
ಉಗ್ರ ಹಫೀಜ್ ಗೆ ಹಣಕಾಸು ನೆರವು ಪ್ರಕರಣ; 2 ಕೋಟಿ ಲಂಚ ಕೇಳಿದ್ದ 3 NIA ಅಧಿಕಾರಿಗಳು ವರ್ಗ
Team Udayavani, Aug 20, 2019, 6:22 PM IST

ನವದೆಹಲಿ:ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ಉಗ್ರಗಾಮಿ ಚಟುವಟಿಕೆಗೆ ಹಣಕಾಸು ನೆರವು ನೀಡಿದ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೊಬ್ಬರ ಹೆಸರನ್ನು ದಾಖಲಿಸದೇ ಇರಲು 2 ಕೋಟಿ ರೂಪಾಯಿ ಲಂಚ ಕೇಳಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಮೂವರು ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು ಕಳುಹಿಸುತ್ತಿದ್ದ ಹಣಕಾಸು ನೆರವಿನ ಬಗ್ಗೆ ಎನ್ ಐಎ ತನಿಖೆ ನಡೆಸುತ್ತಿದ್ದು, ಈ ಮೂವರು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯನ್ನು ತನಿಖೆಗೆ ನೇಮಕ ಮಾಡಲಾಗಿತ್ತು.
ಮೇಲ್ನೋಟಕ್ಕೆ ಆರೋಪ ಸಾಬೀತಾಗಿದ್ದು, ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬ ನಿಟ್ಟಿನಲ್ಲಿ ಎನ್ ಐಎ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಎನ್ ಐಎ ವಕ್ತಾರ ಐಎಎನ್ ಎಸ್ ಗೆ ತಿಳಿಸಿದ್ದಾರೆ. ಉತ್ತರ ನವದೆಹಲಿಯಲ್ಲಿರುವ ಉದ್ಯಮಿಯ ಮನೆಯ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಪ್ರಕರಣದಲ್ಲಿ ಹೆಸರನ್ನು ಮುಚ್ಚಿಡಲು 2 ಕೋಟಿ ರೂಪಾಯಿ ಲಂಚ ಕೇಳಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಸಿಗದಂತೆ ಹುನ್ನಾರ: ಕಿಮ್ಮನೆ ಆರೋಪ
MUST WATCH
ಹೊಸ ಸೇರ್ಪಡೆ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?