ಕೇರಳ: 20 ಸಾವಿರ ಕೋಟಿ ಕೋವಿಡ್ ಬಜೆಟ್ : ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ಹೇಳಿಕೆ
Team Udayavani, Jun 4, 2021, 8:54 PM IST
ತಿರುವನಂತಪುರ: ಕೇರಳ ಸರ್ಕಾರ 20 ಸಾವಿರ ಕೋಟಿ ರೂ. ಮೌಲ್ಯದ ಕೊರೊನಾ ಪ್ಯಾಕೆಜ್ ಘೋಷಣೆ ಮಾಡಿದೆ. ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿಕೆ, ಆಹಾರ, ಜೀವನಮಟ್ಟ ಸುಧಾರಣೆಗೆ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ.
ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ತಮ್ಮ ಬಜೆಟ್ ಭಾಷಣದಲ್ಲಿ 1,500 ಕೋಟಿ ರೂ.ಗಳನ್ನು 18 ವರ್ಷ ಮೇಲ್ಪಟ್ಟವರಿಗೆ ಉಸಿತ ಲಸಿಕೆ ನೀಡಲು ಮತ್ತು ಇತರ ವ್ಯವಸ್ಥೆ ಪೂರೈಕೆಗಾಗಿ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ.
2,800 ಕೋಟಿ ರೂ.ಗಳನ್ನು ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಲು, 8,890 ಕೋಟಿ ರೂ.ಗಳನ್ನು ಜೀವನಾಧಾರ ಕಳೆದುಕೊಂಡವರಿಗೆ ನೇರ ನಗದು ವರ್ಗಾವಣೆ ಮಾಡಲು ಮೀಸಲಿಡಲಾಗಿದೆ. ಸೋಂಕಿನ 3ನೇ ಅಲೆ ಎದುರಿಸಲು ಆರು ಅಂಶಗಳ ಸೂತ್ರವನ್ನೂ ಪ್ರಕಟಿಸಲಾಗಿದೆ. ಮೊದಲ ಬಾರಿಗೆ ಶಾಸಕರಾಗಿ, ಸಚಿವರಾಗಿರುವ ಬಾಲಗೋಪಾಲ್ ಯಾವುದೇ ಹೊಸ ತೆರಿಗೆಯನ್ನು ಪ್ರಸ್ತಾಪಿಸಿಲ್ಲ.
ಇದನ್ನೂ ಓದಿ :ರಾಜ್ಯಕ್ಕೆ 9750 ವಯಲ್ಸ್ ಕಪ್ಪು ಶಿಲೀಂಧ್ರ ಔಷಧ ಹಂಚಿಕೆ : ಕೇಂದ್ರ ಸಚಿವ ಸದಾನಂದ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ
Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