24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಇಂತಹ ಕ್ಯಾಂಟೀನ್‌ ಆರಂಭಿಸಲಾಗಿದೆ

Team Udayavani, Mar 31, 2023, 5:59 PM IST

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

ಹುಬ್ಬಳ್ಳಿ: ನೀವು ರುಚಿ ರುಚಿಯಾದ ಸ್ವಾದಿಷ್ಟ ತಿಂಡಿ-ತಿನಿಸು, ಚಾಟ್‌ ಐಟೆಮ್ಸ್‌, ಐಸ್‌ ಕ್ರೀಮ್ಸ್‌, ಜ್ಯೂಸ್‌, ಮಿಲ್ಕ್ ಶೇಕ್‌ ಹಾಗೂ ಉತ್ತರ-ದಕ್ಷಿಣ ಭಾರತದ ಸ್ವಾದಭರಿತ ಶುದ್ಧ ಸಸ್ಯಾಹಾರ-ಮಾಂಸಾಹಾರ ಆಹಾರ ಸವಿಯಲು ಇಷ್ಟಪಡುತ್ತಿದ್ದರೆ ರೈಲಿನ ಐಷಾರಾಮಿ ಬೋಗಿಯಲ್ಲೇ ಪಡೆಯಬಹುದು. ಅದುವೇ “ಬೋಗಿ ಬೋಗಿ ಕ್ಯಾಂಟೀನ್‌’ದಲ್ಲಿ.

ವಿಶ್ವದ ಅತಿ ಉದ್ದನೆಯ ಪ್ಲಾಟ್‌ಫಾರ್ಮ್ ಹೊಂದಿರುವ ಹಾಗೂ ನೈಋತ್ಯ ರೈಲ್ವೆ ವಲಯದ ಕೇಂದ್ರ ಕಚೇರಿಯ ಪ್ರಮುಖ ನಿಲ್ದಾಣ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಮುಖ್ಯ ಪ್ರವೇಶ ದ್ವಾರ ಎದುರಿನ ಬಿಆರ್‌ ಟಿಎಸ್‌ ರೈಲ್ವೆ ನಿಲ್ದಾಣ ಹತ್ತಿರ ಈ “ಬೋಗಿ ಬೋಗಿ ಕ್ಯಾಂಟೀನ್‌’ ತಲೆ ಎತ್ತಿದ್ದು, ಜನರನ್ನು ಆಕರ್ಷಿಸುತ್ತಿದೆ.

ಈ ರೀತಿ ಖಾಸಗಿ ಕಂಪನಿಯವರು ಸಾರ್ವಜನಿಕವಾಗಿ ರೈಲು ಬೋಗಿ ಬಳಸಿಕೊಂಡು “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’ ಆರಂಭಿಸಿರುವುದು ಕರ್ನಾಟಕದಲ್ಲೇ ಮೊಟ್ಟ ಮೊದಲನೇಯದ್ದಾಗಿದೆ. ರೈಲಿನ ಹಾಳಾದ(ಸ್ಕ್ರ್ಯಾಪ್) ಬೋಗಿಯನ್ನೇ ಬಳಸಿಕೊಂಡು ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಯಡಿ ಆಧುನಿಕ ರೆಸ್ಟೋರೆಂಟ್‌ಗಳಂತೆ ಸುಖಾಸಿನ ಐಷಾರಾಮಿ ಸೀಟ್‌ಗಳನ್ನು ಅಳವಡಿಸಿ ಶೃಂಗಾರಗೊಳಿಸಲಾಗಿದೆ. ಇಲ್ಲಿ ರೆಸ್ಟೋರೆಂಟ್‌ಗಳಂತೆ ನಿಮಗೆ ಇಷ್ಟವಾದ ತಿಂಡಿ-ತಿನಿಸು, ಪಾನೀಯ ಹಾಗೂ ಸಸ್ಯಾಹಾರ-ಮಾಂಸಾಹಾರವನ್ನು ಮಾಣಿ(ಸರ್ವರ್‌)ಗೆ ಆರ್ಡರ್‌ ಮಾಡಬಹುದು.

