2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ


Team Udayavani, Sep 18, 2021, 7:40 AM IST

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

ಹೊಸದಿಲ್ಲಿ/ ಬೆಂಗಳೂರು : ಪ್ರಧಾನಿ ಮೋದಿ ಅವರ ಜನ್ಮದಿನ, ಶುಕ್ರವಾರ ಲಸಿಕೆ ವಿತರಣೆಯಲ್ಲಿ ಭಾರತವು ವಿಶ್ವದಾಖಲೆ  ನಿರ್ಮಾಣ ಮಾಡಿದೆ. ಒಂದೇ ದಿನ 2.50 ಕೋಟಿ ಡೋಸ್‌ ಲಸಿಕೆ ನೀಡುವ ಮೂಲಕ ಈ ದಾಖಲೆ ಮಾಡಿದ ಜಗತ್ತಿನ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಶುಕ್ರವಾರ ಬೆಳಗ್ಗೆ ಆರಂಭವಾದ ಲಸಿಕೆ ವಿತರಣೆ ಪ್ರಕ್ರಿಯೆ ರಾತ್ರಿ 12ರ ವೇಳೆಗೆ ಅಂತ್ಯವಾಯಿತು. ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ರಾಜ್ಯಗಳು ಲಸಿಕೆ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದವು. ಕರ್ನಾಟಕ 29 ಲಕ್ಷ ಡೋಸ್‌ ಲಸಿಕೆ ನೀಡಿ ದೇಶದಲ್ಲಿ ಮೊದಲ ಸ್ಥಾನ ಗಳಿಸಿತು.

ಗುರಿ ಸಾಧಿಸಿ ದಾಖಲೆ
ಮೋದಿ ಜನ್ಮದಿನವಾದ ಶುಕ್ರವಾರ 2.5 ಕೋಟಿ ಡೋಸ್‌ ಲಸಿಕೆ ನೀಡಲು ಕೇಂದ್ರ ಸರಕಾರ ಗುರಿ ಹಾಕಿಕೊಂಡಿತ್ತು. ಇದಕ್ಕೆ ಪೂರಕವಾಗಿ ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯ ಪ್ರದೇಶ ರಾಜ್ಯಗಳು ವಿಶೇಷ ವ್ಯವಸ್ಥೆ ಮಾಡಿಕೊಂಡಿದ್ದವು. ಹೆಚ್ಚು ಲಸಿಕೆ ಕೇಂದ್ರಗಳನ್ನು ತೆರೆದಿದ್ದವು. ಇದೇ ಮೊದಲ ಬಾರಿಗೆ ದೇಶದಲ್ಲಿ ದಾಖಲೆಯ 1.10 ಲಕ್ಷ ಲಸಿಕೆ ವಿತರಣೆ ಕೇಂದ್ರಗಳನ್ನು ತೆರೆಯಲಾಗಿತ್ತು. ಜೂನ್‌ ನಲ್ಲಿ ಚೀನ ದಿನವೊಂದರಲ್ಲಿ 2.47 ಕೋಟಿ ಡೋಸ್‌ ಲಸಿಕೆ ನೀಡಿತ್ತು.
ಶುಕ್ರವಾರ ರಾತ್ರಿ ವೇಳೆಗೆ ದೇಶದಲ್ಲಿ 2.50 ಕೋಟಿ ಡೋಸ್‌ ಲಸಿಕೆ ಹಾಕಲಾಗಿದೆ. ಈ ಮೂಲಕ ನಿಗದಿಮಾಡಿಕೊಂಡಿದ್ದ ಗುರಿ ಮುಟ್ಟಲಾಗಿದೆ.

