ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jan 21, 2021, 5:37 PM IST
ಬೆಂಗಳೂರು: ಹಣ ಡಬಲ್ ಮಾಡಿಕೊಡುವುದಾಗಿ ನೂರಾರು ಜನರಿಗೆ ನಂಬಿಸಿ ಸುಮಾರು 20 ಕೋಟಿ ರೂ. ವಂಚನೆ ನಡೆಸಿರುವ ಪ್ರಕರಣ ನಗರದ ಗಿರಿನಗರ ಪೊಲೀಸ್ ಠಾಣೆ, ಹೊಸಕೆರೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಪ್ಪಿತಸ್ಥರ ವಿರುದ್ಧ ಸಿಐಡಿ ತನಿಖೆಗೆ ನಡೆಸುವಂತೆ ವಂಚನೆಗೆ ಒಳಗಾದವರು ಇಂದು ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಗಿರಿನಗರದ ವಂಚಕ ದಂಪತಿ ಜ್ಞಾನೇಶ್-ಲೀಲಾವತಿ ಹಾಗೂ ಅವರ ಮಗ ಮನೋಜ್ ಚೀಟಿ, ಷೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿ ಹಣ ಡಬ್ಬಲ್ ಮಾಡಿಕೊಡುವುದಾಗಿ ನಂಬಿಸಿ ಬರೋಬ್ಬರಿ 900 ಜನರಿಂದ ಸುಮಾರು 20 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ.
ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಜ್ಞಾನೇಶ್-ಲೀಲಾವತಿ ಹಾಗೂ ಅವರ ಮಗ ಮನೋಜ್ನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಜತೆಗೆ ಜ್ಞಾನೇಶ್-ಲೀಲಾವತಿ ಪುತ್ರ ಮೇಘನಾ ಹಾಗೂ ಅಳಿಯ ರವಿಕುಮಾರ್ ಕೂಡ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಅಳಿಯ ರವಿಕುಮಾರ್ ಹನುಮಂತ ನಗರ ಠಾಣೆಯಲ್ಲಿ ರೈಟರ್. ಹೀಗಾಗಿ ಆತ ತನಿಖೆ ಮೇಲೆ ಪ್ರಭಾವ ಬೀರುತ್ತಿದ್ದಾನೆ. ಮಗಳು ಮೇಘನಾ, ಅಳಿಯ ರವಿಕುಮಾರ್ನನ್ನು ಬಂಧಿಸಿ, ಪ್ರಕರಣ ತನಿಖೆಯನ್ನು ಸಿಐಡಿ ಒಪ್ಪಿಸುವಂತೆ ಹಣ ಕಳೆದುಕೊಂಡವರು ಕಣ್ಣೀರಿಡುತ್ತಿದ್ದಾರೆ.
ಇದನ್ನೂ ಓದಿ:ಫ್ಯಾಂಟಮ್ ಈಗ “ವಿಕ್ರಾಂತ್ ರೋಣ”: ಬುರ್ಜ್ ಖಲೀಫಾದಲ್ಲಿ ರಾರಾಜಿಸಲಿದೆ ಕಿಚ್ಚನ ಕಟೌಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್