ಅದನ್ನು ಬೋಗಿಯಲ್ಲಿ ಕುಳಿತು ಇಲ್ಲವೆ ಪಕ್ಕದಲ್ಲೇ ಇರುವ ಓಪನ್‌ ಗಾರ್ಡನ್‌ದಲ್ಲಾದರೂ ಸವಿಯಬಹುದು. ಅಥವಾ ಮನೆಗೆ ಪಾರ್ಸಲ್‌ ತೆಗೆದುಕೊಂಡು ಹೋಗಬಹುದು. ಈ ಐಷಾರಾಮಿ ಕ್ಯಾಂಟೀನ್‌ ಬೋಗಿಯಲ್ಲಿ ಪ್ರತ್ಯೇಕವಾಗಿ ಸಸ್ಯಾಹಾರ ಮತ್ತು ಮಾಂಸಾಹಾರ ಆಹಾರ ಸಿದ್ಧಪಡಿಸಲಾಗುತ್ತದೆ. ಅದಕ್ಕಾಗಿಯೇ ಪ್ರತ್ಯೇಕವಾದ ಬಾಣಸಿಗರಿದ್ದಾರೆ. ಬೋಗಿ ಸಂಪೂರ್ಣ ಹವಾನಿಯಂತ್ರಿತವಾಗಿದೆ. ಈ ಸೇವೆ ದಿನದ 24 ತಾಸು ಇರುತ್ತದೆ.

ಬುಕ್‌ ಮೈ ಬೋಗಿ ಸೌಲಭ್ಯ: ಬುಕ್‌ ಮೈ ಬೋಗಿ ಮೂಲಕ ಮುಂಗಡವಾಗಿ ಆಸನ ಕಾಯ್ದಿರಿಸಬಹುದು. ಐಆರ್‌ಟಿಸಿಯ ಇ-ಕ್ಯಾಟರಿಂಗ್‌ ಮುಖಾಂತರ ಪ್ರಯಾಣಿಕರು ತಮಗೆ ಬೇಕಾದ ಆಹಾರ, ತಿಂಡಿ- ತಿನಿಸು ಆರ್ಡರ್‌ ಮಾಡಬಹುದು. ಆಗ ವೆಂಡರ್‌ಗಳು ಪ್ರಯಾಣಿಕರು ಇರುವ ರೈಲಿನ ಬೋಗಿಗೆ ತೆರಳಿ ಸರಬರಾಜು ಮಾಡುತ್ತಾರೆ. ಬೋಗಿ ಬೋಗಿ ಕ್ಯಾಂಟೀನ್‌ದಲ್ಲಿ ಟೇಕ್‌ ಅವೇ ಕೌಂಟರ್‌ ಸಹ ಇದ್ದು ಇಲ್ಲಿಂದ ಯಾವುದೇ ಸಮಯದಲ್ಲೂ ಆಹಾರ ಪಿಕ್‌ಅಪ್‌
ಮಾಡಬಹುದು. ಇದಲ್ಲದೆ ಹುಬ್ಬಳ್ಳಿಯ ಯಾವುದೇ ಭಾಗದ ಜನರು ಆಹಾರ ಬುಕ್‌ ಮಾಡಿದರೆ ಅವರ ಮನೆಗೆ ಉಚಿತವಾಗಿ ಡೆಲಿವರಿ ಮಾಡಲಾಗುತ್ತದೆ. ಈ ಕ್ಯಾಂಟೀನ್‌ದಲ್ಲಿ ಅರೇಬಿಯನ್‌ ಜ್ಯೂಸ್‌ ಮತ್ತು ಕನ್ಸೆಂಟ್‌ ಫೂಡ್ಸ್‌ ವಿಶೇಷವಾಗಿದೆ. ಬೋಗಿ ಬೋಗಿ ಕ್ಯಾಂಟೀನ್‌ದಲ್ಲಿನ ದರಗಳು ಮಾರುಕಟ್ಟೆಗೆ ತಕ್ಕಂತೆ ಕೈಗೆಟುಕುವಂತಹದ್ದಾಗಿವೆ.

