ಸಚಿವರ ಸ್ಪಂದನೆ : ತೂಫಾನಿಗೆ ಸಿಲುಕಿದ ಕರಾವಳಿಯ 18 ಮೀನುಗಾರ ರಕ್ಷಣೆ
Team Udayavani, Oct 26, 2019, 8:34 PM IST
ಕಾರವಾರ : ಕರ್ನಾಟಕದ ಕಾರವಾರ ಮತ್ತು ಗೋವಾದ ಗಡಿಯಲ್ಲಿ ತುಫಾನಿಗೆ ಸಿಲುಕಿ ಹೊರಬರಲು ಶ್ರಮಿಸುತ್ತಿದ್ದ ಮಲ್ಪೆಯ ರಾಜ್ ಕಿರಣ್ ಮತ್ತು ಮಂಗಳೂರಿನ ಮಹೇಲಿ ಬೋಟ್ ನಲ್ಲಿ ಇದ್ದ 18 ಮೀನುಗಾರರ ರಕ್ಷಣೆ.
ರಾಜ್ಯ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕಾರವಾರ ಜಿಲ್ಲಾಧಿಕಾರಿಯವರಿಗೆ ತುರ್ತು ಸೂಚನೆ ನೀಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀ ವಿಜಯ ಭಾಸ್ಕರ್ ಅವರ ಮೂಲಕ ಗೋವಾ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಿ, ಕರ್ನಾಟಕದ ಮೀನುಗಾರರಿಗೆ ನಿಯಮದ ಹೆಸರಿನಲ್ಲಿ ಕಿರುಕುಳವಾಗದಂತೆ ಮತ್ತು ಸಂಕಷ್ಟದಲ್ಲಿರುವ ಮೀನುಗಾರರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ, ಅಗತ್ಯ ವಿದ್ದರೆ ಹೆಲಿಕಾಪ್ಟರ್ ಸೇವೆ ಬಳಸಿಕೋಳ್ಳಲು ಸಚಿವರು ಸೂಚಿಸಿದ್ದರು.
ಇದೀಗ ಎರಡು ಬೋಟ್ ನಲ್ಲಿ ಇದ್ದ ಎಲ್ಲಾ 18 ಮೀನುಗಾರರನ್ನು ರಕ್ಷಿಸಿ ಮಂಗಳೂರು ಮತ್ತು ಮಲ್ಪೆಗೆ ಕರೆತರಲಾಗುತ್ತಿದೆ.
ನಿನ್ನೆಯಿಂದ ನಿರಂತರವಾಗಿ ಕಾರವಾರ ಜಿಲ್ಲಾಧಿಕಾರಿ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಸಂಪರ್ಕದಲ್ಲಿದ್ದು, ಮೀನುಗಾರರ ರಕ್ಷಣೆಗೆ ತಕ್ಷಣ ಸ್ಪಂದಿಸಿದ ರಾಜ್ಯ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