ಕರ್ನಾಟಕದಲ್ಲಿ ದಾಖಲೆ
ಮೇಳದಲ್ಲಿ ದೇಶದಲ್ಲಿಯೇ ಅತೀ ಹೆಚ್ಚು, 29 ಲಕ್ಷ ಮಂದಿಗೆ ಲಸಿಕೆ ನೀಡಿದ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ಮೂಲಕ ಲಸಿಕೆ ಡೋಸ್‌ ಪಡೆದವರ ಒಟ್ಟು ಸಂಖ್ಯೆ 5 ಕೋಟಿಗೆ ಏರಿದೆ. ರಾಜ್ಯದಲ್ಲಿ 30 ಲಕ್ಷ ಮಂದಿಗೆ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿತ್ತು. ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಲಸಿಕೆ ಮೇಳದಲ್ಲಿ ಹತ್ತು ಪಟ್ಟು ಅಧಿಕ ಮಂದಿಗೆ, ಹಿಂದಿನ ಮೇಳಗಳಿಗೆ ಹೋಲಿಸಿದರೆ ಎರಡೂವರೆ ಪಟ್ಟು ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. 13 ಲಕ್ಷ ಮಂದಿ ಮೊದಲ ಡೋಸ್‌ ಮತ್ತು 16 ಲಕ್ಷ ಮಂದಿ ಎರಡನೇ ಡೋಸ್‌ ಸೇರಿ ಒಟ್ಟು 29 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ 4.8 ಲಕ್ಷ ಮಂದಿಗೆ ಲಸಿಕೆ ನೀಡಿದ್ದು, ದೇಶದಲ್ಲಿಯೇ ಅತೀ ಹೆಚ್ಚು ಮಂದಿಗೆ ಲಸಿಕೆ ನೀಡಿದ ನಗರ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಅಕ್ಟೋಬರ್‌ನಲ್ಲಿ ಝೈಡಸ್‌ ಲಸಿಕೆ ಲಭ್ಯ?
ಬಹುನಿರೀಕ್ಷಿತ ಝೈಡಸ್‌ ಕ್ಯಾಡಿಲಾ ಕೊರೊನಾ ಲಸಿಕೆ ಝೆಡ್‌ವೈಸಿಒ ವಿಡಿ ಇದೇ ಅಕ್ಟೋಬರ್‌ನಲ್ಲಿ ದೇಶದಲ್ಲಿ ಬಳಕೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್‌ನಲ್ಲಿ ಸುಮಾರು 1 ಕೋಟಿ ಲಸಿಕೆಗಳನ್ನು ಬಳಕೆಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದ್ದು, 12ರಿಂದ 17 ವರ್ಷ ವಯಸ್ಸಿನ, ಅನಾರೋಗ್ಯ ಹೊಂದಿರುವ ಎಳೆಯರಿಗೂ ಈ ಲಸಿಕೆ ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ.

ಸದ್ಯ ವಯಸ್ಕರಿಗೆ ಮತ್ತು ಹಿರಿಯ ನಾಗರಿಕರಿಗೆ ಲಸಿಕೆ ನೀಡಲಾಗುತ್ತಿದೆ. ಮಕ್ಕಳಿಗೆ ಅಥವಾ ಹದಿಹರೆಯದ ವರಿಗೆ ಲಸಿಕೆ ನೀಡಬೇಕೇ ಬೇಡವೇ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಪ್ರಸ್ತಾವನೆಯನ್ನು ತಜ್ಞರ ಸಮಿತಿಯೊಂದು ಪರಿಶೀಲಿಸುತ್ತಿದೆ. ತಜ್ಞರ ಒಪ್ಪಿಗೆ ಲಭಿಸಿದರೆ ಮಕ್ಕಳು ಅಥವಾ ಹದಿಹರೆಯದ ವರಿಗೂ ಈ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ದೇಶದಲ್ಲಿಯೇ ಅತೀ ಹೆಚ್ಚು ಮಂದಿಗೆ ಕೊರೊನಾ ಲಸಿಕೆ ನೀಡುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದೇವೆ. ಒಟ್ಟು ಐದು ಕೋಟಿ ಡೋಸ್‌ ಮೈಲುಗಲ್ಲು ಸಾಧನೆಯಾಗಿದೆ. ಶ್ರಮಿಸಿದ ಆರೋಗ್ಯ ಸಿಬಂದಿಗಳಿಗೆಲ್ಲ ಧನ್ಯವಾದಗಳು.

– ಡಾ| ಸುಧಾಕರ್‌, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.