ಮುಂಬಯಿಯ ಸಿಎಸ್‌ಟಿಯಲ್ಲಿ ಮೊದಲ ಬಾರಿಗೆ ಇಂತಹ ಬೋಗಿ ಬೋಗಿ ಕ್ಯಾಂಟೀನ್‌ ಆರಂಭಿಸಲಾಗಿತ್ತು. ಅಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಇಂತಹ ಕ್ಯಾಂಟೀನ್‌ ಆರಂಭಿಸಲಾಗಿದೆ. ಬೋಗಿಯಲ್ಲಿ 50 ಜನ, ಗಾರ್ಡನ್‌ನಲ್ಲಿ 50 ಜನ ಕುಳಿತುಕೊಳ್ಳುವಷ್ಟು ಆಸನ ವ್ಯವಸ್ಥೆಯಿದೆ.

ಏಪ್ರಿಲ್‌ ಎರಡನೇ ವಾರದಲ್ಲಿ ಹೊಸಪೇಟೆಯಲ್ಲಿ ಹಾಗೂ ಮಿರಜ್‌ನಲ್ಲಿ, ಮೇ ಮೊದಲ ವಾರ ಪುಣೆಯಲ್ಲಿ ಇಂತಹ ಕ್ಯಾಂಟೀನ್‌ ತೆರೆಯಲಾಗುವುದು. ಅದಕ್ಕೆ ಅವಶ್ಯವಾದ ಎಲ್ಲ ಸೆಟ್‌ಅಪ್‌ ಮಾಡಿಕೊಳ್ಳಲಾಗಿದೆ. ದೆಹಲಿ ಮತ್ತು ದೇಶದ ಇನ್ನಿತರೆಡೆ ಇಂತಹ 100 ಬೋಗಿ ಬೋಗಿ ಕ್ಯಾಂಟೀನ್‌ ಆರಂಭಿಸಲು ಯೋಜಿಸಲಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ನಿಲ್ದಾಣಗಳತ್ತಲೇ ಗಮನ ಹರಿಸಲಾಗುವುದು. ಕ್ಯಾಟರಿಂಗ್‌ ನಲ್ಲಿ ಯುವ ಉದ್ಯಮಿ ಪ್ರಶಸ್ತಿ, 2016ರಲ್ಲಿ ಉಪ ರಾಷ್ಟ್ರಪತಿ ಪದಕ ಪಡೆದಿರುವೆ.
ಇಸ್ರಾರ್‌ ಮಂಗಳೂರು, ಮರಿಹಾ ಕಮ್ಯುನಿಕೇಶನ್‌ ಎಂಡಿ, ಹುಬ್ಬಳ್ಳಿ

ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ದಿನದ 24 ತಾಸು ತಿಂಡಿ-ತಿನಿಸು, ಆಹಾರ ದೊರಕಬೇಕೆಂಬ ಉದ್ದೇಶ ಹಾಗೂ ಜನರಿಗೆ ಅನುಕೂಲವಾಗಲೆಂದು ನಿಲ್ದಾಣದ ಆವರಣದಲ್ಲಿ ಕ್ಯಾಂಟೀನ್‌ ಆರಂಭಿಸಲು ಖಾಸಗಿ ಕಂಪನಿಯವರಿಂದ ಇ-ಟೆಂಡರ್‌ ಆಹ್ವಾನಿಸಲಾಗಿತ್ತು. ಹುಬ್ಬಳ್ಳಿಯಲ್ಲಿ ಮರಿಹಾ ಕಮ್ಯುನಿಕೇಶನ್‌ದವರಿಗೆ ರೈಲಿನ ಹಳೆಯ ಐಸಿಎಫ್‌ (ಇಂಟಿಗ್ರೆಲ್‌ ಕೋಚ್‌ ಫ್ಯಾಕ್ಟರಿ) ಬೋಗಿ ಮತ್ತು ನಿಲ್ದಾಣದ ಮುಂಭಾಗದಲ್ಲಿ 300 ಚದುರ ಮೀಟರ್‌ ಸ್ಥಳವನ್ನು ವಾರ್ಷಿಕ ಲೆಸನ್ಸ್‌ ಫೀ 20ಲಕ್ಷ ರೂ.ದಂತೆ ಐದು ವರ್ಷಗಳ ಕಾಲ ಗುತ್ತಿಗೆ ನೀಡಲಾಗಿದೆ. ಬೋಗಿ ಸ್ಥಳಾಂತರ ಮತ್ತು ಅದರ ಅಭಿವೃದ್ಧಿ ಅವರೇ ಮಾಡಿಕೊಂಡಿದ್ದಾರೆ. ಗುತ್ತಿಗೆಯ ಅವಧಿ ಪೂರ್ಣಗೊಂಡ ನಂತರ ಯಥಾವತ್ತಾಗಿ ಇಲಾಖೆಗೆ ಬಿಟ್ಟು ಕೊಡಬೇಕಾಗುತ್ತದೆ. ಇದೇ ರೀತಿ ಹೊಸಪೇಟೆ ಮತ್ತು ಬೆಳಗಾವಿ ನಿಲ್ದಾಣದಲ್ಲೂ ಕ್ಯಾಂಟೀನ್‌ ಆರಂಭಿಸಲು ಇ-ಟೆಂಡರ್‌ ಕರೆಯಲಾಗಿದೆ. ಹೊಸಪೇಟೆಯ ಟೆಂಡರ್‌ ಹಂಚಿಕೆ ಆಗಿದೆ.
ಎಸ್‌. ಹರೀತಾ, ನೈಋತ್ಯ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕಿ

