Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ
ವಾಹನಗಳನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
Team Udayavani, Jun 1, 2023, 12:30 PM IST
ಉತ್ತರಾಖಂಡ್: ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ರಸ್ತೆಯ ಭಾಗ ಕೊಚ್ಚಿಕೊಂಡು ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿರುವ ಕಾರಣ ಸುಮಾರು 300ಕ್ಕೂ ಅಧಿಕ ಪ್ರಯಾಣಿಕರು ದಾರಿ ಮಧ್ಯೆ ಸಿಲುಕಿಕೊಂಡಿರುವ ಘಟನೆ ಉತ್ತರಾಖಂಡ್ ನ ಪಿಥೋರಾಗಢ್ ನಲ್ಲಿ ಗುರುವಾರ (ಜೂನ್ 01) ನಡೆದಿದೆ.
ಇದನ್ನೂ ಓದಿ:BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್ ಭೇಟಿ; ಟ್ರೋಲ್ ಗಳಿಗೆ ಪ್ರತಿಕ್ರಿಯಿಸಿದ ನಟಿ
ಲಖನ್ ಪುರ್ ಸಮೀಪದ ಧಾರ್ಚುಲಾದಿಂದ 45 ಕಿಲೋ ಮೀಟರ್ ಎತ್ತರದ ಲಿಪುಲೇಖ್ -ತವಾಘಾಟ್ ನ ರಸ್ತೆ ಸುಮಾರು 100 ಮೀಟರ್ ನಷ್ಟು ಭೂ ಕುಸಿತದಿಂದ ಕುಸಿದು ಹೋಗಿದ್ದು, ಇದರಿಂದಾಗಿ ಧಾರ್ಚುಲಾ ಮತ್ತು ಗುಂಜಿ ಪ್ರದೇಶದ ನಡುವೆ ಸುಮಾರು 300 ಪ್ರಯಾಣಿಕರು ಪರದಾಡುವಂತಾಗಿದೆ ಎಂದು ವರದಿ ವಿವರಿಸಿದೆ.
ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಭಾರೀ ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಎರಡು ದಿನಗಳ ಕಾರ್ಯಾಚರಣೆ ನಂತರ ಸಂಚಾರ ವ್ಯವಸ್ಥೆ ಸುಗಮವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.
ಅಷ್ಟೇ ಅಲ್ಲ ರಾಜ್ಯದ ಅಲ್ಮೋರಾ, ಬಾಗೇಶ್ವರ್, ಚಮೋಲಿ, ಚಂಪಾವತ್, ಡೆಹ್ರಾಡೂನ್, ಗರ್ವಾಲ್, ಹರ್ದ್ವಾರ್, ನೈನಿತಾಲ್, ಪಿಥೋರಾಗಢ್, ರುದ್ರಪ್ರಯಾಗ್, ತೆಹ್ರಿ ಗರ್ವಾಲ್, ಉದಮ್ ಸಿಂಗ್ ನಗರ್ ಮತ್ತು ಉತ್ತರಕಾಶಿ ಜಿಲ್ಲೆಗಳಲ್ಲಿ ಧೂಳಿನ ಬಿರುಗಾಳಿ ಮತ್ತು ಗುಡುಗ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಯಾತ್ರಾರ್ಥಿಗಳು ಸುರಕ್ಷಿತ ಸ್ಥಳದಲ್ಲಿ ವಾಸ್ತವ್ಯ ಹೂಡಬೇಕು ಎಂದು ಮನವಿ ಮಾಡಿಕೊಂಡಿರುವ ಪೊಲೀಸರು, ಭೂಕುಸಿತ ಸಂಭವಿಸುತ್ತಿರುವುದರಿಂದ ಅನಗತ್ಯ ಪ್ರಯಾಣ ಬೇಡ, ವಾಹನಗಳನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸುವಂತೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?