖರೀದಿಸುತ್ತೇವೆ.  ಉಳಿದ 10,000 ಸಾಂದ್ರಕಗಳ ಖರೀದಿಗೆ ತಕ್ಷಣವೇ ಟೆಂಡರ್‌ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮಲ್ಲೇಶ್ವರಕ್ಕೆ 70, ಕೋಲಾರಕ್ಕೆ 20:

ಮಲ್ಲೇಶ್ವರದಲ್ಲಿ ಭಾನುವಾರ ಸಂಜೆ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ರಾಮಾನುಜ ಜಿಯರ್ ಸ್ವಾಮೀಜಿ ಅವರು 70 ಆಮ್ಲಜನಕ ಸಾಂದ್ರಕಗಳನ್ನು ಕ್ಷೇತ್ರದ ಜನರ ಸೇವೆಗೆ ಮುಕ್ತಗೊಳಿಸಿದರು. ನಂತರ ಡಿಸಿಎಂ ಅವರು ಕೋಲಾರ ಸಂಸದ ಮುನಿಸ್ವಾಮಿ ಅವರಿಗೆ 20 ಸಾಂದ್ರಕಗಳನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿ ಅವರು; “ಕೋವಿಡ್‌ ಕಾರ್ಮೋಡ ಕವಿದ ಈ ಹೊತ್ತಿಗೆ ಆಮ್ಲಜನಕ ಸಾಂದ್ರಕಗಳನ್ನು ಕೊಡುತ್ತಿರುವುದು ಬೆಳ್ಳಿಗೆರೆ ಮೂಡಿದಂತೆ ಆಗಿದೆ. ಎಲ್ಲರೂ ಧೈರ್ಯವಾಗಿ ಸೋಂಕಿನ ವಿರುದ್ಧ ಹೋರಾಟ ನಡೆಸಬೇಕೆ ವಿನಾ ಎದೆಗುಂದಬಾರದು” ಎಂದರು.

ಇದನ್ನೂ ಓದಿ: ಮನುಷ್ಯರ ನಡುವೆ 6 ಅಡಿ ಅಂತರವಿದ್ದರೂ ಸೋಂಕು ಹರಡಬಲ್ಲದು : ಅಮೆರಿಕ ತಜ್ಞರ ಎಚ್ಚರಿಕೆ

ದಾನಿಗಳ ನೆರವು:

ಆಕ್ಷನ್‌ ಕೋವಿಡ್‌ ಟೀಂ ಹಾಗೂ ಝಿರೋದ ಸಂಸ್ಥೆಗಳು 70 ಆಮ್ಲಜನಕ ಸಾಂದ್ರಕಗಳನ್ನು ದಾನ ಕೊಟ್ಟಿವೆ. ʼಸೇವಾ ಹಿʼ‌ ಸಂಘಟನೆ ಮೂಲಕ ಜನರ ಸೇವೆಗೆ ನೀಡಲಾಗುವುದು. ಆಮ್ಲಜನಕ ಕೊರತೆ, ಅದರಲ್ಲೂ 85% ಆಕ್ಸಿಜನ್‌ ಸ್ಯಾಚುರೇಷನ್ ಕಡಿಮೆ ಇರುವವರಿಗೆ ಇವುಗಳನ್ನು ಕೊಡುತ್ತೇವೆ ಎಂದು ಡಿಸಿಎಂ ಹೇಳಿದರು.

ಏನಿದು ಆಮ್ಲಜನಕ ಸಾಂದ್ರಕ? ಹಂಚಿಕೆ ಹೇಗೆ?:

ಇದು ರೆಡಿಮೇಡ್‌ ಆಮ್ಲಜನಕ ಘಟಕದ ರೀತಿ ಕೆಲಸ ಮಾಡುತ್ತದೆ. ಸಾಗಾಣಿಕೆ ಸುಲಭ. ಮನೆಯಲ್ಲೇ ಸರಳವಾಗಿ ಬಳಸಬಹುದು. ಹೋಮ್‌ ಐಸೋಲೇಷನ್‌ ಆಗಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಪದ್ಭಾಂದವನಂತೆ ಕೆಲಸ ಮಾಡುತ್ತದೆ.

ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾರಿಗಾದರೂ ಆಮ್ಲಜನಕದ ಕೊರತೆ ಉಂಟಾದ ತಕ್ಷಣ ಹೆಲ್ಪ್‌ಲೈನ್‌ ಸಂಖ್ಯೆಗೆ ಕರೆ ಮಾಡಿದರೆ ಸಾಕು. ತತ್‌ಕ್ಷಣವೇ ಅವರ ಮನೆ ಬಾಗಿಲಿಗೇ ಆಮ್ಲಜನಕ ಸಾಂದ್ರಕವನ್ನು ಸ್ವಯಂ ಸೇವಕರು ತಲುಪಿಸುತ್ತಾರೆ.

ಜತೆಗೆ, ಅದನ್ನು ಬಳಸುವ ಬಗ್ಗೆ ಮಾಹಿತಿಯನ್ನೂ ನೀಡತ್ತಾರೆ. ಆ ಸೋಂಕಿತರು ಸಾಂದ್ರಕದ ಉಪಯೋಗ ಪಡೆದು  ಅಪಾಯದಿಂದ ಪಾರಾದ ಮೇಲೆ ಅಥವಾ ಅವರಲ್ಲಿ ಆಮ್ಲಜನಕದ ಸಮಸ್ಯೆ ನೀಗಿದ ನಂತರ ಅದನ್ನು ವಾಪಸ್‌ ಪಡೆದು,

ಸ್ಯಾನಿಟೈಸ್‌ ಮಾಡಿ ಮತ್ತೊಮ್ಮೆ ಅಗತ್ಯ ಇರುವ ಮತ್ತೊಬ್ಬ ಸೋಂಕಿತರಿಗೆ ನೀಡಲಾಗುವುದು. ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಆದ್ಯತೆಯ ಮೇಲೆ ಇವುಗಳನ್ನು ನೀಡಲಾಗುವುದು.

ಅತ್ಯಾಧುನಿಕವಾದ ಆಮ್ಲಜನಕ ಸಾಂದ್ರಕಗಳನ್ನು ಆಮದು ಮಾಡಿಕೊಂಡಿದ್ದು, ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.