ಗದಗ ರಸ್ತೆಯ ರೈಲ್ವೆ ಕೇಂದ್ರ ಆಸ್ಪತ್ರೆ ಎದುರು ರೈಲ್ವೆ ಇಲಾಖೆ ನಿರ್ಮಿಸಿರುವ ರೈಲ್ವೆ
ಮ್ಯೂಸಿಯಂ(ವಸ್ತು ಸಂಗ್ರಹಾಲಯ)ದಲ್ಲೂ ರೈಲಿನ ಬೋಗಿಯಲ್ಲೂ ಐಷಾರಾಮಿ ಕ್ಯಾಂಟೀನ್‌ ತೆರೆಯಲಾಗಿತ್ತು. ಆದರೆ ಅಲ್ಲಿಗೆ ಬರುವ ಗ್ರಾಹಕರ ಸಂಖ್ಯೆ ವಿರಳವಾಗಿದ್ದರಿಂದ ಅದರ ನಿರ್ವಹಣೆ ಅಷ್ಟಕಷ್ಟೆ ಆಗಿದೆ.

*ಶಿವಶಂಕರ ಕಂಠಿ

ಟಾಪ್ ನ್ಯೂಸ್

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Madhya Pradesh: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Tragic: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನವ ವಿವಾಹಿತರು ಸೇರಿ ನಾಲ್ವರು ಸಜೀವ ದಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

jagadish shettar

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

Santosh Lad

Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ

Dharwad: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

Dharwad: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

Hubli: ಪಿಎಚ್‌ಸಿಗಳಲ್ಲೇ “ತಾಯ್ತನ ಭಾಗ್ಯ’ ತರಬೇತಿ-ಐವಿಎಫ್‌ ಕೇಂದ್ರದ ಮಹತ್ವದ ಹೆಜ್ಜೆ

Hubli: ಪಿಎಚ್‌ಸಿಗಳಲ್ಲೇ “ತಾಯ್ತನ ಭಾಗ್ಯ’ ತರಬೇತಿ-ಐವಿಎಫ್‌ ಕೇಂದ್ರದ ಮಹತ್ವದ ಹೆಜ್ಜೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ಬರ್ತ್‌ಡೇ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌

ತಾಂತ್ರಿಕ ವರದಿ ಆಧಾರದಲ್ಲಿ ಬಾಡಿಗೆ ಕಟ್ಟಡಕ್ಕೆ ಶಾಲೆ ಸ್ಥಳಾಂತರ

ತಾಂತ್ರಿಕ ವರದಿ ಆಧಾರದಲ್ಲಿ ಬಾಡಿಗೆ ಕಟ್ಟಡಕ್ಕೆ ಶಾಲೆ ಸ್ಥಳಾಂತರ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino